Homeಕರೋನಾ ತಲ್ಲಣಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಜುಲೈ ತಿಂಗಳೊಂದರಲ್ಲೇ ಸುಮಾರು 50 ಲಕ್ಷ ಉದ್ಯೋಗಿಗಳು ಉದ್ಯೂಗ ಕಳೆದು ಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಯ ಅಂಕಿ ಅಂಶಗಳು ತಿಳಿಸಿವೆ.

CMIE ಭಾರತದ ಒಂದು ಪ್ರಮುಖ ವ್ಯವಹಾರ ಮಾಹಿತಿಯ ಸ್ವತಂತ್ರ ಚಿಂತನಾ ಕೇಂದ್ರವಾಗಿದೆ. ಇದನ್ನು 1976 ರಲ್ಲಿ ಸ್ಥಾಪಿಸಲಾಗಿದೆ. ಇದು ನಿರಂತರವಾಗಿ ಭಾರತದ ಆರ್ಥಿಕತೆಯ ಬಗ್ಗೆ ಅಧ್ಯಯನ ಮಾಡುತ್ತಾ ಬರುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಏಪ್ರಿಲ್‌ನಿಂದ 1.89 ಕೋಟಿಗೆ ಏರಿದೆ ಎಂದು ಅದು ತಿಳಿಸಿದೆ.

ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಸುಮಾರು 39 ಲಕ್ಷ ಜನರು ಉದ್ಯೋಗ ಗಳಿಸಿದರೂ, ಜುಲೈನಲ್ಲಿ ಸುಮಾರು 50 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಏಪ್ರಿಲ್‌ನಲ್ಲಿ 1.77 ಕೋಟಿ ನಿಯಮಿತ ಸಂಬಳ ಪಡೆಯುವ ಉದ್ಯೋಗಿಗಳು ಉದ್ಯೋಗ ಕಳೆದು ಕೊಂಡಿದ್ದಾರೆ. ಅಲ್ಲದೆ ಮೇ ತಿಂಗಳಲ್ಲಿ 10 ಲಕ್ಷ ಉದ್ಯೋಗಗಳು ನಷ್ಟವಾಗಿದೆ.

“ನಿಯಮಿತ ಸಂಬಳ ಪಡೆಯುವ ಉದ್ಯೋಗಗಳು ಸುಲಭವಾಗಿ ಕಳೆದುಹೋಗುವುದಿಲ್ಲ, ಒಮ್ಮೆ ಕಳೆದುಹೋದರೆ ಅವುಗಳನ್ನು ಮತ್ತೆ ಪಡೆಯುವುದು ಸಹ ಕಷ್ಟ. ಆದ್ದರಿಂದ ಅವರ ಸಂಖ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿವೆ” ಎಂದು CMIE ಕೇಂದ್ರದ ಸಿಇಒ ಮಹೇಶ್ ವ್ಯಾಸ್ ಹೇಳಿದ್ದಾರೆ.

“ನಿಯಮಿತ ಸಂಬಳದ ಉದ್ಯೋಗಗಳು 2019-20 ರಲ್ಲಿ ಸರಾಸರಿಗಿಂತ ಸುಮಾರು 1.90 ಕೋಟಿ ಕಡಿಮೆಯಾಗಿದೆ. ಇದು ಕಳೆದ ಹಣಕಾಸು ವರ್ಷದ ಮಟ್ಟಕ್ಕಿಂತ ಶೇಕಡಾ 22 ರಷ್ಟು ಕಡಿಮೆಯಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಇತ್ತೀಚಿನ CMIE ಅಂಕಿಅಂಶವು ಈ ಅವಧಿಯಲ್ಲಿ ಸುಮಾರು 68 ಲಕ್ಷ ದೈನಂದಿನ ವೇತನ ಪಡೆಯುವವರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಆದರೆ ಈ ಅವಧಿಯಲ್ಲಿ ಸುಮಾರು 1.49 ಕೋಟಿ ಜನರು ಕೃಷಿಯಲ್ಲಿ ತೊಡಗಿದರು ಎಂದು ಹೇಳಿದೆ.

ಕೊರೊನಾ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಹಲವಾರು ಕಂಪನಿಗಳು ಉದ್ಯೋಗ ಕಡಿತ ಮಾಡುತ್ತಿದೆ. ಅದರ ಜೊತೆಗೆ ವೇತನ ಕಡಿತ ಮತ್ತು ವೇತನವಿಲ್ಲದೆ ರಜೆಯಂತಹ ನಿರ್ಧಾರವನ್ನು ಕೂಡಾ ಕೈಗೊಂಡಿದೆ.

ಕೈಗಾರಿಕಾ ಸಂಸ್ಥೆಗಳು ಮತ್ತು ಹಲವಾರು ಅರ್ಥಶಾಸ್ತ್ರಜ್ಞರು ಸಾಮೂಹಿಕ ಉದ್ಯೋಗ ನಷ್ಟವನ್ನು ತಪ್ಪಿಸಲು ಮತ್ತು ಸಾಂಕ್ರಾಮಿಕ ರೋಗದ ದಾಳಿಯಿಂದ ಬದುಕುಳಿಯಲು ಉದ್ಯಮಗಳಿಗೆ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಜುಲೈ ತಿಂಗಳಲ್ಲಿ 5 ಮಿಲಿಯನ್ ಉದ್ಯೋಗಗಳು ನಷ್ಟವಾಗಿದೆ. ಏಪ್ರಿಲ್‌ನಿಂದ ಒಟ್ಟು 18.9 ಉದ್ಯೋಗಗಳು ನಷ್ಟವಾಗಿದೆ. ಇದು ಮಾನಸಿಕ ಆರೋಗ್ಯ, ಮನೆ ಹಿಡುವಳಿ ಉಳಿತಾಯ ಮತ್ತು ಖರ್ಚಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಈ ಬಗ್ಗೆ ಚರ್ಚೆ ಯಾಕೆ ಆಗುತ್ತಿಲ್ಲ ಎಂದು ಪತ್ರಕರ್ತೆ ಫಾಯೆ ಡಿ’ಸೋಜಾ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.


ಓದಿ: ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಗಳು ಸ್ಥಳೀಯರಿಗೆ ಮಾತ್ರ: ಶಿವರಾಜ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...