Homeಎಕಾನಮಿ50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು

50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು

- Advertisement -
- Advertisement -

ಉದ್ದೇಶಪೂರ್ವಕ ಸುಸ್ತಿದಾರರ ಕೆಟ್ಟಸಾಲದ Write Off ಕುರಿತಾಗಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಮಾಡಿದ ಆರೋಪಗಳಿಗೆ ಮಂಗಳವಾರ ತಡರಾತ್ರಿ ಸರಣಿ ಟ್ವೀಟ್‌ಗಳ ಮೂಲಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ ನೀಡುವ ಪ್ರಯತ್ನ ನಡೆಸಿದ್ದಾರೆ.

ರಾಹುಲ್‌ ಗಾಂಧಿ “ಜನರನ್ನು ಲಜ್ಜೆಗೆಟ್ಟ ರೀತಿಯಲ್ಲಿ ದಾರಿ ತಪ್ಪಿಸಿದ್ದಾರೆ” ಎಂದು ಕರೆದಿರುವ ನಿರ್ಮಲಾ ಸೀತಾರಾಮನ್‌ ಈ ಕುರಿತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಬಳಿ ಸಮಾಲೋಚನೆ ನಡೆಸಿ ಎಂಬ ಸಲಹೆ ನೀಡಿದ್ದಾರೆ.

ಈ ಬಗ್ಗೆ 13 ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಅವರು ಜನರನ್ನು ಲಜ್ಜೆಗೆಟ್ಟ ರೀತಿಯಲ್ಲಿ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ. ಸಂಬಂಧಪಡದ ವಿಷಯಗಳನ್ನು ಎಳೆತಂದು ದೊಡ್ಡ ಚರ್ಚಾವಿಷಯವನ್ನಾಗಿ ಮಾಡಿದ್ದಾರೆ, ಇದರಲ್ಲಿ ಕಾಂಗ್ರೆಸ್ ಪಳಗಿದೆ ಎಂದು ಅವರು ಟೀಕಿಸಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬ್ಯಾಂಕುಗಳಿಗೆ ಮೋಸ ಮಾಡಿದ ಆರೋಪದ 50 ಉದ್ದೇಶಪೂರ್ವಕ ಡೀಫಾಲ್ಟರ್‌ಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ರಾಹುಲ್ ಗಾಂಧಿ ಆಡಳಿತಾರೂಢ BJP ಬಿಜೆಪಿಯ ಮೇಲೆ ದಾಳಿ ನಡೆಸಿದ್ದು, ಆಡಳಿತ ಪಕ್ಷದ “ಸ್ನೇಹಿತರನ್ನು” ಒಳಗೊಂಡಿರುವ ಕಾರಣ ಸರ್ಕಾರ ಈ ಪಟ್ಟಿಯನ್ನು ಸಂಸತ್ತಿನಿಂದ ಮರೆಮಾಡಿದೆ ಎಂದು ನಿನ್ನೆ ಹೇಳಿದ್ದರು.

“ನಾನು ಸಂಸತ್ತಿನಲ್ಲಿ ಒಂದು ಸರಳ ಪ್ರಶ್ನೆಯನ್ನು ಕೇಳಿದೆ. 50 ದೊಡ್ಡ ಬ್ಯಾಂಕ್ ಹಗರಣಗಾರರ ಹೆಸರನ್ನು ಹೇಳಿ ಎಂದು. ಅದಕ್ಕೆ ಹಣಕಾಸು ಸಚಿವರು ಉತ್ತರಿಸಲು ನಿರಾಕರಿಸಿದರು. ಈಗ ಆರ್‌ಬಿಐ ನೀಡಿರುವ ಪಟ್ಟಿಯಿಲ್ಲಿ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಇತರ ಬಿಜೆಪಿ ಸ್ನೇಹಿತರ ಹೆಸರಿದೆ. ಅದಕ್ಕಾಗಿಯೇ ಅವರು ಸಂಸತ್ತಿನಿಂದ ಸತ್ಯ ಮರೆಮಾಚಿದ್ದಾರೆ” ಎಂದು ರಾಹು‌ಲ್‌ ಗಾಂಧಿ ವಿಡಿಯೋ ಒಂದನ್ನು ಟ್ವೀಟ್‌ ಮಾಡಿದ್ದರು.

ಇದಕ್ಕೆ ಉತ್ತರವಾಗಿ ಸೀತಾರಾಮನ್ ಅವರು 2009-10 ಮತ್ತು 2013-14ರ ನಡುವೆ ನಿಗದಿತ ಅವಧಿಯಲ್ಲಿ (ಯುಪಿಎ ಆಡಳಿತ) ವಾಣಿಜ್ಯ ಬ್ಯಾಂಕುಗಳು 1,45,226 ಕೋಟಿ ರೂ Write Off ಮಾಡಲಾಗಿತ್ತು ಎಂಬ ಅಂಶವನ್ನು ಬೆಳಕಿಗೆ ತಂದಿದ್ದಾರೆ.

ಆರ್‌ಬಿಐ ನಿಗದಿಪಡಿಸಿದ ನಾಲ್ಕು ವರ್ಷಗಳ ನಿಬಂಧನೆಗಳ ಪ್ರಕಾರ ಕಾರ್ಯನಿರ್ವಹಿಸದ ಸ್ವತ್ತುಗಳಿಗೆ ನಿಬಂಧನೆಗಳನ್ನು ಮಾಡಲಾಗಿದೆ. “ಪೂರ್ಣ ನಿಬಂಧನೆ ಮುಗಿದ ನಂತರ, ಬ್ಯಾಂಕುಗಳು ಸಂಪೂರ್ಣವಾಗಿ ಒದಗಿಸಿದ ಎನ್‌ಪಿಎಯನ್ನು ಬರೆದಿಡುತ್ತವೆ. ಆದರೆ ಸಾಲಗಾರನ ವಿರುದ್ಧ ವಸೂಲಿ ಪ್ರಯತ್ನ ಮುಂದುವರಿಸುತ್ತವೆ. ಯಾವುದೇ ಸಾಲವನ್ನು ಮನ್ನಾ ಮಾಡಲಾಗುವುದಿಲ್ಲ” ಎಂದು ಅವರು ಬರೆದಿದ್ದಾರೆ.

ಹಣವನ್ನು ಪಾವತಿಸುವ ಸಾಮರ್ಥ್ಯವನ್ನು ಹೊಂದಿದ್ದರೂ ಮರುಪಾವತಿ ಮಾಡದ, ಬ್ಯಾಂಕಿನ ಅನುಮತಿಯಿಲ್ಲದೆ ಸುರಕ್ಷಿತ ಸ್ವತ್ತುಗಳನ್ನು ವಿಲೇವಾರಿ ಮಾಡುವ ಆ ಡೀಫಾಲ್ಟರ್‌ಗಳನ್ನು ಉದ್ದೇಶಪೂರ್ವಕ ಡೀಫಾಲ್ಟರ್ ಎಂದು ವರ್ಗೀಕರಿಸಲಾಗಿದೆ. ಅಥವಾ  ಅವರು ಯುಪಿಎಯ ಫೋನ್ ಬ್ಯಾಂಕಿಂಗ್‌ನಿಂದ ಲಾಭ ಪಡೆದ ಉತ್ತಮ ಸಂಪರ್ಕಿತ ಪ್ರವರ್ತಕರು ಸೀತಾರಾಮನ್ ಬರೆದಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆರ್‌ಬಿಐ ಗರ್ವನರ್‌ ಆಗಿದ್ದ ರಘುರಾಮ್ ರಾಜನ್ ಅವರನ್ನು ಸಹ ಟ್ವೀಟ್‌ನಲ್ಲಿ  ಉಲ್ಲೇಖಿಸಿದ್ದಾರೆ.

“ರಘುರಾಮ್ ರಾಜನ್ ಅವರ ಮಾತುಗಳನ್ನು ನೆನಪಿಸಿಕೊಳ್ಳುವುದು ಉಪಯುಕ್ತ: 2006-2008ರ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ಕೆಟ್ಟ ಸಾಲಗಳು ಹುಟ್ಟಿಕೊಂಡಿವೆ … ಸಾಲಗಳನ್ನು ಡೀಫಾಲ್ಟ್ ಮಾಡಿದ ಇತಿಹಾಸ ಹೊಂದಿರುವ ಉತ್ತಮ ಸಂಪರ್ಕ ಹೊಂದಿದ ಪ್ರವರ್ತಕರಿಗೆ ಹಲವಾರು ಸಾಲಗಳನ್ನು ನೀಡಲಾಗಿದೆ. ಖಾಸಗಿ ವಲಯದ ಬ್ಯಾಂಕುಗಳು ಸಾಲ ನೀಡದೇ ಹೊರಬರುತ್ತಿರುವಾಗಲೂ ಸಾರ್ವಜನಿಕ ವಲಯದ ಬ್ಯಾಂಕುಗಳು ಆ ಹಣಕಾಸು ಪ್ರವರ್ತಕರಿಗೆ ಸಾಲ ಕೊಡುತ್ತಿದ್ದರು. ಸಾಲ ನೀಡುವ ಗುಣಮಟ್ಟದ ಬಗ್ಗೆ ಆರ್‌ಬಿಐ ಆಕ್ಷೇಪ ಎತ್ತಬಹುದಿತ್ತು” ಎಂದು ಅವರು ಹೇಳಿದ್ದಾರೆ.

ನಂತರ ವಿತ್ತ ಸಚಿವರು ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ವಿಜಯ್ ಮಲ್ಯ ಅವರ ಪ್ರಕರಣಗಳ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಈ ಉದ್ದೇಶಪೂರ್ವಕ ಡೀಫಾಲ್ಟರ್‌ಗಳನ್ನು ಒತ್ತಾಯಿಸುತ್ತಿದೆ ಎಂದು ಎಂ.ಎಸ್. ಸೀತಾರಾಮನ್ ಹೇಳಿದ್ದಾರೆ.

“ಒಟ್ಟು ಐವತ್ತು ಉದ್ದೇಶಪೂರ್ವಕ ಡೀಫಾಲ್ಟರ್‌ಗಳಿಗೆ ಸಂಬಂಧಿಸಿದ ಒಟ್ಟು ಹಣದ ಬಾಕಿ ಮತ್ತು ತಾಂತ್ರಿಕವಾಗಿ /ವಿವೇಕಯುತವಾಗಿ ಬರೆಯಲ್ಪಟ್ಟ ಮೊತ್ತದ ಬ್ಯಾಂಕ್‌ವಾರು ವಿವರಗಳನ್ನು 16.3.2020 ರಂದು ರಾಹುಲ್ ಗಾಂಧಿಯ ಲೋಕಸಭಾ ನಕ್ಷತ್ರ ಹಾಕಿದ ಪ್ರಶ್ನೆ * 305 ರ ಉತ್ತರಕ್ಕೆ ಅನೆಕ್ಸ್ ಆಗಿ ಒದಗಿಸಲಾಗಿದೆ”ಎಂದು ಅವರು ತಿಳಿಸಿದ್ದಾರೆ.

ವ್ಯವಸ್ಥೆಯನ್ನು ಸ್ವಚ್ಛಗೊಳಿಸುವಲ್ಲಿ ರಚನಾತ್ಮಕ ಪಾತ್ರ ವಹಿಸುವಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರು ಏಕೆ ವಿಫಲರಾಗಿದ್ದಾರೆ? “ಅಧಿಕಾರದಲ್ಲಿದ್ದಾಗಲೂ, ಪ್ರತಿಪಕ್ಷದಲ್ಲಿದ್ದಾಗಲೂ ಭ್ರಷ್ಟಾಚಾರವನ್ನು ತಡೆಯಲು ಕಾಂಗ್ರೆಸ್ ಯಾವುದೇ ಬದ್ಧತೆ ಅಥವಾ ಒಲವನ್ನು ತೋರಿಸಿಲ್ಲ” ಎಂದು ಅವರು ತಮ್ಮ ಸರಣಿ ಟ್ವೀಟ್‌ ಅನ್ನು ಮುಗಿಸಿದ್ದಾರೆ.


ಇದನ್ನೂ ಓದಿ: Write Off ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ – ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಆತ್ಮೀಯ ಗುಲಾಮರೇ ಹಾಗೂ ನನ್ನ ನೆಚ್ಚಿನ ಸೋಂಬೇರಿಗಳೇ..
    ತಾವು ದಯಮಾಡಿ ಎಲೆಗೂ ಮತ್ತು ಇನ್ನೊಂದಕ್ಕೂ??.. ಐ ಮೀನ್ ಸಾಲ ಮನ್ನಾ ಹಾಗೂ ಸಾಲ ರಿಟರ್ನ್ ಆಫ್ ಗೂ ಮೊದಲು ವ್ಯತ್ಯಾಸ ತಿಳಿದು ನಂತರ ಮಾತನಾಡಬೇಕಾಗಿ ವಿನಂತಿ

  2. ಇದೊಂದು ಟ್ವೀಟಿನ ಅನುವಾದ ಅಷ್ಟೇ. ಇದರಲ್ಲಿ ಯಾವ ವಿಶೇಷ ಇಲ್ಲ. ನಾನು ಗಮನಿಸಿದ ಕಳಪೆ ವರದಿ ಇದು.

  3. ಉದ್ಯಮಿಗಳ ಸಾಲ ರೈಟ್ ಅಫ್‌ ಮಾಡುವ ಸರಕಾರ ಬಡ ರೈತರ ಸಾಲವನ್ನು ರೈಟ್‌ ಅಪ್‌ ಮಾಡಲಿ

  4. ರೈತರ ಸಾಲವನ್ನು ರೈಟ್ ಅಫ್ ಮಾಡಲು ಏನೋ ತೊಂದರೆ ಇಲ್ವಲ್ಲ ನಿಮಗೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...