Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...