ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್ ಬ್ಯಾನ್ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.
2016 ರ ನವೆಂಬರ್ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.
ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.
ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.
ಗುರ್ಗಾಂವ್ನ ಬ್ಯಾಂಕ್ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HTಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರುತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು
ಹಣ ಬದಲಾವಣೆಗೆ ಬಂದ ವೃದ್ದೆ
ವಿಡಿಯೊಗಳು
ಅಮಾಯಕ ಜನರ ಮೇಲೆ ಲಾಠಿ ಚಾರ್ಜ್
ಬ್ಯಾಂಕಗಳಲ್ಲಿನ ಪರಿಸ್ಥಿತಿ
ಬ್ಯಾಂಕಿನ ಮುಂದೆ ಜನರ ಸರತಿ ಸಾಲು
2016 ನವೆಂಬರ್ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್ ಬ್ಯಾನ್ ಆಗಿ ಆರು ವರ್ಷಗಳಾಯಿತು!.
ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ
ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...
ಕರ್ತವ್ಯದಲ್ಲಿರುವಾಗ ಸಬ್-ಇನ್ಸ್ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.
ಮೇಲಧಿಕಾರಿಗಳು...
ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...
ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ.
ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...
ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....
ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...
ಜೆಫ್ರಿ ಎಪ್ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...
ಎಕ್ಸ್ಪ್ರೆಸ್ ರೈಲಿನ ಕೋಚ್ನ ಪವರ್ ಸಾಕೆಟ್ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...
ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್ಸ್ಟೆಬಲ್ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ.
ಆದರೆ ಯಾವುದೇ ಪ್ರಕರಣವೂ...
ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ