Homeಕರ್ನಾಟಕರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ...

ರಮ್ಯ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ತಪ್ಪಿಗೆ ಸುವರ್ಣ ನ್ಯೂಸ್ 50 ಲಕ್ಷ ದಂಡ ಕಟ್ಟಬೇಕು: ಕೋರ್ಟ್ ಆದೇಶ

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಟಿ ಮತ್ತು ಕಾಂಗ್ರೆಸ್ ನಾಯಕಿ ರಮ್ಯ (ದಿವ್ಯ ಸ್ಪಂದನ) ಅವರು ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಹಾಕಿದ್ದ ಕೇಸಿನಲ್ಲಿ ಬೆಂಗಳೂರಿನ 8ನೇ ಅಪರ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶರು, ಸದರಿ ಚಾನೆಲ್‍ಗೆ 50 ಲಕ್ಷ ರೂಗಳನ್ನು ದಂಡ ವಿಧಿಸಿದ್ದಾರೆ. ಈ ಹಣವನ್ನು 2 ತಿಂಗಳೊಳಗೆ ರಮ್ಯಾರಿಗೆ ಪಾವತಿಸಬೇಕೆಂದು ಕೋರ್ಟ್ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಲೈವ್‍ಲಾ ವೆಬ್ ತಾಣವು, ಕೋರ್ಟಿನ ಜಡ್ಜ್‍ಮೆಂಟ್ ( https://www.livelaw.in/amp/news-updates/asianet-suvarna-news-held-liable-for-defaming-divya-spandana-50-lakhs-damages-144883 ) ಅನ್ನೂ ಪೂರ್ಣವಾಗಿ ಪ್ರಕಟಿಸಿದೆ. ಏಷ್ಯಾನೆಟ್ ಅವರ ಮಾಲೀಕತ್ವದಲ್ಲಿರುವ ಸುವರ್ಣ ಚಾನೆಲ್ ಮೇ 2013ರಲ್ಲಿ ಒಂದು ಸುಳ್ಳು ಸುದ್ದಿ ಪ್ರಕಟಿಸಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದ ಕೇಸು ಇದಾಗಿತ್ತು.

ಐಪಿಎಲ್ ಕ್ರಿಕೆಟ್‍ಗೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿದ್ದು, ಅದರಲ್ಲಿ ರಮ್ಯ ಭಾಗಿಯಾಗಿದ್ದರೆಂಬುದು ಆ ಸಂದರ್ಭದಲ್ಲಿ ಪ್ರಕಟವಾದ ಸುದ್ದಿಯ ಸಾರಾಂಶವಾಗಿತ್ತು. ಅದನ್ನು ಪ್ರಸಾರ ಮಾಡುವಾಗ ‘ಬೆಟ್ಟಿಂಗ್ ರಾಣಿಯರು’, ‘ಬೆಟ್ಟಿಂಗ್‍ನಲ್ಲಿ ಕನ್ನಡದ ಬೊಂಬೆಗಳು’, ‘ಲಿಂಕ್ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ನಟಿಯರು’, ‘ಆ ನಟಿಮಣಿಯರು ಯಾರು ಗೊತ್ತಾ?’ ಇತ್ಯಾದಿ ವಿಶೇಷಣಗಳನ್ನು ಬಳಸಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದಲ್ಲದೆ ಆ ಸಂದರ್ಭದಲ್ಲಿ ಆರ್‍ಸಿಬಿ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದ ರಮ್ಯಾರ ಫೋಟೊವನ್ನು ಸುದ್ದಿಯೊಂದಿಗೆ ಪದೇ ಪದೇ ಪ್ರಸಾರ ಮಾಡಲಾಗಿತ್ತು. ರಮ್ಯಾರ ಹೆಸರನ್ನು ಹೇಳಿ, ಅವರೇ ಇಂತಹ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕನ್ನಡದ ನಟಿ ಎಂದು ಬಿಂಬಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ತನಗೂ ಐಪಿಎಲ್‍ಗೂ ಅಥವಾ ಐಪಿಎಲ್ ಬೆಟ್ಟಿಂಗ್‍ಗೂ ಯಾವುದೇ ಸಂಬಂಧವಿಲ್ಲ. ಇದು ದುರುದ್ದೇಶಪೂರ್ವಕವಾಗಿ ತನಗೆ ಮಾನಹಾನಿ ಮಾಡುವ ಸುದ್ದಿಯಾಗಿದೆ. ಅದಕ್ಕಾಗಿ ತನಗೆ ಹತ್ತು ಕೋಟಿ ರೂಪಾಯಿ ನಷ್ಟ ಪರಿಹಾರವನ್ನು ಕಟ್ಟಿಕೊಡಬೇಕೆಂದು ಕೇಳಿದ್ದರು. ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಕೋರ್ಟ್ ರಮ್ಯಾರ ವಾದವನ್ನು ಎತ್ತಿಹಿಡಿದಿದೆ. ಸುವರ್ಣ ನ್ಯೂಸ್ ಚಾನಲ್ ದುರುದ್ದೇಶಪೂರ್ವಕವಾಗಿ ಈ ಸುದ್ದಿಯನ್ನು ಪ್ರಕಟಿಸಿರುವುದಕ್ಕೆ ತಪರಾಕಿ ಕೊಟ್ಟಿರುವ ಕೋರ್ಟ್, ಇನ್ನು ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾರ ಬಗ್ಗೆ ಸುದ್ದಿ ಪ್ರಕಟಣೆ ಮಾಡಬಾರದೆಂದು ಸದರಿ ಚಾನೆಲ್ ಗೆ ಆದೇಶಿಸಿದೆ.

ಈ ಕುರಿತು ನಾನು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ವಕೀಲೆ ರಾಜಲಕ್ಷ್ಮಿ ಅಂಕಲಗಿ ‘ಕೀಳು ಮಟ್ಟದ ರೋಚಕತೆ, ಟಿಆರ್‍ಪಿ ಮತ್ತು ಬಿಜೆಪಿ ಪರ ಸುದ್ದಿ ಮಾಡುವ ದುರುದ್ದೇಶದೊಂದಿಗೆ ಇಂತಹ ಸುದ್ದಿಗಳನ್ನು ಚಾನೆಲ್‍ಗಳು ಪ್ರಕಟಿಸುತ್ತವೆ. ಈ ಪ್ರಕರಣದಲ್ಲಿ ಸದರಿ ಚಾನೆಲ್ ಬಳಸಿರುವ ಶೀರ್ಷಿಕೆಗಳೆ ಆ ಚಾನೆಲ್ ನ ಕೀಳು ಅಭಿರುಚಿಯನ್ನು ಎತ್ತಿ ತೋರಿಸುತ್ತದೆ. ಕೋರ್ಟ್ ಸರಿಯಾದ ಪಾಠ ಕಲಿಸಿದೆ. ಇದು ಇದೇ ರೀತಿ ಸುದ್ದಿ ಪ್ರಕಟಿಸುತ್ತಿರುವ ಉಳಿದ ಚಾನೆಲ್‍ಗಳಿಗೂ ದೊಡ್ಡ ಪಾಠವಾಗಲಿದೆ. ಮುಂದಾದರೂ ಈ ಚಾನೆಲ್‍ಗಳು ಬುದ್ದಿ ಕಲಿಯುತ್ತಾರ ನೋಡಬೇಕು’ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ರಮ್ಯಾರ ಪರ ಪ್ರಮೋದ್ ನಾಯರ್ ಅವರು ಮತ್ತು ಸುವರ್ಣ ಚಾನೆಲ್ ಪರ ಪೂವಯ್ಯ ಅಂಡ್ ಕಂಪನಿ ವಕಾಲತ್ತು ವಹಿಸಿದ್ದರು. ಪಾಟೀಲ್ ನಾಗಲಿಂಗನಗೌಡ ಅವರು ತೀರ್ಪು ನೀಡಿದ ನ್ಯಾಯಾಧೀಶರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...