Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...