Homeಎಕಾನಮಿಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ -...

ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ – ರಾಹುಲ್

- Advertisement -
- Advertisement -

ಭಾರತ ಬಿಟ್ಟು ಪರಾರಿಯಾಗಿರು ಬೃಹತ್‌ ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ ಮಾಡಿದ್ದು, ಈ ವಿಚಾರವನ್ನು ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಸ್ನೇಹಿತರೇ ಉದ್ದೇಶಪೂರ್ವಕ ಸುಸ್ತಿದಾರರ (ಸಾಲ ತೀರಿಸದವರ) ಪಟ್ಟಿಯಲ್ಲಿರುವುದರಿಂದ ಆ ಪಟ್ಟಿಯನ್ನು ಲೋಕಸಭೆಯಲ್ಲಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತ್ತು ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

“ನಾನು ಸಂಸತ್ತಿನಲ್ಲಿ ಒಂದು ಸರಳ ಪ್ರಶ್ನೆಯನ್ನು ಕೇಳಿದೆ. 50 ದೊಡ್ಡ ಬ್ಯಾಂಕ್ ಹಗರಣಗಾರರ ಹೆಸರನ್ನು ಹೇಳಿ ಎಂದು. ಅದಕ್ಕೆ ಹಣಕಾಸು ಸಚಿವರು ಉತ್ತರಿಸಲು ನಿರಾಕರಿಸಿದರು. ಈಗ ಆರ್‌ಬಿಐ ನೀಡಿರುವ ಪಟ್ಟಿಯಿಲ್ಲಿ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಇತರ ಬಿಜೆಪಿ ಸ್ನೇಹಿತರ ಹೆಸರಿದೆ. ಅದಕ್ಕಾಗಿಯೇ ಅವರು ಸಂಸತ್ತಿನಿಂದ ಸತ್ಯ ಮರೆಮಾಚಿದ್ದಾರೆ” ಎಂದು ರಾಹು‌ಲ್‌ ಗಾಂಧಿ ವಿಡಿಯೋ ಒಂದನ್ನು ಟ್ವೀಟ್‌ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸಲ್ಲಿಸಿದ ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಗೆ ಆರ್‌ಬಿಐ 50 ಪ್ರಮುಖ ಉದ್ದೇಶಪೂರ್ವಕ ಡೀಫಾಲ್ಟರ್‌ಗಳ 68,607 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿರುವ ಮಾಹಿತಿ ನೀಡಿದೆ. ಆ ಮೂಲಕ ಭಾರತೀಯ ಬ್ಯಾಂಕ್‌ಗಳನ್ನು ವಂಚಿಸಿದ ಆರೋಪ ಇರುವವರ ಪರ ಕೇಂದ್ರ ಸರ್ಕಾರ ನಿಂತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ದೇಶಬಿಟ್ಟು ಪರಾರಿಯಾದ ಉದ್ಯಮಿಗಳಾದ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ವಿಜಯ್ ಮಲ್ಯ ಸೇರಿದಂತೆ 50 ಡೀಫಾಲ್ಟರ್‌ಗಳ 68,607 ಕೋಟಿ ರೂ.ಗಳ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು  ಮನ್ನಾ ಮಾಡಿದೆ. 2014 ರಿಂದ ಸೆಪ್ಟೆಂಬರ್ 2019 ರವರೆಗೆ ದೊಡ್ಡ ಬಂಡವಾಳಿಗರ 6.66 ಲಕ್ಷ ಕೋಟಿ ರೂ ಕೇಂದ್ರ ಸಾಲವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಲಾ ಅವರು ಆರ್‌ಟಿಐ ಉತ್ತರದ ಉನ್ನತ ಸಾಲಗಾರರ ಪಟ್ಟಿ ಬಿಡುಗಡೆ ಮಾಡಿ ಅವರ ಸಾಲ ಮನ್ನಾ ಏಕೆ ಮಾಡಲಾಗಿದೆ ಎಂಬ ಬಗ್ಗೆ ಪ್ರಧಾನಮಂತ್ರಿಯಿಂದ ಉತ್ತರಗಳನ್ನು ಬಯಸಿದ್ದೇವೆ ಎಂದು ಒತ್ತಾಯಿಸಿದ್ದಾರೆ.

“ಇದು ಮೋದಿ ಸರ್ಕಾರದ ಡ್ಯೂಪ್, ಮೋಸ ಮತ್ತು ನಿರ್ಗಮನ” ನೀತಿಯನ್ನು ಉತ್ತೇಜಿಸುವ ಒಂದು ಉತ್ತಮ ಪ್ರಕರಣವಾಗಿದೆ. ಇದನ್ನು ಇನ್ನು ಮುಂದೆ ಸ್ವೀಕರಿಸಲಾಗುವುದಿಲ್ಲ ಮತ್ತು ಪ್ರಧಾನಿ ಉತ್ತರಿಸಬೇಕಾಗಿದೆ “ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಇದು ಮೋದಿ ಸರ್ಕಾರದ ತಪ್ಪು ಗ್ರಹಿಕೆಯ ಆದ್ಯತೆಗಳು ಮತ್ತು ಅಪ್ರಾಮಾಣಿಕ ಉದ್ದೇಶಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಸುರ್ಜೆವಾಲಾ ಹೇಳಿದ್ದಾರೆ.

ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯು 10 ಲಕ್ಷ ಕೋಟಿಗಿಂತಲೂ ಹೆಚ್ಚು ಕೆಟ್ಟ ಸಾಲವನ್ನು ಎದುರಿಸುತ್ತಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಕಾನೂನು ಕ್ರಮದಿಂದ ಪಾರಾಗಲು ಶತಕೋಟ್ಯಾಧಿಪತಿಗಳು ದೇಶದಿಂದ ಪಲಾಯನ ಮಾಡಿದ ಘಟನೆಗಳು ಮತ್ತು ಹೆಚ್ಚಿನ ಆರ್ಥಿಕ ಹಾನಿಕಾರಕ ಘಟನೆಗಳ ನಂತರ ಈ ಕುರಿತು ತೀವ್ರ ಚರ್ಚೆ ನಡೆದಿದೆ.

ರಾಕ್ಷಸ ವ್ಯವಹಾರಗಳಿಗೆ ಮತ್ತು ಅವುಗಳ ಮಾಲೀಕರಿಗೆ ಬಿಜೆಪಿಯ ಸಾಮೀಪ್ಯವನ್ನು ಪ್ರತಿಪಕ್ಷಗಳು ಪ್ರಶ್ನಿಸಿದರೆ, 2014 ಕ್ಕಿಂತ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ಮೇಲಿನ ಹೆಚ್ಚಿನ ಹಗರಣಗಳನ್ನು ಸರ್ಕಾರ ಆರೋಪಿಸುತ್ತದೆ. ಇದು ಕೇವಲ ಅವರ ಹಗರಣಗಳನ್ನು ಮುಚ್ಚಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಸುಜೇವಾಲಾ ಹೇಳಿದ್ದಾರೆ.


ಇದನ್ನೂ ಓದಿ: 12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನನ್ನ ಒಂದು ನಿವೇದನೆ ಎನೆಂದರೆ ಕರ್ನಾಟಕದಲ್ಲಿ ವಾಸಿಸುವ “ಕುಳವ” ಜನಾಂಗದ (ಕೊರಮ, ಕೊರಚ ಮತ್ತು ಕೊರವರ) ಬಗ್ಗೆ ಬರೆಯಬೇಕೆಂದು ತಮ್ಮಲ್ಲಿ ನನ್ನ ಕಳಕಳಿ

  2. ವರ್ಣ, ಜಾತಿ, ಉಪಜಾತಿ ಇರುವುದು ಹಿಂದೂ ಧರ್ಮದಲ್ಲಿ. ಲಿಂಗಾಯತ ಧರ್ಮದಲ್ಲಿ ಜಾತಿ ಇಲ್ಲ. ಪಂಗಡಗಳು ಇವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ. 2A ಮೀಸಲಾತಿ ಇರುವುದು ಜಾತಿ ಆಧಾರಿತ.
    ಲಿಂಗಾಯತರು ಹಿಂದೂಗಳು ಅಲ್ಲವೇ ಅಲ್ಲ ಅಂದಮೇಲೆ ಅವರನ್ನು 2A ಗೆ ಹಾಕುವಂತೆ ಕೇಳುವುದು ಎಷ್ಟು ಸರಿ?
    ಈ ಬಗ್ಗೆ ಬರೆಯಿರಿ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...