Homeಕರ್ನಾಟಕಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

- Advertisement -
- Advertisement -

ಶಿವಮೊಗ್ಗ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದಾಗಿ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ದಲಿತ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ಈ ಕುರಿತು ಇಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪನವರಿಗೆ ಮನವಿ ಸಲ್ಲಿಸಿ, ಸರ್ಕಾರವು ಕೂಡಲೇ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು ದಲಿತ ಅಭ್ಯರ್ಥಿಗಳಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು 1995 ರಲ್ಲಿ ಆದೇಶಿಸಿರುವ 100 ರಿಕ್ತ ಸ್ಥಾನಗಳ ರೋಸ್ಟರ್‌ನಂತೆ, ಸರ್ಕಾರಿ ವಿಶ್ವವಿದ್ಯಾಲಯಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಿಷಯ/ವಿಭಾಗವನ್ನು ಒಂದು ಘಟಕ ಎಂದು ಪರಿಗಣಿಸಿ ಒಂದೊಂದು ವಿಭಾಗಕ್ಕೂ ಪ್ರತ್ಯೇಕ ರೋಸ್ಟರ್‌ ಅನ್ನು ಮಾಡುತ್ತವೆ. ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಸಂಬಂದಿತ ವಿಶ್ವವಿದ್ಯಾಲಯಗಳು ಸಹ ಇದನ್ನೇ ಅನುಸರಿಸುತ್ತಾ ಬಂದಿವೆ. ಶಿವಮೊಗ್ಗದ “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸಹ 2015 ರಲ್ಲಿ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ವಿಷಯ/ವಿಭಾಗವಾರು ರೋಸ್ಟರ್‌ ಮಾಡಿದಾಗ ಒಟ್ಟು 85 ಸ್ಥಾನಗಳಲ್ಲಿ 41 ಸ್ಥಾನಗಳು ಪ.ಜಾ./ಪ.ಪಂ. ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ಲಭಿಸಿತ್ತು. ಆದರೆ ಅದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೇಮಕಾತಿಯನ್ನೇ ರದ್ದು ಮಾಡಿದವು. ಅದೇ ವಿಶ್ವವಿದ್ಯಾಲಯ 2019 ರಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ 109 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪ್ರಕಟಣೆ ಮಾಡಿತು. ಆದರೆ ಈ ಬಾರಿ ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸಿ ತಪ್ಪಾದ ರೋಸ್ಟರ್ ಮಾಡಿದೆ. ಪರಿಣಾಮ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಕೇವಲ 21 ಸ್ಥಾನ ಸಿಕ್ಕಿವೆ ಎಂದು ಒಕ್ಕೂಟ ಆರೋಪಿಸಿದೆ.

ಚಿತ್ರಕೃಪೆ: ವಾರ್ತಾಭಾರತಿ

ರಾಜ್ಯ ಸರ್ಕಾರದ ರೋಸ್ಟರ್ ನಿಯಮಗಳ ಪ್ರಕಾರ ಯಾವುದೇ ಹೊಸ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರೋಸ್ಟರ್ ಮಾಡುವಾಗ ಪ್ರಾರಂಭದ ಮೊದಲ ಬಿಂದು ಪರಿಶಿಷ್ಟ ಅಭ್ಯರ್ಥಿಗೆ, ಎರಡನೆ ಬಿಂದು ಸಾಮಾನ್ಯ ಅಭ್ಯರ್ಥಿಗೆ ಮತ್ತು 3 ನೇ ಬಿಂದು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿರುತ್ತದೆ ಮತ್ತು ಇತರ ಸಮುದಾಯಗಳ ಮೀಸಲಾತಿ ಮುಂದಿನ ಬಿಂದುಗಳಲ್ಲಿ ಬರುತ್ತದೆ. ಹೊಸ ವಿಶ್ವವಿದ್ಯಾಲಯಗಳಲ್ಲಿ ಹೊಸದಾಗಿ ವಿಭಾಗವಾರು ರೋಸ್ಟರ್ ಮಾಡಿದಾಗ, 1 ವಿಭಾಗಕ್ಕೆ ಕೇವಲ 2 ರಿಂದ 4 ಹುದ್ದೆಗಳನ್ನು ಮಾತ್ರ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ನೇಮಕಾತಿಯಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿರುವ ಹಾಗೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ನಂತರದ ನೇಮಕಾತಿಯಲ್ಲಿ ಇತರ ಮೀಸಲು ವರ್ಗಗಳಿಗೂ ಸ್ಥಾನಗಳು ದೊರೆಯುತ್ತವೆ ಎಂಬುದು ವಾಸ್ತವ ಸಂಗತಿ. ಅಂತಹ ಪದ್ದತಿಯನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಆರ್.ಕೆ.ಸಭರವಾಲ ಮತ್ತು ಇತರರು V/s ಸ್ಟೇಟ್ ಆಫ್ ಪಂಜಾಬ್ ಮತ್ತು ಇತರರು (10.02.1995.), ಡಾ.ರಾಜ್ ಕುಮಾರ್ ಮತ್ತು ಇತರರು V/s ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಇತರರು (20.06.1990) ಪ್ರಕರಣ ಸೇರಿದಂತೆ ದೇಶದಲ್ಲಿನ ಅನೇಕ ನ್ಯಾಯಾಲಯಗಳು ವಿಷಯವಾರು/ವಿಭಾಗವಾರು ರೋಸ್ಟರ್ ಮಾಡುವುದೇ ಸಂವಿಧಾನಾತ್ಮಕ ಎಂದಿವೆ.

ವಿವೇಕಾನಂದ ತಿವಾರಿ ಮತ್ತು ಇತರರು V/s ಯುನಿಯನ್ ಆಫ್ ಇಂಡಿಯ ಮತ್ತು ಇತರರು (07.04.2017) ಕೇಸಿನಲ್ಲಿ ಅಲಹಾಬಾದ್ ಹೈ ಕೋರ್ಟ್ ವಿಭಾಗ/ವಿಷಯವಾರು ರೋಸ್ಟರ್‌ ಮಾಡುವುದೇ ಸಂವಿಧಾನಾತ್ಮಕ ನ್ಯಾಯ ಎಂದಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಹ ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಯುಜಿಸಿಯು ಸಹ 2018 ಮಾರ್ಚ್ 5 ರಂದು ಆದೇಶ ಹೊರಡಿಸಿ ಎಂದಿನಂತೆ ವಿಭಾಗ/ವಿಷಯವಾರು ರೋಸ್ಟ‌ರ್ ಮಾಡಲು ಆದೇಶಿಸಿದೆ. ಆದರೆ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದವು ವಿಶ್ವವಿದ್ಯಾಲಯ ಒಂದು ಘಟಕವಾಗಿ ರೋಸ್ಟರ್ ಮಾಡಿರುವುದರಿಂದ ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದೆ.

ವಿಶ್ವವಿದ್ಯಾಲಯ ಒಂದು ಘಟಕವನ್ನಾಗಿ ಮಾಡಿದಾಗ ಕೆಲವು ವಿಭಾಗಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕೆಲವು ವಿಭಾಗಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ತುಂಬುತ್ತಾರೆ ಮತ್ತು ಸಂವಿಧಾನದ 14, 16ರ ವಿಧಿಯ ಅತಿಕ್ರಮಣ ಆಗುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಮುಂದುವರಿದು ಒಂದು ವಿಭಾಗದವರು ಮತ್ತೊಂದು ವಿಭಾಗದವರೊಂದಿಗೆ ಅಥವಾ ಒಂದು ವಿಷಯದವರು ಮತ್ತೊಂದು ವಿಷಯದವರೊಂದಿಗೆ ಸ್ಪರ್ಧಾಳು ಅಲ್ಲ ಹಾಗೂ ವರ್ಗಾವಣೆ ಮಾಡಲು ಸಹ ಸಾಧ್ಯವಿಲ್ಲ, ಆದುದರಿಂದ ವಿಶ್ವವಿದ್ಯಾಲಯಗಳು ನೇರ ನೇಮಕಾತಿಯಲ್ಲಿ ವಿಭಾಗ/ವಿಷಯವಾರು ರೋಸ್ಟರ್‌ನ್ನು ಪಾಲಿಸಲು ತಿಳಿಸಿತು ಮತ್ತು ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿಯಿತು.

ಎಲ್ಲಾ ರೋಸ್ಟರ್ ಅಂಶಗಳನ್ನು ಗಮನಿಸಿದಾಗ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಆದೇಶ, ಯುಜಿಸಿ ಆದೇಶ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ 50 ದಲಿತ ಆಕಾಂಕ್ಷಿಗಳ ಭವಿಷ್ಯತ್ತಿಗೆ ಕೊಡಲಿ ಪೆಟ್ಟನ್ನು ನೀಡಿರುವುದು ಸ್ಪಷ್ಟವಾಗಿದೆ. ಶೋಷಿತ ಸಮುದಾಯಗಳಲ್ಲಿ ಬೆರಳಣಿಕೆಯಷ್ಟು ಜನ ಪಿ.ಹೆಚ್.ಡಿಯನ್ನು ಮುಗಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರವು ಪ್ರಸ್ತುತ ಪ್ರಗತಿಯಲ್ಲಿರುವ ನೇಮಕಾತಿಯನ್ನು ಕೂಡಲೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ರೋಸ್ಟರ್‌ಅನ್ನು ಅಳವಡಿಸಿ ವಂಚಿತ ಅಭ್ಯರ್ಥಿಗಳಿಗೆೆ ನ್ಯಾಯ ಕೊಡಿಸುವುದರ ಮೂಲಕ ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...