Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...