Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...