Homeಕರೋನಾ ತಲ್ಲಣಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ

- Advertisement -
- Advertisement -

ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿಯೂ ಕೊರೊನಾ ನಡುವೆಯೇ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಿದ್ದರಿಂದ, ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಆರೋಪಿಸಿ ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡ ಕಾರಣ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ.

ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

“ಇತ್ತೀಚಿನ ದಿನಗಳಲ್ಲಿ ಇಡೀ ದೇಶವು ತೀವ್ರ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ  ದೇಶಾದ್ಯಂತ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಸೋಂಕಿತರ ಸಂಖ್ಯೆ ಮತ್ತು ಸತ್ತವರ ಸಂಖ್ಯೆಯು ಪ್ರತಿದಿನ ಹೆಚ್ಚಾಗುತ್ತಿದ್ದರೂ, ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ, ಸೂಕ್ಷ್ಮವಲ್ಲದ ಕ್ರಮಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂಬುದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸ್‌ಗಳಲ್ಲಿ ಪ್ರವೇಶಕ್ಕಾಗಿ ಮಂಗಳವಾರ ರಾಷ್ಟ್ರವ್ಯಾಪಿ ಪ್ರಾರಂಭವಾದ ಜೆಇಇ ಪರೀಕ್ಷೆಯನ್ನು ಬರೆಯಲು ಗುಜರಾತ್‌ನ ಸುಮಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ.

“ಮೊದಲ ದಿನ, ನೋಂದಾಯಿತ 3,020 ವಿದ್ಯಾರ್ಥಿಗಳಲ್ಲಿ 1,664 (55%) ಮಾತ್ರ ಹಾಜರಿದ್ದರು. ಆದರೆ 1,356 (45%) ಮಂದಿ ಹಾಜರಾಗಲಿಲ್ಲ. ಸಾಮಾನ್ಯವಾಗಿ, ಪ್ರತಿವರ್ಷ 25-30% ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಿಟ್ಟುಬಿಡುತ್ತಾರೆ. ಈ ವರ್ಷ ಶೇಕಡಾವಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ” ಎಂದು ಗುಜರಾತ್‌ನ ಜೆಇಇ ಸಂಯೋಜಕ ವೀರೇಂದ್ರ ರಾವತ್ ಹೇಳಿದರು.

ಗುಜರಾತ್‌ನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಸುಮಾರು 50% ಅಭ್ಯರ್ಥಿಗಳು ಜೆಇಇ ಪರೀಕ್ಷೆಯನ್ನು ಬರೆದಿಲ್ಲ. ಅಸ್ಸಾಂ ಮತ್ತು ಡೆಹ್ರಾಡೂನ್‌ನಲ್ಲಿ 50% ಗೈರಾಗಿದ್ದು, ಉತ್ತರ ಪ್ರದೇಶದಲ್ಲಿ 44%, ಜಾರ್ಖಂಡ್ ಮತ್ತು ರಾಯ್ ಪುರದಲ್ಲಿ ಕ್ರಮವಾಗಿ 31.42% ಮತ್ತು 58% ಅಭ್ಯರ್ಥಿಗಳು ಮೊದಲ ದಿನ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ವರದಿಗಳು ತಿಳಿಸಿವೆ.

ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯುತ್ತಿರುವ ಜೆಇಇ ಪರೀಕ್ಷೆಗೆ 8.58 ಲಕ್ಷ ಎಂಜಿನಿಯರಿಂಗ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 13 ರಂದು ನಡೆಸಲು ನಿರ್ಧರಿಸಲಾಗಿರುವ ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ನೀಟ್‌ ಪರೀಕ್ಷೆಯನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕಾರಣದಿಂದ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...