Homeಮುಖಪುಟಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ...

ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

- Advertisement -
- Advertisement -

ದೇಶದ 9 ಕಾರ್ಪೋರೇಟ್‍ ಅಂದರೆ ಬೃಹತ್‍ ಆಸ್ಪತ್ರೆ ಸಮೂಹಗಳು ಖಾಸಗಿ ಆಸ್ಪತ್ರೆಗಳು ಖರೀದಿಸಿದ ಒಟ್ಟು ಲಸಿಕೆಗಳಲ್ಲಿ ಅರ್ಧದಷ್ಟನ್ನು ಖರೀದಿಸಿ ಸ್ಟಾಕ್ ಮಾಡಿಕೊಂಡಿವೆ ಎಂದು ಇಂಡಿಯನ್‍ ಎಕ್ಸ್‌ಪ್ರೆಸ್‍ ವರದಿ ಮಾಡಿದೆ.

ಕೇಂದ್ರ ಸರ್ಕಾರವು ತನ್ನ ಲಸಿಕಾ ನೀತಿಯನ್ನು ಪರಿಷ್ಕರಿಸಿ ಮುಕ್ತ ಮಾರುಕಟ್ಟೆಗೆ ಬಿಟ್ಟಿದ್ದರ ಪರಿಣಾಮ ಇದಾಗಿದೆ. ಮೊದಲ ತಿಂಗಳೊಂದರಲ್ಲೇ ಖಾಸಗಿ ಆಸ್ಪತ್ರೆಗಳು ಖರೀದಿಸಿದ 1.20 ಕೋಟಿ ಡೋಸ್‍ ಲಸಿಕೆಗಳಲ್ಲಿ 9 ಕಾರ್ಪೋರೇಟ್‍ ಆಸ್ಪತ್ರೆಗಳು 60.57 ಲಕ್ಷ ಡೋಸ್‍ಗಳನ್ನು ಖರೀದಿಸಿವೆ. ಈ ಪಂಚತಾರಾ ಆಸ್ಪತ್ರೆಗಳು ಹೆಚ್ಚಾಗಿ ಮಹಾನಗರಗಳಲ್ಲೇ ಇದ್ದು, ದೇಶದ ಎರಡನೇ ಹಂತದ ನಗರ-ಪಟ್ಟಣಗಳ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಕೊರತೆಯಾಗಿದೆ. ಬೆಂಗಳೂರಿನ ಮಧ್ಯಮ ಗಾತ್ರದ ಆಸ್ಪತ್ರೆಗಳಲ್ಲೂ ಲಸಿಕೆ ಪ್ರಮಾಣ ಕಡಿಮೆಯಿದೆ.

ಇದು ಲಸಿಕಾ ನೀತಿ ಸೃಷ್ಟಿಸಿರುವ ಅಸಮಾನ ಹಂಚಿಕೆ ಮತ್ತು ಅಸಮಾನ ಲಭ್ಯತೆಗೆ ದಾರಿ ಮಾಡಿಕೊಟ್ಟಿದೆ. ಮೇ ತಿಂಗಳಲ್ಲಿ ಖಾಸಗಿ ವಲಯಕ್ಕೆ ಮೀಸಲಾದ ಕೋವಿಡ್‍ ಲಸಿಕೆಗಳಲ್ಲಿ ಶೇ, 50ರಷ್ಟು ಈ 9 ಕಾರ್ಪೋರೇಟ್‍ ಆಸ್ಪತ್ರೆ ಸಮೂಹಗಳ ಕೈಸೇರಿದೆ.

ಉಳಿದ ಶೇ.50ರಷ್ಟು ಲಸಿಕೆಗಳು ಸುಮಾರು 300 ಆಸ್ಪತ್ರೆಗಳಿಗೆ ವಿತರಣೆಯಾಗಿದೆ. ಈ ಯಾವ ಆಸ್ಪತ್ರೆಗಳೂ  ಎರಡನೇ ಶ್ರೇಣಿಯ ನಗರಗಳಲ್ಲಿ ಕೆಲಸ ನಿರ್ವಹಿಸುತ್ತಿಲ್ಲ.

ಖಾಸಗಿ ಆಸ್ಪತ್ರೆಗಳು ಮೇ ತಿಂಗಳಿನಲ್ಲಿ 1.20 ಕೋಟಿ ಡೋಸ್‍ ಖರೀದಿಸಿದ್ದು, ಈ ತಿಂಗಳಲ್ಲಿ ಖರೀದಿಯಾದ ಲಸಿಕೆಗಳ ಶೇ.15.6ರಷ್ಟಾಗಿದೆ. ರಾಜ್ಯ ಸರ್ಕಾರಗಳು ಶೇ 33.5 (2.66 ಕೋಟಿ ಡೋಸ್‍) ಮತ್ತು ಕೇಂದ್ರ ಸರ್ಕಾರವು ಶೇ. 50.9 (4.03 ಕೋಟಿ ಡೋಸ್‍) ಲಸಿಕೆ ದಾಸ್ತಾನು ಮಾಡಿವೆ.

ಅಪೊಲೋ ಆಸ್ಪತ್ರೆ ಸಮೂಹದ 9 ಆಸ್ಪತ್ರೆಗಳು 16.1 ಲಕ್ಷ ಡೋಸ್‍, ಮ್ಯಾಕ್ಸ್‌ ಕೇರ್‌ನ 6 ಆಸ್ಪತ್ರೆಗಳು 12.97 ಲಕ್ಷ ಡೋಸ್‍, ರಿಲಾಯನ್ಸ್‌ ಫೌಂಡೇಶನ್‍ ನಡೆಸುವ ಎಚ್‍ಎನ್‍ ಟ್ರಸ್ಟ್ ಸಮೂಹ 9.89 ಲಕ್ಷ ಡೋಸ್‍, ಮೆಡಿಕಾ ಸಮೂಹವು 6.26 ಲಕ್ಷ ಡೋಸ್‍, ಪೋರ್ಟಿಸ್‍ ಹೆಲ್ತ್‍ಕೇರ್‌ನ ಎಂಟು ಆಸ್ಪತ್ರೆಗಳು 4.48 ಲಕ್ಷ ಡೋಸ್‍, ಗೋದ್ರೇಜ್‍ ಸಮೂಹ ಆಸ್ಪತ್ರೆಗಳು 3.35 ಲಕ್ಷ, ಮಣಿಪಾಲ್‍ ಹೆಲ್ತ್ ಕೇರ್ ಸಮೂಹ 3.24 ಲಕ್ಷ ಡೋಸ್‍, ನಾರಾಯಣ ಹೃದಯಾಲಯ 2.02 ಲಕ್ಷ ಡೋಸ್‍ ಮತ್ತು ಟೆಕ್ನೋ ಇಂಡಿಯಾ ಸಮೂಹ 2 ಲಕ್ಷ ಡೋಸ್‍ ಖರೀದಿ ಮಾಡಿವೆ.

ಈ ಆಸ್ಪತ್ರೆಗಳು ಮೆಟ್ರೋ, ರಾಜ್ಯ ರಾಜಧಾನಿ ಮತ್ತು ಒಂದನೇ ಶ್ರೇಣಿಯ ನಗರಗಳಲ್ಲಿ ತಮ್ಮ ಘಟಕಗಳನ್ನು ಹೊಂದಿವೆ. ಸೀರಂ ಕಂಪನಿಯ ಕೋವಿಶೀಲ್ಡ್ ಅನ್ನು 600 ರೂ.ಗಳಿಗೆ ಮತ್ತು ಭಾರತ್‍ ಬಯೋಟೆಕ್‍ನ ಕೊವ್ಯಾಕ್ಸಿನ್‍ ಅನ್ನು 1,200 ರೂ,ಗಳಿಗೆ ಈ ಆಸ್ಪತ್ರೆಗಳು ಖರೀದಿಸಿವೆ.

ಬೆಂಗಳೂರಿನ ನ್ಯಾಷನಲ್‍ ಇನ್ಸಿಟ್ಯೂಟ್‍ ಆಫ್‍ ಅಡ್ವಾನ್ಸ್ ಸ್ಟಡೀಸ್‍ನ  ಪ್ರಾಧ್ಯಾಪಕ ತೇಜಲ್‍ ಕಾಂಟಿಕರ್, “ಲಸಿಕಾ ತಯಾರಕ ಕಂಪನಿಗಳು ಹೆಚ್ಚಿನ ದರ ಸಿಗುವ ಕಾರ್ಪೋರೇಟ್‍ ಆಸ್ಪತ್ರೆಗಳಿಗೆ ಲಸಿಕೆ ಮಾರಲು ಆಸಕ್ತಿ ತೋರಿವೆ’’ ಎನ್ನುತ್ತಾರೆ. ಅಂದರೆ ನಿಗದಿತ ದರಕ್ಕಿಂತಲೂ ಹೆಚ್ಚಿನ ದರಕ್ಕೂ ಲಸಿಕೆ ಖರೀದಿಸಿರಬಹುದು ಮತ್ತು ಶ್ರೀಮಂತರಿಗೆ ಅವನ್ನು ಇನ್ನೂ ಹೆಚ್ಚಿನ ದರದಲ್ಲಿ ನೀಡಿರಬಹುದು.

ಈ ಆಸ್ಪತ್ರೆಗಳು ಗ್ರಾಹಕರಿಗೆ ಕೋವಿಶೀಲ್ಡ್ ಅನ್ನು 850-1000 ರೂಗೆ ಮತ್ತು ಕೋವ್ಯಾಕ್ಸಿನ್‍ ಅನ್ನು 1,250 ರೂಗೆ ಒದಗಿಸುತ್ತಿವೆ. ಇದು ನಗರ ನಿವಾಸಿಗಳ ಒಂದು ವರ್ಗಕ್ಕೆ ಮಾತ್ರ ಅನುಕೂಲಕರವಾಗಿದ್ದು, ಕೆಳ ಮಧ್ಯಮ ವರ್ಗದವರ ಕೈಗೆ ಎಟುಕದ ದರವಾಗಿದೆ.

ನಿಮ್ಮಲ್ಲಿರುವ ಲಸಿಕೆಗಳನ್ನು ಸಣ್ಣ ನಗರಗಳಿಗೆ ವಿತರಿಸುತ್ತೀದ್ದೀರಾ ಎಂದು ಇಂಡಿಯನ್  ಎಕ್ಸ್ ಪ್ರೆಸ್‍ ಕೇಳಿದ ಪ್ರಶ್ನೆಗಳಿಗೆ ಈ ಆಸ್ಪತ್ರೆಗಳು ಇನ್ನೂ ಉತ್ತರಿಸಿಲ್ಲ.

ಕೇಂದ್ರದ ಲಸಿಕಾ ನೀತಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರಗಳು ಲಸಿಕೆಯ ಅಸಮಾನ ಹಂಚಿಕೆಯ ಬಗ್ಗೆ ದೂರುತ್ತಿವೆ. ಇದೇ ಹೊತ್ತಲ್ಲಿ ಖಾಸಗಿ ವಲಯಕ್ಕೆ ನಿಗದಿಯಾದ ಲಸಿಕೆಗಳಲ್ಲಿ ಶೇ. 50 ರಷ್ಟು ಕೇವಲ 9 ಸಮೂಹ ಆಸ್ಪತ್ರೆಗಳ ಪಾಲಾಗಿವೆ.

ಉಚಿತ ಲಸಿಕೆ ನೀಡಬೇಕಾದ ಹೊಣೆಯಿಂದ ತಪ್ಪಿಸಿಕೊಂಡ ಕೇಂದ್ರ ಸರ್ಕಾರ ತಯಾರಕ ಕಂಪನಿಗಳು, ದೊಡ್ಡ ಆಸ್ಪತ್ರೆ ಸಮೂಹಗಳ ಪರ ನಿಂತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.


ಇದನ್ನೂ ಓದಿ: ಕೋವಿಡ್-19; ಆದ ಎಡವಟ್ಟುಗಳು ಮತ್ತು ಬೇಕಿರುವ ಎಚ್ಚರ: ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...