Homeಮುಖಪುಟಗೋವಾದ 50% ಪದವೀಧರರು ನಿರುದ್ಯೋಗಿಗಳಾಗಿದ್ದಾರೆ: ಸಿಎಂ ಪ್ರಮೋದ್‌ ಸಾವಂತ್‌

ಗೋವಾದ 50% ಪದವೀಧರರು ನಿರುದ್ಯೋಗಿಗಳಾಗಿದ್ದಾರೆ: ಸಿಎಂ ಪ್ರಮೋದ್‌ ಸಾವಂತ್‌

- Advertisement -
- Advertisement -

ಗೋವಾದ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತೀರ್ಣರಾದ 50% ದಷ್ಟು ಪದವೀಧರರು ಗುಣಮಟ್ಟದ ಕೌಶಲ್ಯದ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಬುಧವಾರ ಹೇಳಿದ್ದಾರೆ. ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ಯ ಸೆಮಿನಾರ್ ಅನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

“ನಮಗೆ ಹೊರಗಿನ ಚಿಂತನೆಯ ಅವಶ್ಯಕತೆ ಇದೆ. ಇಷ್ಟು ವರ್ಷಗಳಿಂದ ನಾವು ಬಿಎ, ಬಿ.ಕಾಂ ಮತ್ತು ಬಿಎಸ್ಸಿ ಪದವಿಗಳನ್ನು ಹೊಂದಿದ್ದೇವೆ. ನಾವು ಸಾಕಷ್ಟು ಗುಣಮಟ್ಟದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತೇವೆಯೇ ಎಂದು ಯೋಚಿಸಲು ಕೂಡಾ ದುಃಖವಾಗುತ್ತದೆ. ಎಷ್ಟು ಮಂದಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವಾಗಿಯೇ ರೂಪಿಸಿಕೊಳ್ಳುತ್ತಿದ್ದಾರೆ?” ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಕೇಳಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ ಪ್ರಮೋದ್‌!

“ನಾವು ಹೈಯರ್ ಸೆಕೆಂಡರಿ ಹಂತದಲ್ಲಿ ಕೆಲವು ಕೋರ್ಸ್‌ಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಮುಂದಕ್ಕೆ ಹೆಚ್ಚು ಹೆಚ್ಚು ಬಿಎ ಮತ್ತು ಬಿ.ಕಾಂ ಕಾಲೇಜುಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದಿಲ್ಲ. ಜನರು ಬಿಎ ಮತ್ತು ಬಿ.ಕಾಂ ಕಾಲೇಜುಗಳನ್ನು ಆರಂಭಿಸಲು ಮಂಜೂರಾತಿಗಾಗಿ ನನ್ನ ಬಳಿಗೆ ಬರುತ್ತಾರೆ,  ಆದರೆ ನಾನು ಅವರಲ್ಲಿ, ಇದು ಯಾಕೆ ಎಂದು ಕೇಳುತ್ತೇನೆ. ಸುಮಾರು 50% ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿದ ನಂತರ ಮನೆಯಲ್ಲಿ ಸುಮ್ಮನೆ ಕುಳಿತಿದ್ದಾರೆ” ಎಂದು ಮುಖ್ಯಮಂತ್ರಿ ಪ್ರಮೋದ್‌ ಹೇಳಿದ್ದಾರೆ.

“ಐದು ಸ್ಟೆನೋಗ್ರಾಫರ್ ಹುದ್ದೆ ಖಾಲಿಯಿದ್ದರೆ, ಅದಕ್ಕೆ 25 ಅರ್ಜಿ ಸಲ್ಲಿಕೆಯಾಗುತ್ತದೆ. 5 ಕೆಳ ಹಂತದ ಗುಮಾಸ್ತ(ಎಲ್‌ಡಿಸಿ) ಹುದ್ದೆಗೆ ಅರ್ಜಿ ಆಹ್ವಾನ ಮಾಡಿದರೆ 25,000 ಅರ್ಜಿ ಸಲ್ಲಿಕೆಯಾಗುತ್ತದೆ. ಇದು ಆರು ತಿಂಗಳ ಹಿಂದೆ ನಡೆಸಿದ ಸಂದರ್ಶನದ ಉದಾಹರಣೆಯಾಗಿದೆ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಮಾತನಾಡಿದ ಅವರು, ಮುಂದಿನ ವರ್ಷ ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ನಾವು ಮುಂದಿನ ವರ್ಷ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ. ಪೂರ್ವ-ಪ್ರಾಥಮಿಕ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ನೀತಿಯು ಹೇಗೆ ಪ್ರಯೋಜನ ಮಾಡುತ್ತದೆ ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಾವು ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...