ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್ ಬ್ಯಾನ್ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.
2016 ರ ನವೆಂಬರ್ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ನೋಟ್ ಬ್ಯಾನ್ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?
ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.
ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.
ವಿಡಿಯೊಗಳು
ಅಮಾಯಕ ಜನರ ಮೇಲೆ ಲಾಠಿ ಚಾರ್ಜ್
ಬ್ಯಾಂಕಗಳಲ್ಲಿನ ಪರಿಸ್ಥಿತಿ
ಬ್ಯಾಂಕಿನ ಮುಂದೆ ಜನರ ಸರತಿ ಸಾಲು
2016 ನವೆಂಬರ್ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್ ಬ್ಯಾನ್ ಆಗಿ ಆರು ವರ್ಷಗಳಾಯಿತು!.
ಇದನ್ನೂ ಓದಿ: ಸ್ವಿಸ್ ಬ್ಯಾಂಕ್: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!
ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ