Homeಮುಖಪುಟಗೋವಾದ 50% ಪದವೀಧರರು ನಿರುದ್ಯೋಗಿಗಳಾಗಿದ್ದಾರೆ: ಸಿಎಂ ಪ್ರಮೋದ್‌ ಸಾವಂತ್‌

ಗೋವಾದ 50% ಪದವೀಧರರು ನಿರುದ್ಯೋಗಿಗಳಾಗಿದ್ದಾರೆ: ಸಿಎಂ ಪ್ರಮೋದ್‌ ಸಾವಂತ್‌

- Advertisement -
- Advertisement -

ಗೋವಾದ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತೀರ್ಣರಾದ 50% ದಷ್ಟು ಪದವೀಧರರು ಗುಣಮಟ್ಟದ ಕೌಶಲ್ಯದ ಕೊರತೆಯಿಂದಾಗಿ ನಿರುದ್ಯೋಗಿಗಳಾಗಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಬುಧವಾರ ಹೇಳಿದ್ದಾರೆ. ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC)ಯ ಸೆಮಿನಾರ್ ಅನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

“ನಮಗೆ ಹೊರಗಿನ ಚಿಂತನೆಯ ಅವಶ್ಯಕತೆ ಇದೆ. ಇಷ್ಟು ವರ್ಷಗಳಿಂದ ನಾವು ಬಿಎ, ಬಿ.ಕಾಂ ಮತ್ತು ಬಿಎಸ್ಸಿ ಪದವಿಗಳನ್ನು ಹೊಂದಿದ್ದೇವೆ. ನಾವು ಸಾಕಷ್ಟು ಗುಣಮಟ್ಟದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತೇವೆಯೇ ಎಂದು ಯೋಚಿಸಲು ಕೂಡಾ ದುಃಖವಾಗುತ್ತದೆ. ಎಷ್ಟು ಮಂದಿ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವಾಗಿಯೇ ರೂಪಿಸಿಕೊಳ್ಳುತ್ತಿದ್ದಾರೆ?” ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಕೇಳಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ ಪ್ರಮೋದ್‌!

“ನಾವು ಹೈಯರ್ ಸೆಕೆಂಡರಿ ಹಂತದಲ್ಲಿ ಕೆಲವು ಕೋರ್ಸ್‌ಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ. ಮುಂದಕ್ಕೆ ಹೆಚ್ಚು ಹೆಚ್ಚು ಬಿಎ ಮತ್ತು ಬಿ.ಕಾಂ ಕಾಲೇಜುಗಳಿಗೆ ಅನುಮತಿ ನೀಡಲು ಸಾಧ್ಯವಾಗುವುದಿಲ್ಲ. ಜನರು ಬಿಎ ಮತ್ತು ಬಿ.ಕಾಂ ಕಾಲೇಜುಗಳನ್ನು ಆರಂಭಿಸಲು ಮಂಜೂರಾತಿಗಾಗಿ ನನ್ನ ಬಳಿಗೆ ಬರುತ್ತಾರೆ,  ಆದರೆ ನಾನು ಅವರಲ್ಲಿ, ಇದು ಯಾಕೆ ಎಂದು ಕೇಳುತ್ತೇನೆ. ಸುಮಾರು 50% ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿದ ನಂತರ ಮನೆಯಲ್ಲಿ ಸುಮ್ಮನೆ ಕುಳಿತಿದ್ದಾರೆ” ಎಂದು ಮುಖ್ಯಮಂತ್ರಿ ಪ್ರಮೋದ್‌ ಹೇಳಿದ್ದಾರೆ.

“ಐದು ಸ್ಟೆನೋಗ್ರಾಫರ್ ಹುದ್ದೆ ಖಾಲಿಯಿದ್ದರೆ, ಅದಕ್ಕೆ 25 ಅರ್ಜಿ ಸಲ್ಲಿಕೆಯಾಗುತ್ತದೆ. 5 ಕೆಳ ಹಂತದ ಗುಮಾಸ್ತ(ಎಲ್‌ಡಿಸಿ) ಹುದ್ದೆಗೆ ಅರ್ಜಿ ಆಹ್ವಾನ ಮಾಡಿದರೆ 25,000 ಅರ್ಜಿ ಸಲ್ಲಿಕೆಯಾಗುತ್ತದೆ. ಇದು ಆರು ತಿಂಗಳ ಹಿಂದೆ ನಡೆಸಿದ ಸಂದರ್ಶನದ ಉದಾಹರಣೆಯಾಗಿದೆ” ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಗ್ಗೆ ಮಾತನಾಡಿದ ಅವರು, ಮುಂದಿನ ವರ್ಷ ಇದನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರ ನಾವು ಮುಂದಿನ ವರ್ಷ ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ. ಪೂರ್ವ-ಪ್ರಾಥಮಿಕ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳಿಗೆ ಈ ನೀತಿಯು ಹೇಗೆ ಪ್ರಯೋಜನ ಮಾಡುತ್ತದೆ ನೀಡುತ್ತದೆ ಎಂದು ಖಚಿತಪಡಿಸಿಕೊಳ್ಳಲು ನಾವು ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...