Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...