Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...