Homeಎಕಾನಮಿಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ -...

ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ – ರಾಹುಲ್

- Advertisement -
- Advertisement -

ಭಾರತ ಬಿಟ್ಟು ಪರಾರಿಯಾಗಿರು ಬೃಹತ್‌ ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ ಮಾಡಿದ್ದು, ಈ ವಿಚಾರವನ್ನು ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಸ್ನೇಹಿತರೇ ಉದ್ದೇಶಪೂರ್ವಕ ಸುಸ್ತಿದಾರರ (ಸಾಲ ತೀರಿಸದವರ) ಪಟ್ಟಿಯಲ್ಲಿರುವುದರಿಂದ ಆ ಪಟ್ಟಿಯನ್ನು ಲೋಕಸಭೆಯಲ್ಲಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತ್ತು ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

“ನಾನು ಸಂಸತ್ತಿನಲ್ಲಿ ಒಂದು ಸರಳ ಪ್ರಶ್ನೆಯನ್ನು ಕೇಳಿದೆ. 50 ದೊಡ್ಡ ಬ್ಯಾಂಕ್ ಹಗರಣಗಾರರ ಹೆಸರನ್ನು ಹೇಳಿ ಎಂದು. ಅದಕ್ಕೆ ಹಣಕಾಸು ಸಚಿವರು ಉತ್ತರಿಸಲು ನಿರಾಕರಿಸಿದರು. ಈಗ ಆರ್‌ಬಿಐ ನೀಡಿರುವ ಪಟ್ಟಿಯಿಲ್ಲಿ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ಇತರ ಬಿಜೆಪಿ ಸ್ನೇಹಿತರ ಹೆಸರಿದೆ. ಅದಕ್ಕಾಗಿಯೇ ಅವರು ಸಂಸತ್ತಿನಿಂದ ಸತ್ಯ ಮರೆಮಾಚಿದ್ದಾರೆ” ಎಂದು ರಾಹು‌ಲ್‌ ಗಾಂಧಿ ವಿಡಿಯೋ ಒಂದನ್ನು ಟ್ವೀಟ್‌ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸಲ್ಲಿಸಿದ ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಗೆ ಆರ್‌ಬಿಐ 50 ಪ್ರಮುಖ ಉದ್ದೇಶಪೂರ್ವಕ ಡೀಫಾಲ್ಟರ್‌ಗಳ 68,607 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿರುವ ಮಾಹಿತಿ ನೀಡಿದೆ. ಆ ಮೂಲಕ ಭಾರತೀಯ ಬ್ಯಾಂಕ್‌ಗಳನ್ನು ವಂಚಿಸಿದ ಆರೋಪ ಇರುವವರ ಪರ ಕೇಂದ್ರ ಸರ್ಕಾರ ನಿಂತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ದೇಶಬಿಟ್ಟು ಪರಾರಿಯಾದ ಉದ್ಯಮಿಗಳಾದ ನೀರವ್ ಮೋದಿ, ಮೆಹುಲ್ ಚೋಕ್ಸಿ ಮತ್ತು ವಿಜಯ್ ಮಲ್ಯ ಸೇರಿದಂತೆ 50 ಡೀಫಾಲ್ಟರ್‌ಗಳ 68,607 ಕೋಟಿ ರೂ.ಗಳ ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು  ಮನ್ನಾ ಮಾಡಿದೆ. 2014 ರಿಂದ ಸೆಪ್ಟೆಂಬರ್ 2019 ರವರೆಗೆ ದೊಡ್ಡ ಬಂಡವಾಳಿಗರ 6.66 ಲಕ್ಷ ಕೋಟಿ ರೂ ಕೇಂದ್ರ ಸಾಲವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಲಾ ಅವರು ಆರ್‌ಟಿಐ ಉತ್ತರದ ಉನ್ನತ ಸಾಲಗಾರರ ಪಟ್ಟಿ ಬಿಡುಗಡೆ ಮಾಡಿ ಅವರ ಸಾಲ ಮನ್ನಾ ಏಕೆ ಮಾಡಲಾಗಿದೆ ಎಂಬ ಬಗ್ಗೆ ಪ್ರಧಾನಮಂತ್ರಿಯಿಂದ ಉತ್ತರಗಳನ್ನು ಬಯಸಿದ್ದೇವೆ ಎಂದು ಒತ್ತಾಯಿಸಿದ್ದಾರೆ.

“ಇದು ಮೋದಿ ಸರ್ಕಾರದ ಡ್ಯೂಪ್, ಮೋಸ ಮತ್ತು ನಿರ್ಗಮನ” ನೀತಿಯನ್ನು ಉತ್ತೇಜಿಸುವ ಒಂದು ಉತ್ತಮ ಪ್ರಕರಣವಾಗಿದೆ. ಇದನ್ನು ಇನ್ನು ಮುಂದೆ ಸ್ವೀಕರಿಸಲಾಗುವುದಿಲ್ಲ ಮತ್ತು ಪ್ರಧಾನಿ ಉತ್ತರಿಸಬೇಕಾಗಿದೆ “ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಇದು ಮೋದಿ ಸರ್ಕಾರದ ತಪ್ಪು ಗ್ರಹಿಕೆಯ ಆದ್ಯತೆಗಳು ಮತ್ತು ಅಪ್ರಾಮಾಣಿಕ ಉದ್ದೇಶಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಸುರ್ಜೆವಾಲಾ ಹೇಳಿದ್ದಾರೆ.

ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯು 10 ಲಕ್ಷ ಕೋಟಿಗಿಂತಲೂ ಹೆಚ್ಚು ಕೆಟ್ಟ ಸಾಲವನ್ನು ಎದುರಿಸುತ್ತಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಕಾನೂನು ಕ್ರಮದಿಂದ ಪಾರಾಗಲು ಶತಕೋಟ್ಯಾಧಿಪತಿಗಳು ದೇಶದಿಂದ ಪಲಾಯನ ಮಾಡಿದ ಘಟನೆಗಳು ಮತ್ತು ಹೆಚ್ಚಿನ ಆರ್ಥಿಕ ಹಾನಿಕಾರಕ ಘಟನೆಗಳ ನಂತರ ಈ ಕುರಿತು ತೀವ್ರ ಚರ್ಚೆ ನಡೆದಿದೆ.

ರಾಕ್ಷಸ ವ್ಯವಹಾರಗಳಿಗೆ ಮತ್ತು ಅವುಗಳ ಮಾಲೀಕರಿಗೆ ಬಿಜೆಪಿಯ ಸಾಮೀಪ್ಯವನ್ನು ಪ್ರತಿಪಕ್ಷಗಳು ಪ್ರಶ್ನಿಸಿದರೆ, 2014 ಕ್ಕಿಂತ ಮೊದಲು ಅಧಿಕಾರದಲ್ಲಿದ್ದ ಕಾಂಗ್ರೆಸ್ ಮೇಲಿನ ಹೆಚ್ಚಿನ ಹಗರಣಗಳನ್ನು ಸರ್ಕಾರ ಆರೋಪಿಸುತ್ತದೆ. ಇದು ಕೇವಲ ಅವರ ಹಗರಣಗಳನ್ನು ಮುಚ್ಚಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಸುಜೇವಾಲಾ ಹೇಳಿದ್ದಾರೆ.


ಇದನ್ನೂ ಓದಿ: 12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನನ್ನ ಒಂದು ನಿವೇದನೆ ಎನೆಂದರೆ ಕರ್ನಾಟಕದಲ್ಲಿ ವಾಸಿಸುವ “ಕುಳವ” ಜನಾಂಗದ (ಕೊರಮ, ಕೊರಚ ಮತ್ತು ಕೊರವರ) ಬಗ್ಗೆ ಬರೆಯಬೇಕೆಂದು ತಮ್ಮಲ್ಲಿ ನನ್ನ ಕಳಕಳಿ

  2. ವರ್ಣ, ಜಾತಿ, ಉಪಜಾತಿ ಇರುವುದು ಹಿಂದೂ ಧರ್ಮದಲ್ಲಿ. ಲಿಂಗಾಯತ ಧರ್ಮದಲ್ಲಿ ಜಾತಿ ಇಲ್ಲ. ಪಂಗಡಗಳು ಇವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ. 2A ಮೀಸಲಾತಿ ಇರುವುದು ಜಾತಿ ಆಧಾರಿತ.
    ಲಿಂಗಾಯತರು ಹಿಂದೂಗಳು ಅಲ್ಲವೇ ಅಲ್ಲ ಅಂದಮೇಲೆ ಅವರನ್ನು 2A ಗೆ ಹಾಕುವಂತೆ ಕೇಳುವುದು ಎಷ್ಟು ಸರಿ?
    ಈ ಬಗ್ಗೆ ಬರೆಯಿರಿ.

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...