Homeಮುಖಪುಟಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ...

ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

- Advertisement -
- Advertisement -

ದೇಶದ 9 ಕಾರ್ಪೋರೇಟ್‍ ಅಂದರೆ ಬೃಹತ್‍ ಆಸ್ಪತ್ರೆ ಸಮೂಹಗಳು ಖಾಸಗಿ ಆಸ್ಪತ್ರೆಗಳು ಖರೀದಿಸಿದ ಒಟ್ಟು ಲಸಿಕೆಗಳಲ್ಲಿ ಅರ್ಧದಷ್ಟನ್ನು ಖರೀದಿಸಿ ಸ್ಟಾಕ್ ಮಾಡಿಕೊಂಡಿವೆ ಎಂದು ಇಂಡಿಯನ್‍ ಎಕ್ಸ್‌ಪ್ರೆಸ್‍ ವರದಿ ಮಾಡಿದೆ.

ಕೇಂದ್ರ ಸರ್ಕಾರವು ತನ್ನ ಲಸಿಕಾ ನೀತಿಯನ್ನು ಪರಿಷ್ಕರಿಸಿ ಮುಕ್ತ ಮಾರುಕಟ್ಟೆಗೆ ಬಿಟ್ಟಿದ್ದರ ಪರಿಣಾಮ ಇದಾಗಿದೆ. ಮೊದಲ ತಿಂಗಳೊಂದರಲ್ಲೇ ಖಾಸಗಿ ಆಸ್ಪತ್ರೆಗಳು ಖರೀದಿಸಿದ 1.20 ಕೋಟಿ ಡೋಸ್‍ ಲಸಿಕೆಗಳಲ್ಲಿ 9 ಕಾರ್ಪೋರೇಟ್‍ ಆಸ್ಪತ್ರೆಗಳು 60.57 ಲಕ್ಷ ಡೋಸ್‍ಗಳನ್ನು ಖರೀದಿಸಿವೆ. ಈ ಪಂಚತಾರಾ ಆಸ್ಪತ್ರೆಗಳು ಹೆಚ್ಚಾಗಿ ಮಹಾನಗರಗಳಲ್ಲೇ ಇದ್ದು, ದೇಶದ ಎರಡನೇ ಹಂತದ ನಗರ-ಪಟ್ಟಣಗಳ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಕೊರತೆಯಾಗಿದೆ. ಬೆಂಗಳೂರಿನ ಮಧ್ಯಮ ಗಾತ್ರದ ಆಸ್ಪತ್ರೆಗಳಲ್ಲೂ ಲಸಿಕೆ ಪ್ರಮಾಣ ಕಡಿಮೆಯಿದೆ.

ಇದು ಲಸಿಕಾ ನೀತಿ ಸೃಷ್ಟಿಸಿರುವ ಅಸಮಾನ ಹಂಚಿಕೆ ಮತ್ತು ಅಸಮಾನ ಲಭ್ಯತೆಗೆ ದಾರಿ ಮಾಡಿಕೊಟ್ಟಿದೆ. ಮೇ ತಿಂಗಳಲ್ಲಿ ಖಾಸಗಿ ವಲಯಕ್ಕೆ ಮೀಸಲಾದ ಕೋವಿಡ್‍ ಲಸಿಕೆಗಳಲ್ಲಿ ಶೇ, 50ರಷ್ಟು ಈ 9 ಕಾರ್ಪೋರೇಟ್‍ ಆಸ್ಪತ್ರೆ ಸಮೂಹಗಳ ಕೈಸೇರಿದೆ.

ಉಳಿದ ಶೇ.50ರಷ್ಟು ಲಸಿಕೆಗಳು ಸುಮಾರು 300 ಆಸ್ಪತ್ರೆಗಳಿಗೆ ವಿತರಣೆಯಾಗಿದೆ. ಈ ಯಾವ ಆಸ್ಪತ್ರೆಗಳೂ  ಎರಡನೇ ಶ್ರೇಣಿಯ ನಗರಗಳಲ್ಲಿ ಕೆಲಸ ನಿರ್ವಹಿಸುತ್ತಿಲ್ಲ.

ಖಾಸಗಿ ಆಸ್ಪತ್ರೆಗಳು ಮೇ ತಿಂಗಳಿನಲ್ಲಿ 1.20 ಕೋಟಿ ಡೋಸ್‍ ಖರೀದಿಸಿದ್ದು, ಈ ತಿಂಗಳಲ್ಲಿ ಖರೀದಿಯಾದ ಲಸಿಕೆಗಳ ಶೇ.15.6ರಷ್ಟಾಗಿದೆ. ರಾಜ್ಯ ಸರ್ಕಾರಗಳು ಶೇ 33.5 (2.66 ಕೋಟಿ ಡೋಸ್‍) ಮತ್ತು ಕೇಂದ್ರ ಸರ್ಕಾರವು ಶೇ. 50.9 (4.03 ಕೋಟಿ ಡೋಸ್‍) ಲಸಿಕೆ ದಾಸ್ತಾನು ಮಾಡಿವೆ.

ಅಪೊಲೋ ಆಸ್ಪತ್ರೆ ಸಮೂಹದ 9 ಆಸ್ಪತ್ರೆಗಳು 16.1 ಲಕ್ಷ ಡೋಸ್‍, ಮ್ಯಾಕ್ಸ್‌ ಕೇರ್‌ನ 6 ಆಸ್ಪತ್ರೆಗಳು 12.97 ಲಕ್ಷ ಡೋಸ್‍, ರಿಲಾಯನ್ಸ್‌ ಫೌಂಡೇಶನ್‍ ನಡೆಸುವ ಎಚ್‍ಎನ್‍ ಟ್ರಸ್ಟ್ ಸಮೂಹ 9.89 ಲಕ್ಷ ಡೋಸ್‍, ಮೆಡಿಕಾ ಸಮೂಹವು 6.26 ಲಕ್ಷ ಡೋಸ್‍, ಪೋರ್ಟಿಸ್‍ ಹೆಲ್ತ್‍ಕೇರ್‌ನ ಎಂಟು ಆಸ್ಪತ್ರೆಗಳು 4.48 ಲಕ್ಷ ಡೋಸ್‍, ಗೋದ್ರೇಜ್‍ ಸಮೂಹ ಆಸ್ಪತ್ರೆಗಳು 3.35 ಲಕ್ಷ, ಮಣಿಪಾಲ್‍ ಹೆಲ್ತ್ ಕೇರ್ ಸಮೂಹ 3.24 ಲಕ್ಷ ಡೋಸ್‍, ನಾರಾಯಣ ಹೃದಯಾಲಯ 2.02 ಲಕ್ಷ ಡೋಸ್‍ ಮತ್ತು ಟೆಕ್ನೋ ಇಂಡಿಯಾ ಸಮೂಹ 2 ಲಕ್ಷ ಡೋಸ್‍ ಖರೀದಿ ಮಾಡಿವೆ.

ಈ ಆಸ್ಪತ್ರೆಗಳು ಮೆಟ್ರೋ, ರಾಜ್ಯ ರಾಜಧಾನಿ ಮತ್ತು ಒಂದನೇ ಶ್ರೇಣಿಯ ನಗರಗಳಲ್ಲಿ ತಮ್ಮ ಘಟಕಗಳನ್ನು ಹೊಂದಿವೆ. ಸೀರಂ ಕಂಪನಿಯ ಕೋವಿಶೀಲ್ಡ್ ಅನ್ನು 600 ರೂ.ಗಳಿಗೆ ಮತ್ತು ಭಾರತ್‍ ಬಯೋಟೆಕ್‍ನ ಕೊವ್ಯಾಕ್ಸಿನ್‍ ಅನ್ನು 1,200 ರೂ,ಗಳಿಗೆ ಈ ಆಸ್ಪತ್ರೆಗಳು ಖರೀದಿಸಿವೆ.

ಬೆಂಗಳೂರಿನ ನ್ಯಾಷನಲ್‍ ಇನ್ಸಿಟ್ಯೂಟ್‍ ಆಫ್‍ ಅಡ್ವಾನ್ಸ್ ಸ್ಟಡೀಸ್‍ನ  ಪ್ರಾಧ್ಯಾಪಕ ತೇಜಲ್‍ ಕಾಂಟಿಕರ್, “ಲಸಿಕಾ ತಯಾರಕ ಕಂಪನಿಗಳು ಹೆಚ್ಚಿನ ದರ ಸಿಗುವ ಕಾರ್ಪೋರೇಟ್‍ ಆಸ್ಪತ್ರೆಗಳಿಗೆ ಲಸಿಕೆ ಮಾರಲು ಆಸಕ್ತಿ ತೋರಿವೆ’’ ಎನ್ನುತ್ತಾರೆ. ಅಂದರೆ ನಿಗದಿತ ದರಕ್ಕಿಂತಲೂ ಹೆಚ್ಚಿನ ದರಕ್ಕೂ ಲಸಿಕೆ ಖರೀದಿಸಿರಬಹುದು ಮತ್ತು ಶ್ರೀಮಂತರಿಗೆ ಅವನ್ನು ಇನ್ನೂ ಹೆಚ್ಚಿನ ದರದಲ್ಲಿ ನೀಡಿರಬಹುದು.

ಈ ಆಸ್ಪತ್ರೆಗಳು ಗ್ರಾಹಕರಿಗೆ ಕೋವಿಶೀಲ್ಡ್ ಅನ್ನು 850-1000 ರೂಗೆ ಮತ್ತು ಕೋವ್ಯಾಕ್ಸಿನ್‍ ಅನ್ನು 1,250 ರೂಗೆ ಒದಗಿಸುತ್ತಿವೆ. ಇದು ನಗರ ನಿವಾಸಿಗಳ ಒಂದು ವರ್ಗಕ್ಕೆ ಮಾತ್ರ ಅನುಕೂಲಕರವಾಗಿದ್ದು, ಕೆಳ ಮಧ್ಯಮ ವರ್ಗದವರ ಕೈಗೆ ಎಟುಕದ ದರವಾಗಿದೆ.

ನಿಮ್ಮಲ್ಲಿರುವ ಲಸಿಕೆಗಳನ್ನು ಸಣ್ಣ ನಗರಗಳಿಗೆ ವಿತರಿಸುತ್ತೀದ್ದೀರಾ ಎಂದು ಇಂಡಿಯನ್  ಎಕ್ಸ್ ಪ್ರೆಸ್‍ ಕೇಳಿದ ಪ್ರಶ್ನೆಗಳಿಗೆ ಈ ಆಸ್ಪತ್ರೆಗಳು ಇನ್ನೂ ಉತ್ತರಿಸಿಲ್ಲ.

ಕೇಂದ್ರದ ಲಸಿಕಾ ನೀತಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರಗಳು ಲಸಿಕೆಯ ಅಸಮಾನ ಹಂಚಿಕೆಯ ಬಗ್ಗೆ ದೂರುತ್ತಿವೆ. ಇದೇ ಹೊತ್ತಲ್ಲಿ ಖಾಸಗಿ ವಲಯಕ್ಕೆ ನಿಗದಿಯಾದ ಲಸಿಕೆಗಳಲ್ಲಿ ಶೇ. 50 ರಷ್ಟು ಕೇವಲ 9 ಸಮೂಹ ಆಸ್ಪತ್ರೆಗಳ ಪಾಲಾಗಿವೆ.

ಉಚಿತ ಲಸಿಕೆ ನೀಡಬೇಕಾದ ಹೊಣೆಯಿಂದ ತಪ್ಪಿಸಿಕೊಂಡ ಕೇಂದ್ರ ಸರ್ಕಾರ ತಯಾರಕ ಕಂಪನಿಗಳು, ದೊಡ್ಡ ಆಸ್ಪತ್ರೆ ಸಮೂಹಗಳ ಪರ ನಿಂತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.


ಇದನ್ನೂ ಓದಿ: ಕೋವಿಡ್-19; ಆದ ಎಡವಟ್ಟುಗಳು ಮತ್ತು ಬೇಕಿರುವ ಎಚ್ಚರ: ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...