Homeಮುಖಪುಟಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

ಉತ್ತರಪ್ರದೇಶ; ಮುಸ್ಲಿಂ ಬಾಲಕನ ಥಳಿಸಿ ಕೊಲೆ; ಐವರು ಪೊಲೀಸರ ಮೇಲೆ ಎಫ್ ಐಆರ್

- Advertisement -
ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ  ಫ್ಯಾಕ್ಟರಿಯಿಂದ  ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ  ನ್ಯಾಯಾಲಯದ ಆದೇಶದ ಮೇರೆಗೆ  ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್‌ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್‌ಸ್ಟೆಬಲ್‌ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ  ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ  ಮಗನ ಮೇಲೆ  ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್‌ಐಆರ್  ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ  ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್‌ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು.  ಗ್ರಾಮದ ಮುಖ್ಯಸ್ಥ ಪೋನ್  ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ.  ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ  ವೀಡಿಯೊವನ್ನು ನ್ಯಾಯಾಲಯಕ್ಕೆ  ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ  ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್‌ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್‌ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...