ಉತ್ತರಪ್ರದೇಶದ ಬರೇಲಿಯಲ್ಲಿ ಮಾಂಸದ ಫ್ಯಾಕ್ಟರಿಯಿಂದ ಮನೆಗೆ ಬರುವಾಗ 17 ವರ್ಷದ ಬಾಲಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಥಳಿಸಿ ಕೊಲೆ ಮಾಡಿದ ಆರೋಪದ ಮೇಲೆ ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
17 ವರ್ಷದ ಅರ್ಕನ್ ಅಲಿ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ ಎಂದು ಬರೇಲಿ ಪೊಲೀಸರು ಹೇಳಿಕೊಂಡಿದ್ದರು. ಆದರೆ ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಇದೀಗ ನ್ಯಾಯಾಲಯದ ಆದೇಶದ ಮೇರೆಗೆ ಆ.17ರಂದು ಬರೇಲಿಯ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ತಂದೆ ಪಪ್ಪು ಖುರೇಷಿ ಅವರ ದೂರಿನ ಮೇರೆಗೆ ಬಿತ್ರಿ ಚೈನ್ಪುರ ಠಾಣಾಧಿಕಾರಿ ಅಶ್ವಿನಿ ಕುಮಾರ್ ಚೌಬೆ, ಸಬ್ ಇನ್ಸ್ಪೆಕ್ಟರ್ ಧರ್ಮೇಂದ್ರ ಕುಮಾರ್, ಕಾನ್ಸ್ಟೆಬಲ್ಗಳಾದ ರಾಜೇಶ್, ವಿಪಿನ್ ಕಂಡ್ವಾಲ್ ಮತ್ತು ಹೋಮ್ ಗಾರ್ಡ್ ವೀರಪಾಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮೇಲೆ ನರಹತ್ಯೆ, ಸುಲಿಗೆ, ಕ್ರಿಮಿನಲ್ ಪಿತೂರಿ, ದರೋಡೆ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರು ತನ್ನ ಮಗನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಲ್ಲದೆ, ಆತನಿಂದ 30,400 ರೂಪಾಯಿ ದೋಚಿದ್ದಾರೆ ಎಂದು ಪಪ್ಪು ಖುರೇಷಿ ಆರೋಪಿಸಿದ್ದಾರೆ.
ಎಪ್ರಿಲ್ 17 ರಂದು ಅರ್ಕಾನ್ ಅವರು ಎಮ್ಮೆ ಸಾಗಿಸಿದ ಹಣವನ್ನು ಸಂಗ್ರಹಿಸಲು ಮಾರಿಯಾ ಫ್ರೋಜನ್ ಮಾಂಸದ ಕಾರ್ಖಾನೆಗೆ ಹೋದಾಗ ಈ ಘಟನೆ ನಡೆದಿದೆ. ಅರ್ಕಾನ್ ಗೆ ತಂದೆ ಖುರೇಷಿ 11.30 ರವರೆಗೆ ಕಾಯುತ್ತಾ ಕುಳಿತಿದ್ದರು. ಬಳಿಕ ಕರೆ ಮಾಡಿದಾಗ, ಆತ ಹಣ ತೆಗೆದುಕೊಂಡಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದ. ಆದರೆ ಮತ್ತೆ 11:45 ಕ್ಕೆ ನನಗೆ ಮಗನ ಫೋನ್ ನಿಂದ ಕರೆ ಬಂದಿದೆ. ಆಗ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡ ವ್ಯಕ್ತಿ 50,000 ರೂಪಾಯಿಯೊಂದಿಗೆ ಬೇಗ ಸ್ಥಳಕ್ಕೆ ತಲುಪುವಂತೆ ಖುರೇಷಿಗೆ ಕೇಳಿಕೊಂಡಿದ್ದಾನೆ . ಇಲ್ಲವಾದರೆ ಮಗನ ಮೇಲೆ ಗೋಹತ್ಯೆಯ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಸಿದ್ದರು ಎಂದು ಎಫ್ಐಆರ್ ನಲ್ಲಿ ಹೇಳಲಾಗಿದೆ.
ಇದರಿಂದ ಭಯಗೊಂಡ ಖುರೇಷಿ ಸ್ಥಳೀಯರ ಜೊತೆ ಬರೇಲಿಯ ಕಂಟೋನ್ಮೆಂಟ್ ಪ್ರದೇಶದ ಬಿಲಾಲ್ ಮಸೀದಿ ಪ್ರದೇಶಕ್ಕೆ ಹೋಗಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ಗಳು ಮತ್ತು ಹೋಮ್ ಗಾರ್ಡ್ ತನ್ನ ಮಗನನ್ನು ಅಮಾನುಷವಾಗಿ ಥಳಿಸುವುದನ್ನು ನಾನು ನೋಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ.
ಮಗ ರಕ್ತದ ಮಡುವಿನಲ್ಲಿ ನೆಲದ ಮೇಲೆ ಮಲಗಿದ್ದ. ಸ್ಥಳದಲ್ಲಿ ಬಿಳಿ ಕಾರು ಮತ್ತು ಬೈಕ್ ನಿಂತಿತ್ತು. ಗ್ರಾಮದ ಮುಖ್ಯಸ್ಥ ಪೋನ್ ಕರೆ ಮಾಡಿದ ನಂತರ SHO ಚೌಬೆ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅವರು ಎಸ್ ಎಚ್ ಒ ಪೊಲೀಸರನ್ನು ಸಮರ್ಥಿಸಿಕೊಂಡಿದ್ದಾರೆ. ವಾದಿಸಿದರೆ ಗ್ರಾಮಕ್ಕೆ ಬೆಂಕಿ ಹಚ್ಚುವುದಾಗಿ ಹಾಗೂ ಶೂಟ್ ಮಾಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೇ 4 ರಂದು ಸ್ಥಳೀಯ ನ್ಯಾಯಾಲಯದಲ್ಲಿ CrPC 156 (3) ಅಡಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಖುರೇಷಿ ಅವರು ಸ್ಥಳೀಯರು ಚಿತ್ರೀಕರಿಸಿದ ವೀಡಿಯೊವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು ಮತ್ತು ಪೊಲೀಸ್ ಅಧಿಕಾರಿಯು ಅವರಿಗೆ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು.
ಬಾಲಕ ತಲೆಗೆ ಆದ ಗಾಯದಿಂದ ಮೃತಪಟ್ಟಿದ್ದಾನೆಂದು ಖುರೇಷಿ ಹೇಳಿದ್ದು, ಗಾಯದ ನಿಜವಾದ ಸ್ವರೂಪ ಅಥವಾ ನಿಖರವಾದ ಕಾರಣದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ.
ಮರಣೊತ್ತರ ಪರೀಕ್ಷೆ ವರದಿಯು ತನ್ನ ಮಗನ ದೇಹದಲ್ಲಿ “16 ಗಾಯಗಳು” ಇದೆ ಎಂದು ತೋರಿಸಿದೆ ಎಂದು ಖುರೇಷಿ ಹೇಳಿದರು. ಆದರೆ, ಬರೇಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಇನ್ಸ್ಪೆಕ್ಟರ್ ಜನರಲ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಬರೇಲಿಯ ಉನ್ನತ ಅಧಿಕಾರಿಗಳಿಗೆ ಲಿಖಿತ ದೂರುಗಳನ್ನು ಸಲ್ಲಿಸಿದ್ದರೂ, ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಿಸಿರಲಿಲ್ಲ ಎಂದು ಅವರು ಹೇಳಿದರು.
ಆದರೆ ಸ್ಥಳದಲ್ಲಿ ಪೊಲೀಸ್ ತಂಡದ ಮೇಲೆ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತನ್ನ ಮತ್ತು ಇತರ ಗ್ರಾಮಸ್ಥರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...
ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...
ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್ಲೈನ್ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...
ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ.
28 ವರ್ಷ ವಯಸ್ಸಿನ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...
ಸುಪ್ರೀಂ ಕೋರ್ಟ್ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...
ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್ಆರ್ಟಿಸಿ) ಬಸ್ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...
ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್ಪಾತ್ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...
ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...