Homeಮುಖಪುಟನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

- Advertisement -
- Advertisement -

ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್‌ ಬ್ಯಾನ್‌ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.

2016 ರ ನವೆಂಬರ್‌ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?

ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.

ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.

ಗುರ್‌‌ಗಾಂವ್‌ನ ಬ್ಯಾಂಕ್‌ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HT
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.
Image
ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.
Image
ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆ
Image
ತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರು
ತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು

 

http-%2f%2fo-aolcdn-com%2fhss%2fstorage%2fmidas%2f32d4793915fcf87be41c450381596fff%2f204583876%2f623013552

Image
ಹಣ ಬದಲಾವಣೆಗೆ ಬಂದ ವೃದ್ದೆ

ವಿಡಿಯೊಗಳು


ಅಮಾಯಕ ಜನರ ಮೇಲೆ ಲಾಠಿ ಚಾರ್ಜ್


ಬ್ಯಾಂಕಗಳಲ್ಲಿನ ಪರಿಸ್ಥಿತಿ


ಬ್ಯಾಂಕಿನ ಮುಂದೆ ಜನರ ಸರತಿ ಸಾಲು

2016 ನವೆಂಬರ್‌ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್‌ ಬ್ಯಾನ್ ಆಗಿ ಆರು ವರ್ಷಗಳಾಯಿತು!.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...