Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...