Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...