Homeಮುಖಪುಟಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ...

ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

- Advertisement -
- Advertisement -

ದೇಶದ 9 ಕಾರ್ಪೋರೇಟ್‍ ಅಂದರೆ ಬೃಹತ್‍ ಆಸ್ಪತ್ರೆ ಸಮೂಹಗಳು ಖಾಸಗಿ ಆಸ್ಪತ್ರೆಗಳು ಖರೀದಿಸಿದ ಒಟ್ಟು ಲಸಿಕೆಗಳಲ್ಲಿ ಅರ್ಧದಷ್ಟನ್ನು ಖರೀದಿಸಿ ಸ್ಟಾಕ್ ಮಾಡಿಕೊಂಡಿವೆ ಎಂದು ಇಂಡಿಯನ್‍ ಎಕ್ಸ್‌ಪ್ರೆಸ್‍ ವರದಿ ಮಾಡಿದೆ.

ಕೇಂದ್ರ ಸರ್ಕಾರವು ತನ್ನ ಲಸಿಕಾ ನೀತಿಯನ್ನು ಪರಿಷ್ಕರಿಸಿ ಮುಕ್ತ ಮಾರುಕಟ್ಟೆಗೆ ಬಿಟ್ಟಿದ್ದರ ಪರಿಣಾಮ ಇದಾಗಿದೆ. ಮೊದಲ ತಿಂಗಳೊಂದರಲ್ಲೇ ಖಾಸಗಿ ಆಸ್ಪತ್ರೆಗಳು ಖರೀದಿಸಿದ 1.20 ಕೋಟಿ ಡೋಸ್‍ ಲಸಿಕೆಗಳಲ್ಲಿ 9 ಕಾರ್ಪೋರೇಟ್‍ ಆಸ್ಪತ್ರೆಗಳು 60.57 ಲಕ್ಷ ಡೋಸ್‍ಗಳನ್ನು ಖರೀದಿಸಿವೆ. ಈ ಪಂಚತಾರಾ ಆಸ್ಪತ್ರೆಗಳು ಹೆಚ್ಚಾಗಿ ಮಹಾನಗರಗಳಲ್ಲೇ ಇದ್ದು, ದೇಶದ ಎರಡನೇ ಹಂತದ ನಗರ-ಪಟ್ಟಣಗಳ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಕೊರತೆಯಾಗಿದೆ. ಬೆಂಗಳೂರಿನ ಮಧ್ಯಮ ಗಾತ್ರದ ಆಸ್ಪತ್ರೆಗಳಲ್ಲೂ ಲಸಿಕೆ ಪ್ರಮಾಣ ಕಡಿಮೆಯಿದೆ.

ಇದು ಲಸಿಕಾ ನೀತಿ ಸೃಷ್ಟಿಸಿರುವ ಅಸಮಾನ ಹಂಚಿಕೆ ಮತ್ತು ಅಸಮಾನ ಲಭ್ಯತೆಗೆ ದಾರಿ ಮಾಡಿಕೊಟ್ಟಿದೆ. ಮೇ ತಿಂಗಳಲ್ಲಿ ಖಾಸಗಿ ವಲಯಕ್ಕೆ ಮೀಸಲಾದ ಕೋವಿಡ್‍ ಲಸಿಕೆಗಳಲ್ಲಿ ಶೇ, 50ರಷ್ಟು ಈ 9 ಕಾರ್ಪೋರೇಟ್‍ ಆಸ್ಪತ್ರೆ ಸಮೂಹಗಳ ಕೈಸೇರಿದೆ.

ಉಳಿದ ಶೇ.50ರಷ್ಟು ಲಸಿಕೆಗಳು ಸುಮಾರು 300 ಆಸ್ಪತ್ರೆಗಳಿಗೆ ವಿತರಣೆಯಾಗಿದೆ. ಈ ಯಾವ ಆಸ್ಪತ್ರೆಗಳೂ  ಎರಡನೇ ಶ್ರೇಣಿಯ ನಗರಗಳಲ್ಲಿ ಕೆಲಸ ನಿರ್ವಹಿಸುತ್ತಿಲ್ಲ.

ಖಾಸಗಿ ಆಸ್ಪತ್ರೆಗಳು ಮೇ ತಿಂಗಳಿನಲ್ಲಿ 1.20 ಕೋಟಿ ಡೋಸ್‍ ಖರೀದಿಸಿದ್ದು, ಈ ತಿಂಗಳಲ್ಲಿ ಖರೀದಿಯಾದ ಲಸಿಕೆಗಳ ಶೇ.15.6ರಷ್ಟಾಗಿದೆ. ರಾಜ್ಯ ಸರ್ಕಾರಗಳು ಶೇ 33.5 (2.66 ಕೋಟಿ ಡೋಸ್‍) ಮತ್ತು ಕೇಂದ್ರ ಸರ್ಕಾರವು ಶೇ. 50.9 (4.03 ಕೋಟಿ ಡೋಸ್‍) ಲಸಿಕೆ ದಾಸ್ತಾನು ಮಾಡಿವೆ.

ಅಪೊಲೋ ಆಸ್ಪತ್ರೆ ಸಮೂಹದ 9 ಆಸ್ಪತ್ರೆಗಳು 16.1 ಲಕ್ಷ ಡೋಸ್‍, ಮ್ಯಾಕ್ಸ್‌ ಕೇರ್‌ನ 6 ಆಸ್ಪತ್ರೆಗಳು 12.97 ಲಕ್ಷ ಡೋಸ್‍, ರಿಲಾಯನ್ಸ್‌ ಫೌಂಡೇಶನ್‍ ನಡೆಸುವ ಎಚ್‍ಎನ್‍ ಟ್ರಸ್ಟ್ ಸಮೂಹ 9.89 ಲಕ್ಷ ಡೋಸ್‍, ಮೆಡಿಕಾ ಸಮೂಹವು 6.26 ಲಕ್ಷ ಡೋಸ್‍, ಪೋರ್ಟಿಸ್‍ ಹೆಲ್ತ್‍ಕೇರ್‌ನ ಎಂಟು ಆಸ್ಪತ್ರೆಗಳು 4.48 ಲಕ್ಷ ಡೋಸ್‍, ಗೋದ್ರೇಜ್‍ ಸಮೂಹ ಆಸ್ಪತ್ರೆಗಳು 3.35 ಲಕ್ಷ, ಮಣಿಪಾಲ್‍ ಹೆಲ್ತ್ ಕೇರ್ ಸಮೂಹ 3.24 ಲಕ್ಷ ಡೋಸ್‍, ನಾರಾಯಣ ಹೃದಯಾಲಯ 2.02 ಲಕ್ಷ ಡೋಸ್‍ ಮತ್ತು ಟೆಕ್ನೋ ಇಂಡಿಯಾ ಸಮೂಹ 2 ಲಕ್ಷ ಡೋಸ್‍ ಖರೀದಿ ಮಾಡಿವೆ.

ಈ ಆಸ್ಪತ್ರೆಗಳು ಮೆಟ್ರೋ, ರಾಜ್ಯ ರಾಜಧಾನಿ ಮತ್ತು ಒಂದನೇ ಶ್ರೇಣಿಯ ನಗರಗಳಲ್ಲಿ ತಮ್ಮ ಘಟಕಗಳನ್ನು ಹೊಂದಿವೆ. ಸೀರಂ ಕಂಪನಿಯ ಕೋವಿಶೀಲ್ಡ್ ಅನ್ನು 600 ರೂ.ಗಳಿಗೆ ಮತ್ತು ಭಾರತ್‍ ಬಯೋಟೆಕ್‍ನ ಕೊವ್ಯಾಕ್ಸಿನ್‍ ಅನ್ನು 1,200 ರೂ,ಗಳಿಗೆ ಈ ಆಸ್ಪತ್ರೆಗಳು ಖರೀದಿಸಿವೆ.

ಬೆಂಗಳೂರಿನ ನ್ಯಾಷನಲ್‍ ಇನ್ಸಿಟ್ಯೂಟ್‍ ಆಫ್‍ ಅಡ್ವಾನ್ಸ್ ಸ್ಟಡೀಸ್‍ನ  ಪ್ರಾಧ್ಯಾಪಕ ತೇಜಲ್‍ ಕಾಂಟಿಕರ್, “ಲಸಿಕಾ ತಯಾರಕ ಕಂಪನಿಗಳು ಹೆಚ್ಚಿನ ದರ ಸಿಗುವ ಕಾರ್ಪೋರೇಟ್‍ ಆಸ್ಪತ್ರೆಗಳಿಗೆ ಲಸಿಕೆ ಮಾರಲು ಆಸಕ್ತಿ ತೋರಿವೆ’’ ಎನ್ನುತ್ತಾರೆ. ಅಂದರೆ ನಿಗದಿತ ದರಕ್ಕಿಂತಲೂ ಹೆಚ್ಚಿನ ದರಕ್ಕೂ ಲಸಿಕೆ ಖರೀದಿಸಿರಬಹುದು ಮತ್ತು ಶ್ರೀಮಂತರಿಗೆ ಅವನ್ನು ಇನ್ನೂ ಹೆಚ್ಚಿನ ದರದಲ್ಲಿ ನೀಡಿರಬಹುದು.

ಈ ಆಸ್ಪತ್ರೆಗಳು ಗ್ರಾಹಕರಿಗೆ ಕೋವಿಶೀಲ್ಡ್ ಅನ್ನು 850-1000 ರೂಗೆ ಮತ್ತು ಕೋವ್ಯಾಕ್ಸಿನ್‍ ಅನ್ನು 1,250 ರೂಗೆ ಒದಗಿಸುತ್ತಿವೆ. ಇದು ನಗರ ನಿವಾಸಿಗಳ ಒಂದು ವರ್ಗಕ್ಕೆ ಮಾತ್ರ ಅನುಕೂಲಕರವಾಗಿದ್ದು, ಕೆಳ ಮಧ್ಯಮ ವರ್ಗದವರ ಕೈಗೆ ಎಟುಕದ ದರವಾಗಿದೆ.

ನಿಮ್ಮಲ್ಲಿರುವ ಲಸಿಕೆಗಳನ್ನು ಸಣ್ಣ ನಗರಗಳಿಗೆ ವಿತರಿಸುತ್ತೀದ್ದೀರಾ ಎಂದು ಇಂಡಿಯನ್  ಎಕ್ಸ್ ಪ್ರೆಸ್‍ ಕೇಳಿದ ಪ್ರಶ್ನೆಗಳಿಗೆ ಈ ಆಸ್ಪತ್ರೆಗಳು ಇನ್ನೂ ಉತ್ತರಿಸಿಲ್ಲ.

ಕೇಂದ್ರದ ಲಸಿಕಾ ನೀತಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರಗಳು ಲಸಿಕೆಯ ಅಸಮಾನ ಹಂಚಿಕೆಯ ಬಗ್ಗೆ ದೂರುತ್ತಿವೆ. ಇದೇ ಹೊತ್ತಲ್ಲಿ ಖಾಸಗಿ ವಲಯಕ್ಕೆ ನಿಗದಿಯಾದ ಲಸಿಕೆಗಳಲ್ಲಿ ಶೇ. 50 ರಷ್ಟು ಕೇವಲ 9 ಸಮೂಹ ಆಸ್ಪತ್ರೆಗಳ ಪಾಲಾಗಿವೆ.

ಉಚಿತ ಲಸಿಕೆ ನೀಡಬೇಕಾದ ಹೊಣೆಯಿಂದ ತಪ್ಪಿಸಿಕೊಂಡ ಕೇಂದ್ರ ಸರ್ಕಾರ ತಯಾರಕ ಕಂಪನಿಗಳು, ದೊಡ್ಡ ಆಸ್ಪತ್ರೆ ಸಮೂಹಗಳ ಪರ ನಿಂತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.


ಇದನ್ನೂ ಓದಿ: ಕೋವಿಡ್-19; ಆದ ಎಡವಟ್ಟುಗಳು ಮತ್ತು ಬೇಕಿರುವ ಎಚ್ಚರ: ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...