Homeಕರ್ನಾಟಕಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

- Advertisement -
- Advertisement -

ಶಿವಮೊಗ್ಗ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದಾಗಿ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ದಲಿತ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ಈ ಕುರಿತು ಇಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪನವರಿಗೆ ಮನವಿ ಸಲ್ಲಿಸಿ, ಸರ್ಕಾರವು ಕೂಡಲೇ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು ದಲಿತ ಅಭ್ಯರ್ಥಿಗಳಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು 1995 ರಲ್ಲಿ ಆದೇಶಿಸಿರುವ 100 ರಿಕ್ತ ಸ್ಥಾನಗಳ ರೋಸ್ಟರ್‌ನಂತೆ, ಸರ್ಕಾರಿ ವಿಶ್ವವಿದ್ಯಾಲಯಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಿಷಯ/ವಿಭಾಗವನ್ನು ಒಂದು ಘಟಕ ಎಂದು ಪರಿಗಣಿಸಿ ಒಂದೊಂದು ವಿಭಾಗಕ್ಕೂ ಪ್ರತ್ಯೇಕ ರೋಸ್ಟರ್‌ ಅನ್ನು ಮಾಡುತ್ತವೆ. ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಸಂಬಂದಿತ ವಿಶ್ವವಿದ್ಯಾಲಯಗಳು ಸಹ ಇದನ್ನೇ ಅನುಸರಿಸುತ್ತಾ ಬಂದಿವೆ. ಶಿವಮೊಗ್ಗದ “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸಹ 2015 ರಲ್ಲಿ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ವಿಷಯ/ವಿಭಾಗವಾರು ರೋಸ್ಟರ್‌ ಮಾಡಿದಾಗ ಒಟ್ಟು 85 ಸ್ಥಾನಗಳಲ್ಲಿ 41 ಸ್ಥಾನಗಳು ಪ.ಜಾ./ಪ.ಪಂ. ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ಲಭಿಸಿತ್ತು. ಆದರೆ ಅದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೇಮಕಾತಿಯನ್ನೇ ರದ್ದು ಮಾಡಿದವು. ಅದೇ ವಿಶ್ವವಿದ್ಯಾಲಯ 2019 ರಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ 109 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪ್ರಕಟಣೆ ಮಾಡಿತು. ಆದರೆ ಈ ಬಾರಿ ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸಿ ತಪ್ಪಾದ ರೋಸ್ಟರ್ ಮಾಡಿದೆ. ಪರಿಣಾಮ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಕೇವಲ 21 ಸ್ಥಾನ ಸಿಕ್ಕಿವೆ ಎಂದು ಒಕ್ಕೂಟ ಆರೋಪಿಸಿದೆ.

ಚಿತ್ರಕೃಪೆ: ವಾರ್ತಾಭಾರತಿ

ರಾಜ್ಯ ಸರ್ಕಾರದ ರೋಸ್ಟರ್ ನಿಯಮಗಳ ಪ್ರಕಾರ ಯಾವುದೇ ಹೊಸ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರೋಸ್ಟರ್ ಮಾಡುವಾಗ ಪ್ರಾರಂಭದ ಮೊದಲ ಬಿಂದು ಪರಿಶಿಷ್ಟ ಅಭ್ಯರ್ಥಿಗೆ, ಎರಡನೆ ಬಿಂದು ಸಾಮಾನ್ಯ ಅಭ್ಯರ್ಥಿಗೆ ಮತ್ತು 3 ನೇ ಬಿಂದು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿರುತ್ತದೆ ಮತ್ತು ಇತರ ಸಮುದಾಯಗಳ ಮೀಸಲಾತಿ ಮುಂದಿನ ಬಿಂದುಗಳಲ್ಲಿ ಬರುತ್ತದೆ. ಹೊಸ ವಿಶ್ವವಿದ್ಯಾಲಯಗಳಲ್ಲಿ ಹೊಸದಾಗಿ ವಿಭಾಗವಾರು ರೋಸ್ಟರ್ ಮಾಡಿದಾಗ, 1 ವಿಭಾಗಕ್ಕೆ ಕೇವಲ 2 ರಿಂದ 4 ಹುದ್ದೆಗಳನ್ನು ಮಾತ್ರ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ನೇಮಕಾತಿಯಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿರುವ ಹಾಗೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ನಂತರದ ನೇಮಕಾತಿಯಲ್ಲಿ ಇತರ ಮೀಸಲು ವರ್ಗಗಳಿಗೂ ಸ್ಥಾನಗಳು ದೊರೆಯುತ್ತವೆ ಎಂಬುದು ವಾಸ್ತವ ಸಂಗತಿ. ಅಂತಹ ಪದ್ದತಿಯನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಆರ್.ಕೆ.ಸಭರವಾಲ ಮತ್ತು ಇತರರು V/s ಸ್ಟೇಟ್ ಆಫ್ ಪಂಜಾಬ್ ಮತ್ತು ಇತರರು (10.02.1995.), ಡಾ.ರಾಜ್ ಕುಮಾರ್ ಮತ್ತು ಇತರರು V/s ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಇತರರು (20.06.1990) ಪ್ರಕರಣ ಸೇರಿದಂತೆ ದೇಶದಲ್ಲಿನ ಅನೇಕ ನ್ಯಾಯಾಲಯಗಳು ವಿಷಯವಾರು/ವಿಭಾಗವಾರು ರೋಸ್ಟರ್ ಮಾಡುವುದೇ ಸಂವಿಧಾನಾತ್ಮಕ ಎಂದಿವೆ.

ವಿವೇಕಾನಂದ ತಿವಾರಿ ಮತ್ತು ಇತರರು V/s ಯುನಿಯನ್ ಆಫ್ ಇಂಡಿಯ ಮತ್ತು ಇತರರು (07.04.2017) ಕೇಸಿನಲ್ಲಿ ಅಲಹಾಬಾದ್ ಹೈ ಕೋರ್ಟ್ ವಿಭಾಗ/ವಿಷಯವಾರು ರೋಸ್ಟರ್‌ ಮಾಡುವುದೇ ಸಂವಿಧಾನಾತ್ಮಕ ನ್ಯಾಯ ಎಂದಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಹ ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಯುಜಿಸಿಯು ಸಹ 2018 ಮಾರ್ಚ್ 5 ರಂದು ಆದೇಶ ಹೊರಡಿಸಿ ಎಂದಿನಂತೆ ವಿಭಾಗ/ವಿಷಯವಾರು ರೋಸ್ಟ‌ರ್ ಮಾಡಲು ಆದೇಶಿಸಿದೆ. ಆದರೆ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದವು ವಿಶ್ವವಿದ್ಯಾಲಯ ಒಂದು ಘಟಕವಾಗಿ ರೋಸ್ಟರ್ ಮಾಡಿರುವುದರಿಂದ ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದೆ.

ವಿಶ್ವವಿದ್ಯಾಲಯ ಒಂದು ಘಟಕವನ್ನಾಗಿ ಮಾಡಿದಾಗ ಕೆಲವು ವಿಭಾಗಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕೆಲವು ವಿಭಾಗಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ತುಂಬುತ್ತಾರೆ ಮತ್ತು ಸಂವಿಧಾನದ 14, 16ರ ವಿಧಿಯ ಅತಿಕ್ರಮಣ ಆಗುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಮುಂದುವರಿದು ಒಂದು ವಿಭಾಗದವರು ಮತ್ತೊಂದು ವಿಭಾಗದವರೊಂದಿಗೆ ಅಥವಾ ಒಂದು ವಿಷಯದವರು ಮತ್ತೊಂದು ವಿಷಯದವರೊಂದಿಗೆ ಸ್ಪರ್ಧಾಳು ಅಲ್ಲ ಹಾಗೂ ವರ್ಗಾವಣೆ ಮಾಡಲು ಸಹ ಸಾಧ್ಯವಿಲ್ಲ, ಆದುದರಿಂದ ವಿಶ್ವವಿದ್ಯಾಲಯಗಳು ನೇರ ನೇಮಕಾತಿಯಲ್ಲಿ ವಿಭಾಗ/ವಿಷಯವಾರು ರೋಸ್ಟರ್‌ನ್ನು ಪಾಲಿಸಲು ತಿಳಿಸಿತು ಮತ್ತು ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿಯಿತು.

ಎಲ್ಲಾ ರೋಸ್ಟರ್ ಅಂಶಗಳನ್ನು ಗಮನಿಸಿದಾಗ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಆದೇಶ, ಯುಜಿಸಿ ಆದೇಶ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ 50 ದಲಿತ ಆಕಾಂಕ್ಷಿಗಳ ಭವಿಷ್ಯತ್ತಿಗೆ ಕೊಡಲಿ ಪೆಟ್ಟನ್ನು ನೀಡಿರುವುದು ಸ್ಪಷ್ಟವಾಗಿದೆ. ಶೋಷಿತ ಸಮುದಾಯಗಳಲ್ಲಿ ಬೆರಳಣಿಕೆಯಷ್ಟು ಜನ ಪಿ.ಹೆಚ್.ಡಿಯನ್ನು ಮುಗಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರವು ಪ್ರಸ್ತುತ ಪ್ರಗತಿಯಲ್ಲಿರುವ ನೇಮಕಾತಿಯನ್ನು ಕೂಡಲೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ರೋಸ್ಟರ್‌ಅನ್ನು ಅಳವಡಿಸಿ ವಂಚಿತ ಅಭ್ಯರ್ಥಿಗಳಿಗೆೆ ನ್ಯಾಯ ಕೊಡಿಸುವುದರ ಮೂಲಕ ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...