Homeಕರ್ನಾಟಕಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

- Advertisement -
- Advertisement -

ಶಿವಮೊಗ್ಗ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದಾಗಿ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ದಲಿತ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ಈ ಕುರಿತು ಇಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪನವರಿಗೆ ಮನವಿ ಸಲ್ಲಿಸಿ, ಸರ್ಕಾರವು ಕೂಡಲೇ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು ದಲಿತ ಅಭ್ಯರ್ಥಿಗಳಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು 1995 ರಲ್ಲಿ ಆದೇಶಿಸಿರುವ 100 ರಿಕ್ತ ಸ್ಥಾನಗಳ ರೋಸ್ಟರ್‌ನಂತೆ, ಸರ್ಕಾರಿ ವಿಶ್ವವಿದ್ಯಾಲಯಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಿಷಯ/ವಿಭಾಗವನ್ನು ಒಂದು ಘಟಕ ಎಂದು ಪರಿಗಣಿಸಿ ಒಂದೊಂದು ವಿಭಾಗಕ್ಕೂ ಪ್ರತ್ಯೇಕ ರೋಸ್ಟರ್‌ ಅನ್ನು ಮಾಡುತ್ತವೆ. ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಸಂಬಂದಿತ ವಿಶ್ವವಿದ್ಯಾಲಯಗಳು ಸಹ ಇದನ್ನೇ ಅನುಸರಿಸುತ್ತಾ ಬಂದಿವೆ. ಶಿವಮೊಗ್ಗದ “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸಹ 2015 ರಲ್ಲಿ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ವಿಷಯ/ವಿಭಾಗವಾರು ರೋಸ್ಟರ್‌ ಮಾಡಿದಾಗ ಒಟ್ಟು 85 ಸ್ಥಾನಗಳಲ್ಲಿ 41 ಸ್ಥಾನಗಳು ಪ.ಜಾ./ಪ.ಪಂ. ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ಲಭಿಸಿತ್ತು. ಆದರೆ ಅದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೇಮಕಾತಿಯನ್ನೇ ರದ್ದು ಮಾಡಿದವು. ಅದೇ ವಿಶ್ವವಿದ್ಯಾಲಯ 2019 ರಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ 109 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪ್ರಕಟಣೆ ಮಾಡಿತು. ಆದರೆ ಈ ಬಾರಿ ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸಿ ತಪ್ಪಾದ ರೋಸ್ಟರ್ ಮಾಡಿದೆ. ಪರಿಣಾಮ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಕೇವಲ 21 ಸ್ಥಾನ ಸಿಕ್ಕಿವೆ ಎಂದು ಒಕ್ಕೂಟ ಆರೋಪಿಸಿದೆ.

ಚಿತ್ರಕೃಪೆ: ವಾರ್ತಾಭಾರತಿ

ರಾಜ್ಯ ಸರ್ಕಾರದ ರೋಸ್ಟರ್ ನಿಯಮಗಳ ಪ್ರಕಾರ ಯಾವುದೇ ಹೊಸ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರೋಸ್ಟರ್ ಮಾಡುವಾಗ ಪ್ರಾರಂಭದ ಮೊದಲ ಬಿಂದು ಪರಿಶಿಷ್ಟ ಅಭ್ಯರ್ಥಿಗೆ, ಎರಡನೆ ಬಿಂದು ಸಾಮಾನ್ಯ ಅಭ್ಯರ್ಥಿಗೆ ಮತ್ತು 3 ನೇ ಬಿಂದು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿರುತ್ತದೆ ಮತ್ತು ಇತರ ಸಮುದಾಯಗಳ ಮೀಸಲಾತಿ ಮುಂದಿನ ಬಿಂದುಗಳಲ್ಲಿ ಬರುತ್ತದೆ. ಹೊಸ ವಿಶ್ವವಿದ್ಯಾಲಯಗಳಲ್ಲಿ ಹೊಸದಾಗಿ ವಿಭಾಗವಾರು ರೋಸ್ಟರ್ ಮಾಡಿದಾಗ, 1 ವಿಭಾಗಕ್ಕೆ ಕೇವಲ 2 ರಿಂದ 4 ಹುದ್ದೆಗಳನ್ನು ಮಾತ್ರ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ನೇಮಕಾತಿಯಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿರುವ ಹಾಗೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ನಂತರದ ನೇಮಕಾತಿಯಲ್ಲಿ ಇತರ ಮೀಸಲು ವರ್ಗಗಳಿಗೂ ಸ್ಥಾನಗಳು ದೊರೆಯುತ್ತವೆ ಎಂಬುದು ವಾಸ್ತವ ಸಂಗತಿ. ಅಂತಹ ಪದ್ದತಿಯನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಆರ್.ಕೆ.ಸಭರವಾಲ ಮತ್ತು ಇತರರು V/s ಸ್ಟೇಟ್ ಆಫ್ ಪಂಜಾಬ್ ಮತ್ತು ಇತರರು (10.02.1995.), ಡಾ.ರಾಜ್ ಕುಮಾರ್ ಮತ್ತು ಇತರರು V/s ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಇತರರು (20.06.1990) ಪ್ರಕರಣ ಸೇರಿದಂತೆ ದೇಶದಲ್ಲಿನ ಅನೇಕ ನ್ಯಾಯಾಲಯಗಳು ವಿಷಯವಾರು/ವಿಭಾಗವಾರು ರೋಸ್ಟರ್ ಮಾಡುವುದೇ ಸಂವಿಧಾನಾತ್ಮಕ ಎಂದಿವೆ.

ವಿವೇಕಾನಂದ ತಿವಾರಿ ಮತ್ತು ಇತರರು V/s ಯುನಿಯನ್ ಆಫ್ ಇಂಡಿಯ ಮತ್ತು ಇತರರು (07.04.2017) ಕೇಸಿನಲ್ಲಿ ಅಲಹಾಬಾದ್ ಹೈ ಕೋರ್ಟ್ ವಿಭಾಗ/ವಿಷಯವಾರು ರೋಸ್ಟರ್‌ ಮಾಡುವುದೇ ಸಂವಿಧಾನಾತ್ಮಕ ನ್ಯಾಯ ಎಂದಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಹ ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಯುಜಿಸಿಯು ಸಹ 2018 ಮಾರ್ಚ್ 5 ರಂದು ಆದೇಶ ಹೊರಡಿಸಿ ಎಂದಿನಂತೆ ವಿಭಾಗ/ವಿಷಯವಾರು ರೋಸ್ಟ‌ರ್ ಮಾಡಲು ಆದೇಶಿಸಿದೆ. ಆದರೆ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದವು ವಿಶ್ವವಿದ್ಯಾಲಯ ಒಂದು ಘಟಕವಾಗಿ ರೋಸ್ಟರ್ ಮಾಡಿರುವುದರಿಂದ ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದೆ.

ವಿಶ್ವವಿದ್ಯಾಲಯ ಒಂದು ಘಟಕವನ್ನಾಗಿ ಮಾಡಿದಾಗ ಕೆಲವು ವಿಭಾಗಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕೆಲವು ವಿಭಾಗಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ತುಂಬುತ್ತಾರೆ ಮತ್ತು ಸಂವಿಧಾನದ 14, 16ರ ವಿಧಿಯ ಅತಿಕ್ರಮಣ ಆಗುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಮುಂದುವರಿದು ಒಂದು ವಿಭಾಗದವರು ಮತ್ತೊಂದು ವಿಭಾಗದವರೊಂದಿಗೆ ಅಥವಾ ಒಂದು ವಿಷಯದವರು ಮತ್ತೊಂದು ವಿಷಯದವರೊಂದಿಗೆ ಸ್ಪರ್ಧಾಳು ಅಲ್ಲ ಹಾಗೂ ವರ್ಗಾವಣೆ ಮಾಡಲು ಸಹ ಸಾಧ್ಯವಿಲ್ಲ, ಆದುದರಿಂದ ವಿಶ್ವವಿದ್ಯಾಲಯಗಳು ನೇರ ನೇಮಕಾತಿಯಲ್ಲಿ ವಿಭಾಗ/ವಿಷಯವಾರು ರೋಸ್ಟರ್‌ನ್ನು ಪಾಲಿಸಲು ತಿಳಿಸಿತು ಮತ್ತು ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿಯಿತು.

ಎಲ್ಲಾ ರೋಸ್ಟರ್ ಅಂಶಗಳನ್ನು ಗಮನಿಸಿದಾಗ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಆದೇಶ, ಯುಜಿಸಿ ಆದೇಶ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ 50 ದಲಿತ ಆಕಾಂಕ್ಷಿಗಳ ಭವಿಷ್ಯತ್ತಿಗೆ ಕೊಡಲಿ ಪೆಟ್ಟನ್ನು ನೀಡಿರುವುದು ಸ್ಪಷ್ಟವಾಗಿದೆ. ಶೋಷಿತ ಸಮುದಾಯಗಳಲ್ಲಿ ಬೆರಳಣಿಕೆಯಷ್ಟು ಜನ ಪಿ.ಹೆಚ್.ಡಿಯನ್ನು ಮುಗಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರವು ಪ್ರಸ್ತುತ ಪ್ರಗತಿಯಲ್ಲಿರುವ ನೇಮಕಾತಿಯನ್ನು ಕೂಡಲೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ರೋಸ್ಟರ್‌ಅನ್ನು ಅಳವಡಿಸಿ ವಂಚಿತ ಅಭ್ಯರ್ಥಿಗಳಿಗೆೆ ನ್ಯಾಯ ಕೊಡಿಸುವುದರ ಮೂಲಕ ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...