Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...