Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...