Homeಕರೋನಾ ತಲ್ಲಣಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪುಣೆಯಲ್ಲಿ 50% ಜನರು ಕೊರೊನಾ ಆಂಟಿಬಾಡಿ ಹೊಂದಿದ್ದಾರೆ: ಸಮೀಕ್ಷೆ

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, 'ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು' ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

- Advertisement -
- Advertisement -

ಮುಂಬೈಯನ್ನು ಮೀರಿಸಿ ಪುಣೆ ದೇಶದ ಪ್ರಮುಖ ಕೊರೊನಾ ಹಾಟ್‌ಸ್ಪಾಟ್ ನಗರವಾದ ಕೇವಲ ಎರಡು ದಿನಗಳ ನಂತರ, ಅಲ್ಲಿನ ಶೇಕಡಾ 50 ಕ್ಕೂ ಹೆಚ್ಚು ಜನರು SARS-CoV2 ಅಥವಾ Covid-19 ವಿರುದ್ಧ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪರ್ಸಿಸ್ಟೆಂಟ್ ಫೌಂಡೇಶನ್‌ನಿಂದ ಧನಸಹಾಯ ನಡೆದ ಮೊದಲ ಸೆರೋ-ಸಮೀಕ್ಷೆಯಲ್ಲಿ, ‘ಪುಣೆ ನಗರದಲ್ಲಿ ಕೊರೊನಾ ಸಾಂಕ್ರಾಮಿಕ ಮತ್ತು ಸಿರೊಲಾಜಿಕಲ್ ಕಣ್ಗಾವಲು’ ಎಂಬ ಅಧ್ಯಯನವು ಈ ಫಲಿತಾಂಶಗಳನ್ನು ಬಹಿರಂಗಪಡಿಸಿದೆ.

ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಮ್‌ಸಿ), ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (ಎಸ್‌ಪಿಪಿಯು), ಟ್ರಾನ್ಸ್ ಲೇಷನಲ್ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಟಿಎಚ್‌ಎಸ್‌ಟಿಐ), ಫರಿದಾಬಾದ್, ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜ್, ವೆಲ್ಲೂರು ಸಂಸ್ಥೆಗಳೊಟ್ಟಿಗೆ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ (ಐಐಎಸ್ಇಆರ್) ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿವೆ.

ಈ ಅಧ್ಯಯನವು ಸೋಂಕಿಗೆ ಒಳಗಾದ ಮತ್ತು ಕೊರೊನಾ ವಿರುದ್ಧದ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದ ಹೆಚ್ಚಿನ ಸಂಭವನೀಯ ಪ್ರದೇಶಗಳಲ್ಲಿನ ಜನಸಂಖ್ಯೆಯ ಪ್ರಮಾಣವನ್ನು ಅಂದಾಜು ಮಾಡಿದೆ. ಅಧ್ಯಯನವು ಸೋಂಕಿನ ಪ್ರತಿರಕ್ಷೆಯ ಬಗ್ಗೆ ಮಾಹಿತಿ ಒದಗಿಸುವುದಿಲ್ಲ” ಎಂದು ಐಐಎಸ್ಇಆರ್ ಹೇಳಿದೆ.

ಯೆರಾವಾಡಾ, ಲೋಹಿಯಾನಗರ-ಕಾಸೆವಾಡಿ, ರಾಸ್ತಾಪೇತ್-ರವಿವರ್‌ಪೆತ್, ಕಾಸ್ಬಪೆತ್-ಸೋಮವರ್‌ಪೆತ್ ಮತ್ತು ನವಿಪೆತ್-ಪಾರ್ವತಿ ವಾರ್ಡ್‌ಗಳ ಒಟ್ಟು ಜನಸಂಖ್ಯೆ 3.66 ಲಕ್ಷ ಜನ ಸಮೀಕ್ಷೆಗೆ ಒಳಗಾಗಿದ್ದಾರೆ.

ಜುಲೈ 20 ರಿಂದ ಆಗಸ್ಟ್ 5 ರವರೆಗೆ ಐಜಿಜಿ ಪ್ರತಿಕಾಯಗಳ ಇರುವಿಕೆಯನ್ನು ಪತ್ತೆಹಚ್ಚಲು 1,664 ಜನ ಒಪ್ಪಿತ ವ್ಯಕ್ತಿಗಳಿಂದ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಯಿತು.

5 ವಾರ್ಡ್‌ಗಳಲ್ಲಿ ಸೋಂಕಿನ ವ್ಯಾಪಕ ಹರಡುವಿಕೆ ಕಂಡುಬಂದಿದೆ ಎಂದು ಅಧ್ಯಯನವು ಸೂಚಿಸಿದೆ. ಸೆರೊಪ್ರಿವೆಲೆನ್ಸ್ ಶೇಕಡಾ 36.1 ರಿಂದ 65.4 ರವರೆಗೆ ಇರುತ್ತದೆ ಮತ್ತು ಇದು ಎಲ್ಲಾ ರೀತಿಯ ವಾಸಸ್ಥಳಗಳಲ್ಲಿ ಗಣನೀಯವಾಗಿ ಕಂಡುಬಂದಿದೆ.

ಕೊಳೆಗೇರಿಗಳಲ್ಲಿ ವಾಸಿಸುವವರಲ್ಲಿ ಶೇಕಡಾ 56-62ರಷ್ಟು ಸೆರೊಪೊಸಿಟಿವಿಟಿ ಕಂಡುಬಂದರೆ, ಬಂಗಲೆ ನಿವಾಸಿಗಳಲ್ಲಿ ಶೇಕಡಾ 43.9, ಮತ್ತು ಕಟ್ಟಡಗಳಲ್ಲಿ ಉಳಿದುಕೊಂಡಿರುವವರಲ್ಲಿ ಶೇಕಡಾ 33 ರಷ್ಟಿದೆ. ಸಾಮೂಹಿಕ ಶೌಚಾಲಯಗಳನ್ನು ಹೊಂದಿರುವವರಿಗೆ ಹೋಲಿಸಿದರೆ ಪ್ರತ್ಯೆಕ ಶೌಚಾಲಯಗಳ ಪ್ರವೇಶ ಹೊಂದಿರುವವರಲ್ಲಿ ಹರಡುವಿಕೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಪುರುಷರಲ್ಲಿ ಶೇಕಡಾ 52.8 ಮತ್ತು ಮಹಿಳೆಯರಲ್ಲಿ 50.1 ರಷ್ಟು ಸೆರೊಪ್ರೆವೆಲೆನ್ಸ್ ಇದೆ. 66 ವರ್ಷಕ್ಕಿಂತ ಮೇಲ್ಪಟ್ಟವರು 39.8 ಶೇಕಡಾ ಕಡಿಮೆ ಪ್ರಮಾಣವನ್ನು ಹೊಂದಿದ್ದಾರೆ.

5 ವಾರ್ಡ್‌ಗಳಲ್ಲಿ ಶೇಕಡಾವಾರು ಹಿಗಿದೆ. ಲೋಹಿಯಾನಗರ್- ಕಾಸೆವಾಡಿ (65.4), ನವೀಪೇಟ್-ಪಾರ್ವತಿ (56.7), ಯೆರವಾಡ (56.6), ರಸ್ತಪೇಟ್-ರವಿವಾರ್ ಪೇಟ್ (45.7) ಮತ್ತು ಕಸ್ಬಾಪೇಟ್-ಸೋಮವಾರ್ ಪೇಟ್ (35.1).

ದೊಡ್ಡ ಮೊತ್ತದ ಮಾದರಿಗಳೊಂದಿಗೆ ಇನ್ನೂ ಎರಡು ಸಿರೊ-ಸಮೀಕ್ಷೆಗಳನ್ನು ಪ್ರಾರಂಭಿಸಲು ಪಿಎಂಸಿ ಯೋಜಿಸಿದೆ.

ಸೋಮವಾರದವರೆಗೆ, ಪಿಎಂಸಿ 80,407 ಕೊರೊನಾ ಪ್ರಕರಣಗಳು ಮತ್ತು 2,077 ಸಾವುಗಳನ್ನು ದಾಖಲಿಸಿದೆ, ಪುಣೆ ಜಿಲ್ಲೆಯಲ್ಲಿ 132,481 ಪ್ರಕರಣಗಳು ಮತ್ತು 3,247 ಸಾವುಗಳು ದಾಖಲಾಗಿವೆ, ಇದು ಮುಂಬೈ ಮತ್ತು ಥಾಣೆಗಿಂತ ಹೆಚ್ಚಾಗಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...