Homeಮುಖಪುಟಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

ಮರಳುಗಾಡಿನಲ್ಲಿ ಬಾಯಾರಿಕೆಗೆ ಬಲಿಯಾದ 5 ವರ್ಷದ ಬಾಲಕಿ

- Advertisement -
- Advertisement -

ಬಾಯಾರಿಕೆಗೆ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯ ರಾಣಿವಾಡಾದಲ್ಲಿ ಬಿಸಿ ಮರಳಿನ ದಿಬ್ಬಗಳ ಮಧ್ಯದಲ್ಲಿ ನಡೆದಿದೆ. ಮೃತ ಬಾಲಕಿ ಶವದ ಪಕ್ಕದಲ್ಲೇ ಅಜ್ಜಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವ ದೃಶ್ಯ ದೇಶಾದ್ಯಂತ ಜನರ ಮನಕಲಕಿದೆ.

ಮೃತ ಬಾಲಕಿಯನ್ನು ಮಂಜು ಎಂದು, ಅಜ್ಜಿಯನ್ನು ಸುಖಿ ಎಂದು ಎಂದು ಗುರುತಿಸಲಾಗಿದೆ. ನಿರ್ಜಲೀಕರಣದಿಂದಾಗಿ (ಡಿಹೈಡ್ರೇಷನ್) ಮಗುವಿನ ಸಾವು ಸಂಭವಿಸಿದೆ ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹತ್ತು ಕಿಲೋಮೀಟರ್ ದೂರದ ಹಳ್ಳಿಯೊಂದರಲ್ಲಿರುವ ತನ್ನ ಅಜ್ಜಿಯ ಸಹೋದರಿಯನ್ನು ಭೇಟಿಯಾಗಲು ಐದು ವರ್ಷದ ಬಾಲಕಿ ತನ್ನ ಅಜ್ಜಿಯೊಂದಿಗೆ ಕಾಲ್ನಡಿಗೆಯಲ್ಲಿ ಹೊರಟಿದ್ದಳು. ತೀವ್ರವಾದ ಬಿಸಿಲಿನ ಶಾಖ ಮತ್ತು ತೀವ್ರತೆ ಕಾರಣದಿಂದ ಅಜ್ಜಿ ಮತ್ತು ಮೊಮ್ಮಗಳು ಸುಸ್ತಾಗಿದ್ದಾರೆ. ಬಾಯಾರಿಕೆ ನೀಗಿಸಲು ಆಗದ ಕಾರಣ ಬಾಲಕಿ ಸಾವಿಗೀಡಾಗಿದ್ದಾಳೆ. ಅಜ್ಜಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವೈದ್ಯಕೀಯ ಸಂಘದ ನೋಟಿಸ್‌ ಅಪೂರ್ಣ ಮಾಹಿತಿ ಹೊಂದಿದೆ: ಬಾಬಾ ರಾಮ್‌ದೇವ್

ಅಜ್ಜಿ ಮತ್ತು ಮೊಮ್ಮಗಳನ್ನು ಕಂಡ ಒಬ್ಬ ಕುರಿಗಾಹಿ ಸ್ಥಳೀಯ ಗ್ರಾಮದ ಮುಖ್ಯಸ್ಥರಿಗೆ ತಿಳಿಸಿದ್ದಾರೆ. ಅಷ್ಟರಲ್ಲಿ ವೃದ್ಧೆ ಕೂಡ ಪ್ರಜ್ಞೆ ತಪ್ಪಿದ್ದರು. ನಂತರ ಗ್ರಾಮಸ್ಥರು ಬಂದು ನೀರು ಕುಡಿಸಿದಾಗ ಅಜ್ಜಿಗೆ ಸ್ವಲ್ಪ ಪ್ರಜ್ಞೆ ಬಂದಿದೆ.
ಅಜ್ಜಿ ನಿರ್ಜಲೀಕರಣದಿಂದ ಬಳಲುತ್ತಿದ್ದರು ಮತ್ತು ಮಗುವಿನ ಸಾವಿಗೂ ನಿರ್ಜಲೀಕರಣವೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಅಜ್ಜಿ ಮತ್ತು ಮೊಮ್ಮಗಳು ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಿರಲಿಲ್ಲ. ಬಿಸಿಲಿನ ತಾಪಕ್ಕೆ ತೀವ್ರ ಬಾಯಾರಿಕೆಯಾಗಿ ನಿರ್ಜಲೀಕರಣವಾಗಿದೆ’ ಎಂದು ಸ್ಥಳೀಯ ಪೊಲೀಸ್ ಠಾಣೆ ತನಿಖಾಧಿಕಾರಿ ಪದ್ಮರಾಮ್ ರಾಣಾ ಹೇಳಿದರು.
ಸದ್ಯ ವೃದ್ಧೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎಂದು ಆಡಳಿತ ತಿಳಿಸಿದೆ.

“ಮಗುವಿನ ತಾಯಿ ಎರಡನೇ ಮದುವೆಯಾಗಲು ಕೆಲವು ವರ್ಷಗಳ ಹಿಂದೆ ಕುಟುಂಬವನ್ನು ತೊರೆದಿದ್ದರು. ಮಗು ತನ್ನ ಅಜ್ಜಿಯೊಂದಿಗೆ ಏಕಾಂಗಿಯಾಗಿ ವಾಸವಿತ್ತು. ವೃದ್ಧೆ ಸುಖಿ (ಆಹಾರ ಭದ್ರತಾ ಕಾಯ್ದೆ) ಫಲಾನುಭವಿ. ಆದರೆ ಈಗ ಕೆಲವು ತಿಂಗಳುಗಳಿಂದ ಉಚಿತ ಪಡಿತರವನ್ನು ತೆಗೆದುಕೊಂಡಿಲ್ಲ” ಎಂದು ಜಿಲ್ಲಾಧಿಕಾರಿ ನಮ್ರತಾ ಹೇಳಿದ್ದಾರೆ.

ವೃದ್ಧೆ ಕೆಲವೊಮ್ಮೆ ಆಹಾರಕ್ಕಾಗಿ ಬೇಡುತ್ತಿದ್ದರು. ಕೆಲವು ಸಮಯಗಳಲ್ಲಿ ನೆರೆಹೊರೆಯವರು ಆಹಾರ ಒದಗಿಸುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿಯ ಮರಣೋತ್ತರ ಪರೀಕ್ಷ ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...