Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....