Homeಕರೋನಾ ತಲ್ಲಣಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ

- Advertisement -
- Advertisement -

ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿಯೂ ಕೊರೊನಾ ನಡುವೆಯೇ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಿದ್ದರಿಂದ, ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಆರೋಪಿಸಿ ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡ ಕಾರಣ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ.

ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

“ಇತ್ತೀಚಿನ ದಿನಗಳಲ್ಲಿ ಇಡೀ ದೇಶವು ತೀವ್ರ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ  ದೇಶಾದ್ಯಂತ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಸೋಂಕಿತರ ಸಂಖ್ಯೆ ಮತ್ತು ಸತ್ತವರ ಸಂಖ್ಯೆಯು ಪ್ರತಿದಿನ ಹೆಚ್ಚಾಗುತ್ತಿದ್ದರೂ, ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ, ಸೂಕ್ಷ್ಮವಲ್ಲದ ಕ್ರಮಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂಬುದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸ್‌ಗಳಲ್ಲಿ ಪ್ರವೇಶಕ್ಕಾಗಿ ಮಂಗಳವಾರ ರಾಷ್ಟ್ರವ್ಯಾಪಿ ಪ್ರಾರಂಭವಾದ ಜೆಇಇ ಪರೀಕ್ಷೆಯನ್ನು ಬರೆಯಲು ಗುಜರಾತ್‌ನ ಸುಮಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ.

“ಮೊದಲ ದಿನ, ನೋಂದಾಯಿತ 3,020 ವಿದ್ಯಾರ್ಥಿಗಳಲ್ಲಿ 1,664 (55%) ಮಾತ್ರ ಹಾಜರಿದ್ದರು. ಆದರೆ 1,356 (45%) ಮಂದಿ ಹಾಜರಾಗಲಿಲ್ಲ. ಸಾಮಾನ್ಯವಾಗಿ, ಪ್ರತಿವರ್ಷ 25-30% ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಿಟ್ಟುಬಿಡುತ್ತಾರೆ. ಈ ವರ್ಷ ಶೇಕಡಾವಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ” ಎಂದು ಗುಜರಾತ್‌ನ ಜೆಇಇ ಸಂಯೋಜಕ ವೀರೇಂದ್ರ ರಾವತ್ ಹೇಳಿದರು.

ಗುಜರಾತ್‌ನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಸುಮಾರು 50% ಅಭ್ಯರ್ಥಿಗಳು ಜೆಇಇ ಪರೀಕ್ಷೆಯನ್ನು ಬರೆದಿಲ್ಲ. ಅಸ್ಸಾಂ ಮತ್ತು ಡೆಹ್ರಾಡೂನ್‌ನಲ್ಲಿ 50% ಗೈರಾಗಿದ್ದು, ಉತ್ತರ ಪ್ರದೇಶದಲ್ಲಿ 44%, ಜಾರ್ಖಂಡ್ ಮತ್ತು ರಾಯ್ ಪುರದಲ್ಲಿ ಕ್ರಮವಾಗಿ 31.42% ಮತ್ತು 58% ಅಭ್ಯರ್ಥಿಗಳು ಮೊದಲ ದಿನ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ವರದಿಗಳು ತಿಳಿಸಿವೆ.

ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯುತ್ತಿರುವ ಜೆಇಇ ಪರೀಕ್ಷೆಗೆ 8.58 ಲಕ್ಷ ಎಂಜಿನಿಯರಿಂಗ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 13 ರಂದು ನಡೆಸಲು ನಿರ್ಧರಿಸಲಾಗಿರುವ ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ನೀಟ್‌ ಪರೀಕ್ಷೆಯನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕಾರಣದಿಂದ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...