Homeಕರ್ನಾಟಕಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

ಶಿವಮೊಗ್ಗ ಕೃಷಿ ವಿವಿ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯ ಆರೋಪ

- Advertisement -
- Advertisement -

ಶಿವಮೊಗ್ಗ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ರೋಸ್ಟರ್ ವಂಚನೆಯಿಂದಾಗಿ 50 ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ದಲಿತ ವಿದ್ಯಾರ್ಥಿಗಳ ಒಕ್ಕೂಟ ಆರೋಪಿಸಿದೆ.

ಈ ಕುರಿತು ಇಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಎಚ್.ಸಿ ಮಹಾದೇವಪ್ಪನವರಿಗೆ ಮನವಿ ಸಲ್ಲಿಸಿ, ಸರ್ಕಾರವು ಕೂಡಲೇ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿದು ದಲಿತ ಅಭ್ಯರ್ಥಿಗಳಿಗೆ ಕಾನೂನಾತ್ಮಕವಾಗಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು 1995 ರಲ್ಲಿ ಆದೇಶಿಸಿರುವ 100 ರಿಕ್ತ ಸ್ಥಾನಗಳ ರೋಸ್ಟರ್‌ನಂತೆ, ಸರ್ಕಾರಿ ವಿಶ್ವವಿದ್ಯಾಲಯಗಳು ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ವಿಷಯ/ವಿಭಾಗವನ್ನು ಒಂದು ಘಟಕ ಎಂದು ಪರಿಗಣಿಸಿ ಒಂದೊಂದು ವಿಭಾಗಕ್ಕೂ ಪ್ರತ್ಯೇಕ ರೋಸ್ಟರ್‌ ಅನ್ನು ಮಾಡುತ್ತವೆ. ಕರ್ನಾಟಕ ರಾಜ್ಯದ ಕೃಷಿ, ತೋಟಗಾರಿಕೆ ಮತ್ತು ಪಶು ವೈದ್ಯಕೀಯ ಸಂಬಂದಿತ ವಿಶ್ವವಿದ್ಯಾಲಯಗಳು ಸಹ ಇದನ್ನೇ ಅನುಸರಿಸುತ್ತಾ ಬಂದಿವೆ. ಶಿವಮೊಗ್ಗದ “ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸಹ 2015 ರಲ್ಲಿ ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ ವಿಷಯ/ವಿಭಾಗವಾರು ರೋಸ್ಟರ್‌ ಮಾಡಿದಾಗ ಒಟ್ಟು 85 ಸ್ಥಾನಗಳಲ್ಲಿ 41 ಸ್ಥಾನಗಳು ಪ.ಜಾ./ಪ.ಪಂ. ಅಭ್ಯರ್ಥಿಗಳಿಗೆ ಕಾನೂನುಬದ್ಧವಾಗಿ ಲಭಿಸಿತ್ತು. ಆದರೆ ಅದನ್ನು ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೇಮಕಾತಿಯನ್ನೇ ರದ್ದು ಮಾಡಿದವು. ಅದೇ ವಿಶ್ವವಿದ್ಯಾಲಯ 2019 ರಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹೊಸದಾಗಿ 109 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪ್ರಕಟಣೆ ಮಾಡಿತು. ಆದರೆ ಈ ಬಾರಿ ಇಡೀ ವಿಶ್ವವಿದ್ಯಾಲಯವನ್ನೇ ಒಂದು ಘಟಕ ಎಂದು ಪರಿಗಣಿಸಿ ತಪ್ಪಾದ ರೋಸ್ಟರ್ ಮಾಡಿದೆ. ಪರಿಣಾಮ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಕೇವಲ 21 ಸ್ಥಾನ ಸಿಕ್ಕಿವೆ ಎಂದು ಒಕ್ಕೂಟ ಆರೋಪಿಸಿದೆ.

ಚಿತ್ರಕೃಪೆ: ವಾರ್ತಾಭಾರತಿ

ರಾಜ್ಯ ಸರ್ಕಾರದ ರೋಸ್ಟರ್ ನಿಯಮಗಳ ಪ್ರಕಾರ ಯಾವುದೇ ಹೊಸ ವಿಶ್ವವಿದ್ಯಾಲಯವು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರೋಸ್ಟರ್ ಮಾಡುವಾಗ ಪ್ರಾರಂಭದ ಮೊದಲ ಬಿಂದು ಪರಿಶಿಷ್ಟ ಅಭ್ಯರ್ಥಿಗೆ, ಎರಡನೆ ಬಿಂದು ಸಾಮಾನ್ಯ ಅಭ್ಯರ್ಥಿಗೆ ಮತ್ತು 3 ನೇ ಬಿಂದು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿರುತ್ತದೆ ಮತ್ತು ಇತರ ಸಮುದಾಯಗಳ ಮೀಸಲಾತಿ ಮುಂದಿನ ಬಿಂದುಗಳಲ್ಲಿ ಬರುತ್ತದೆ. ಹೊಸ ವಿಶ್ವವಿದ್ಯಾಲಯಗಳಲ್ಲಿ ಹೊಸದಾಗಿ ವಿಭಾಗವಾರು ರೋಸ್ಟರ್ ಮಾಡಿದಾಗ, 1 ವಿಭಾಗಕ್ಕೆ ಕೇವಲ 2 ರಿಂದ 4 ಹುದ್ದೆಗಳನ್ನು ಮಾತ್ರ ತುಂಬುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ನೇಮಕಾತಿಯಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿರುವ ಹಾಗೆ ಮೇಲ್ನೋಟಕ್ಕೆ ಕಂಡುಬರುತ್ತದೆ. ಆದರೆ ನಂತರದ ನೇಮಕಾತಿಯಲ್ಲಿ ಇತರ ಮೀಸಲು ವರ್ಗಗಳಿಗೂ ಸ್ಥಾನಗಳು ದೊರೆಯುತ್ತವೆ ಎಂಬುದು ವಾಸ್ತವ ಸಂಗತಿ. ಅಂತಹ ಪದ್ದತಿಯನ್ನು ಕೈಬಿಟ್ಟಿರುವುದು ಅನ್ಯಾಯ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ಆರ್.ಕೆ.ಸಭರವಾಲ ಮತ್ತು ಇತರರು V/s ಸ್ಟೇಟ್ ಆಫ್ ಪಂಜಾಬ್ ಮತ್ತು ಇತರರು (10.02.1995.), ಡಾ.ರಾಜ್ ಕುಮಾರ್ ಮತ್ತು ಇತರರು V/s ಗುಲ್ಬರ್ಗಾ ವಿಶ್ವವಿದ್ಯಾಲಯ ಮತ್ತು ಇತರರು (20.06.1990) ಪ್ರಕರಣ ಸೇರಿದಂತೆ ದೇಶದಲ್ಲಿನ ಅನೇಕ ನ್ಯಾಯಾಲಯಗಳು ವಿಷಯವಾರು/ವಿಭಾಗವಾರು ರೋಸ್ಟರ್ ಮಾಡುವುದೇ ಸಂವಿಧಾನಾತ್ಮಕ ಎಂದಿವೆ.

ವಿವೇಕಾನಂದ ತಿವಾರಿ ಮತ್ತು ಇತರರು V/s ಯುನಿಯನ್ ಆಫ್ ಇಂಡಿಯ ಮತ್ತು ಇತರರು (07.04.2017) ಕೇಸಿನಲ್ಲಿ ಅಲಹಾಬಾದ್ ಹೈ ಕೋರ್ಟ್ ವಿಭಾಗ/ವಿಷಯವಾರು ರೋಸ್ಟರ್‌ ಮಾಡುವುದೇ ಸಂವಿಧಾನಾತ್ಮಕ ನ್ಯಾಯ ಎಂದಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸಹ ಅಲಹಾಬಾದ್ ಉಚ್ಚ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಯುಜಿಸಿಯು ಸಹ 2018 ಮಾರ್ಚ್ 5 ರಂದು ಆದೇಶ ಹೊರಡಿಸಿ ಎಂದಿನಂತೆ ವಿಭಾಗ/ವಿಷಯವಾರು ರೋಸ್ಟ‌ರ್ ಮಾಡಲು ಆದೇಶಿಸಿದೆ. ಆದರೆ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದವು ವಿಶ್ವವಿದ್ಯಾಲಯ ಒಂದು ಘಟಕವಾಗಿ ರೋಸ್ಟರ್ ಮಾಡಿರುವುದರಿಂದ ದಲಿತ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದೆ.

ವಿಶ್ವವಿದ್ಯಾಲಯ ಒಂದು ಘಟಕವನ್ನಾಗಿ ಮಾಡಿದಾಗ ಕೆಲವು ವಿಭಾಗಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕೆಲವು ವಿಭಾಗಗಳಲ್ಲಿ ಮೀಸಲಾತಿ ಅಭ್ಯರ್ಥಿಗಳು ತುಂಬುತ್ತಾರೆ ಮತ್ತು ಸಂವಿಧಾನದ 14, 16ರ ವಿಧಿಯ ಅತಿಕ್ರಮಣ ಆಗುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತು. ಮುಂದುವರಿದು ಒಂದು ವಿಭಾಗದವರು ಮತ್ತೊಂದು ವಿಭಾಗದವರೊಂದಿಗೆ ಅಥವಾ ಒಂದು ವಿಷಯದವರು ಮತ್ತೊಂದು ವಿಷಯದವರೊಂದಿಗೆ ಸ್ಪರ್ಧಾಳು ಅಲ್ಲ ಹಾಗೂ ವರ್ಗಾವಣೆ ಮಾಡಲು ಸಹ ಸಾಧ್ಯವಿಲ್ಲ, ಆದುದರಿಂದ ವಿಶ್ವವಿದ್ಯಾಲಯಗಳು ನೇರ ನೇಮಕಾತಿಯಲ್ಲಿ ವಿಭಾಗ/ವಿಷಯವಾರು ರೋಸ್ಟರ್‌ನ್ನು ಪಾಲಿಸಲು ತಿಳಿಸಿತು ಮತ್ತು ಅಲಹಾಬಾದ್ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಎತ್ತಿ ಹಿಡಿಯಿತು.

ಎಲ್ಲಾ ರೋಸ್ಟರ್ ಅಂಶಗಳನ್ನು ಗಮನಿಸಿದಾಗ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯವು ಸಾರ್ವಜನಿಕವಾಗಿ ರಾಜ್ಯ ಸರ್ಕಾರದ ಆದೇಶ, ಯುಜಿಸಿ ಆದೇಶ, ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ 50 ದಲಿತ ಆಕಾಂಕ್ಷಿಗಳ ಭವಿಷ್ಯತ್ತಿಗೆ ಕೊಡಲಿ ಪೆಟ್ಟನ್ನು ನೀಡಿರುವುದು ಸ್ಪಷ್ಟವಾಗಿದೆ. ಶೋಷಿತ ಸಮುದಾಯಗಳಲ್ಲಿ ಬೆರಳಣಿಕೆಯಷ್ಟು ಜನ ಪಿ.ಹೆಚ್.ಡಿಯನ್ನು ಮುಗಿಸಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಆದ್ದರಿಂದ ರಾಜ್ಯ ಸರ್ಕಾರವು ಪ್ರಸ್ತುತ ಪ್ರಗತಿಯಲ್ಲಿರುವ ನೇಮಕಾತಿಯನ್ನು ಕೂಡಲೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ರೋಸ್ಟರ್‌ಅನ್ನು ಅಳವಡಿಸಿ ವಂಚಿತ ಅಭ್ಯರ್ಥಿಗಳಿಗೆೆ ನ್ಯಾಯ ಕೊಡಿಸುವುದರ ಮೂಲಕ ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

ಇದನ್ನೂ ಓದಿ; ಮಾರಾಟವಾದ ದಲಿತರ ಭೂಮಿ ವಾಪಸ್ ಕೊಡಿಸುವ PTCL ಕಾಯ್ದೆ ಬಗ್ಗೆ ನಿಮಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...