Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...