Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...