Homeಮುಖಪುಟಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ...

ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

- Advertisement -
- Advertisement -

ದೇಶದ 9 ಕಾರ್ಪೋರೇಟ್‍ ಅಂದರೆ ಬೃಹತ್‍ ಆಸ್ಪತ್ರೆ ಸಮೂಹಗಳು ಖಾಸಗಿ ಆಸ್ಪತ್ರೆಗಳು ಖರೀದಿಸಿದ ಒಟ್ಟು ಲಸಿಕೆಗಳಲ್ಲಿ ಅರ್ಧದಷ್ಟನ್ನು ಖರೀದಿಸಿ ಸ್ಟಾಕ್ ಮಾಡಿಕೊಂಡಿವೆ ಎಂದು ಇಂಡಿಯನ್‍ ಎಕ್ಸ್‌ಪ್ರೆಸ್‍ ವರದಿ ಮಾಡಿದೆ.

ಕೇಂದ್ರ ಸರ್ಕಾರವು ತನ್ನ ಲಸಿಕಾ ನೀತಿಯನ್ನು ಪರಿಷ್ಕರಿಸಿ ಮುಕ್ತ ಮಾರುಕಟ್ಟೆಗೆ ಬಿಟ್ಟಿದ್ದರ ಪರಿಣಾಮ ಇದಾಗಿದೆ. ಮೊದಲ ತಿಂಗಳೊಂದರಲ್ಲೇ ಖಾಸಗಿ ಆಸ್ಪತ್ರೆಗಳು ಖರೀದಿಸಿದ 1.20 ಕೋಟಿ ಡೋಸ್‍ ಲಸಿಕೆಗಳಲ್ಲಿ 9 ಕಾರ್ಪೋರೇಟ್‍ ಆಸ್ಪತ್ರೆಗಳು 60.57 ಲಕ್ಷ ಡೋಸ್‍ಗಳನ್ನು ಖರೀದಿಸಿವೆ. ಈ ಪಂಚತಾರಾ ಆಸ್ಪತ್ರೆಗಳು ಹೆಚ್ಚಾಗಿ ಮಹಾನಗರಗಳಲ್ಲೇ ಇದ್ದು, ದೇಶದ ಎರಡನೇ ಹಂತದ ನಗರ-ಪಟ್ಟಣಗಳ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಕೊರತೆಯಾಗಿದೆ. ಬೆಂಗಳೂರಿನ ಮಧ್ಯಮ ಗಾತ್ರದ ಆಸ್ಪತ್ರೆಗಳಲ್ಲೂ ಲಸಿಕೆ ಪ್ರಮಾಣ ಕಡಿಮೆಯಿದೆ.

ಇದು ಲಸಿಕಾ ನೀತಿ ಸೃಷ್ಟಿಸಿರುವ ಅಸಮಾನ ಹಂಚಿಕೆ ಮತ್ತು ಅಸಮಾನ ಲಭ್ಯತೆಗೆ ದಾರಿ ಮಾಡಿಕೊಟ್ಟಿದೆ. ಮೇ ತಿಂಗಳಲ್ಲಿ ಖಾಸಗಿ ವಲಯಕ್ಕೆ ಮೀಸಲಾದ ಕೋವಿಡ್‍ ಲಸಿಕೆಗಳಲ್ಲಿ ಶೇ, 50ರಷ್ಟು ಈ 9 ಕಾರ್ಪೋರೇಟ್‍ ಆಸ್ಪತ್ರೆ ಸಮೂಹಗಳ ಕೈಸೇರಿದೆ.

ಉಳಿದ ಶೇ.50ರಷ್ಟು ಲಸಿಕೆಗಳು ಸುಮಾರು 300 ಆಸ್ಪತ್ರೆಗಳಿಗೆ ವಿತರಣೆಯಾಗಿದೆ. ಈ ಯಾವ ಆಸ್ಪತ್ರೆಗಳೂ  ಎರಡನೇ ಶ್ರೇಣಿಯ ನಗರಗಳಲ್ಲಿ ಕೆಲಸ ನಿರ್ವಹಿಸುತ್ತಿಲ್ಲ.

ಖಾಸಗಿ ಆಸ್ಪತ್ರೆಗಳು ಮೇ ತಿಂಗಳಿನಲ್ಲಿ 1.20 ಕೋಟಿ ಡೋಸ್‍ ಖರೀದಿಸಿದ್ದು, ಈ ತಿಂಗಳಲ್ಲಿ ಖರೀದಿಯಾದ ಲಸಿಕೆಗಳ ಶೇ.15.6ರಷ್ಟಾಗಿದೆ. ರಾಜ್ಯ ಸರ್ಕಾರಗಳು ಶೇ 33.5 (2.66 ಕೋಟಿ ಡೋಸ್‍) ಮತ್ತು ಕೇಂದ್ರ ಸರ್ಕಾರವು ಶೇ. 50.9 (4.03 ಕೋಟಿ ಡೋಸ್‍) ಲಸಿಕೆ ದಾಸ್ತಾನು ಮಾಡಿವೆ.

ಅಪೊಲೋ ಆಸ್ಪತ್ರೆ ಸಮೂಹದ 9 ಆಸ್ಪತ್ರೆಗಳು 16.1 ಲಕ್ಷ ಡೋಸ್‍, ಮ್ಯಾಕ್ಸ್‌ ಕೇರ್‌ನ 6 ಆಸ್ಪತ್ರೆಗಳು 12.97 ಲಕ್ಷ ಡೋಸ್‍, ರಿಲಾಯನ್ಸ್‌ ಫೌಂಡೇಶನ್‍ ನಡೆಸುವ ಎಚ್‍ಎನ್‍ ಟ್ರಸ್ಟ್ ಸಮೂಹ 9.89 ಲಕ್ಷ ಡೋಸ್‍, ಮೆಡಿಕಾ ಸಮೂಹವು 6.26 ಲಕ್ಷ ಡೋಸ್‍, ಪೋರ್ಟಿಸ್‍ ಹೆಲ್ತ್‍ಕೇರ್‌ನ ಎಂಟು ಆಸ್ಪತ್ರೆಗಳು 4.48 ಲಕ್ಷ ಡೋಸ್‍, ಗೋದ್ರೇಜ್‍ ಸಮೂಹ ಆಸ್ಪತ್ರೆಗಳು 3.35 ಲಕ್ಷ, ಮಣಿಪಾಲ್‍ ಹೆಲ್ತ್ ಕೇರ್ ಸಮೂಹ 3.24 ಲಕ್ಷ ಡೋಸ್‍, ನಾರಾಯಣ ಹೃದಯಾಲಯ 2.02 ಲಕ್ಷ ಡೋಸ್‍ ಮತ್ತು ಟೆಕ್ನೋ ಇಂಡಿಯಾ ಸಮೂಹ 2 ಲಕ್ಷ ಡೋಸ್‍ ಖರೀದಿ ಮಾಡಿವೆ.

ಈ ಆಸ್ಪತ್ರೆಗಳು ಮೆಟ್ರೋ, ರಾಜ್ಯ ರಾಜಧಾನಿ ಮತ್ತು ಒಂದನೇ ಶ್ರೇಣಿಯ ನಗರಗಳಲ್ಲಿ ತಮ್ಮ ಘಟಕಗಳನ್ನು ಹೊಂದಿವೆ. ಸೀರಂ ಕಂಪನಿಯ ಕೋವಿಶೀಲ್ಡ್ ಅನ್ನು 600 ರೂ.ಗಳಿಗೆ ಮತ್ತು ಭಾರತ್‍ ಬಯೋಟೆಕ್‍ನ ಕೊವ್ಯಾಕ್ಸಿನ್‍ ಅನ್ನು 1,200 ರೂ,ಗಳಿಗೆ ಈ ಆಸ್ಪತ್ರೆಗಳು ಖರೀದಿಸಿವೆ.

ಬೆಂಗಳೂರಿನ ನ್ಯಾಷನಲ್‍ ಇನ್ಸಿಟ್ಯೂಟ್‍ ಆಫ್‍ ಅಡ್ವಾನ್ಸ್ ಸ್ಟಡೀಸ್‍ನ  ಪ್ರಾಧ್ಯಾಪಕ ತೇಜಲ್‍ ಕಾಂಟಿಕರ್, “ಲಸಿಕಾ ತಯಾರಕ ಕಂಪನಿಗಳು ಹೆಚ್ಚಿನ ದರ ಸಿಗುವ ಕಾರ್ಪೋರೇಟ್‍ ಆಸ್ಪತ್ರೆಗಳಿಗೆ ಲಸಿಕೆ ಮಾರಲು ಆಸಕ್ತಿ ತೋರಿವೆ’’ ಎನ್ನುತ್ತಾರೆ. ಅಂದರೆ ನಿಗದಿತ ದರಕ್ಕಿಂತಲೂ ಹೆಚ್ಚಿನ ದರಕ್ಕೂ ಲಸಿಕೆ ಖರೀದಿಸಿರಬಹುದು ಮತ್ತು ಶ್ರೀಮಂತರಿಗೆ ಅವನ್ನು ಇನ್ನೂ ಹೆಚ್ಚಿನ ದರದಲ್ಲಿ ನೀಡಿರಬಹುದು.

ಈ ಆಸ್ಪತ್ರೆಗಳು ಗ್ರಾಹಕರಿಗೆ ಕೋವಿಶೀಲ್ಡ್ ಅನ್ನು 850-1000 ರೂಗೆ ಮತ್ತು ಕೋವ್ಯಾಕ್ಸಿನ್‍ ಅನ್ನು 1,250 ರೂಗೆ ಒದಗಿಸುತ್ತಿವೆ. ಇದು ನಗರ ನಿವಾಸಿಗಳ ಒಂದು ವರ್ಗಕ್ಕೆ ಮಾತ್ರ ಅನುಕೂಲಕರವಾಗಿದ್ದು, ಕೆಳ ಮಧ್ಯಮ ವರ್ಗದವರ ಕೈಗೆ ಎಟುಕದ ದರವಾಗಿದೆ.

ನಿಮ್ಮಲ್ಲಿರುವ ಲಸಿಕೆಗಳನ್ನು ಸಣ್ಣ ನಗರಗಳಿಗೆ ವಿತರಿಸುತ್ತೀದ್ದೀರಾ ಎಂದು ಇಂಡಿಯನ್  ಎಕ್ಸ್ ಪ್ರೆಸ್‍ ಕೇಳಿದ ಪ್ರಶ್ನೆಗಳಿಗೆ ಈ ಆಸ್ಪತ್ರೆಗಳು ಇನ್ನೂ ಉತ್ತರಿಸಿಲ್ಲ.

ಕೇಂದ್ರದ ಲಸಿಕಾ ನೀತಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರಗಳು ಲಸಿಕೆಯ ಅಸಮಾನ ಹಂಚಿಕೆಯ ಬಗ್ಗೆ ದೂರುತ್ತಿವೆ. ಇದೇ ಹೊತ್ತಲ್ಲಿ ಖಾಸಗಿ ವಲಯಕ್ಕೆ ನಿಗದಿಯಾದ ಲಸಿಕೆಗಳಲ್ಲಿ ಶೇ. 50 ರಷ್ಟು ಕೇವಲ 9 ಸಮೂಹ ಆಸ್ಪತ್ರೆಗಳ ಪಾಲಾಗಿವೆ.

ಉಚಿತ ಲಸಿಕೆ ನೀಡಬೇಕಾದ ಹೊಣೆಯಿಂದ ತಪ್ಪಿಸಿಕೊಂಡ ಕೇಂದ್ರ ಸರ್ಕಾರ ತಯಾರಕ ಕಂಪನಿಗಳು, ದೊಡ್ಡ ಆಸ್ಪತ್ರೆ ಸಮೂಹಗಳ ಪರ ನಿಂತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.


ಇದನ್ನೂ ಓದಿ: ಕೋವಿಡ್-19; ಆದ ಎಡವಟ್ಟುಗಳು ಮತ್ತು ಬೇಕಿರುವ ಎಚ್ಚರ: ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...