Homeಕರೋನಾ ತಲ್ಲಣಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರೀಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೊಸ ಮಾರ್ಗಸೂಚಿ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ, ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಯನ್ನು ಮಾಡಿದೆ. ಜಿಮ್‌ ಮುಚ್ಚುವಂತೆ ಮೊದಲ ಮಾರ್ಗಸೂಚಿಯಲ್ಲಿ ಹೇಳಲಾಗಿತ್ತು. ಈಗ ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ.

ಕೊರೊನಾ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಏಪ್ರಿಲ್ 2 ರಂದು ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳಿಗೆ ನಿರ್ಬಂಧಿಸಿತ್ತು.  ಮುಷ್ಕರ, ಧರಣಿ, ರ್‍ಯಾಲಿಗಳನ್ನು ನಿಷೇಧಿಸಿತ್ತು. ಜೊತೆಗೆ ಸಿನಿಮಾ ಹಾಲ್‌ನಲ್ಲಿ ಶೇಕಡಾ 50 ರಷ್ಟು ಆಸನ ವ್ಯವಸ್ಥೆಗೆ ತಿಳಿಸಿತ್ತು.

ಕನ್ನಡ ಚಿತ್ರರಂಗ ಒಟ್ಟಾಗಿ ಚಿತ್ರಮಂದಿರದ ಸಮಸ್ಯೆಯನ್ನು ಬಗೆಹರಿಸಿಕೊಂಡಿತ್ತು. ನಂತರ ಜಿಮ್ ಮಾಲೀಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೊಟ್ಟೆ ಮೇಲೆ ಹೊಡೆಯಬೇಡಿ, ಈಗ ತಾನೇ ಚೇತರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.

ಈಗ ಜಿಮ್‌ಗಳು ತೆರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅನೇಕ ಮನವಿಗಳು ಬಂದಿರುವ ಹಿನ್ನೆಲೆ ಶೇಕಡಾ 50 ರಷ್ಟು ಅವಕಾಶ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

ಜಿಮ್‌ಗಳು ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಜಿಮ್‌ ಸಾಮರ್ಥ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಸೇರುವಂತಿಲ್ಲ. ಕೊರೊನಾ ನಿಯಮಗಳಾದ ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಪೂರೈಕೆ ನೋಡಿಕೊಳ್ಳಬೇಕು. ಜೊತೆಗೆ ಜಿಮ್ ಸಲಕರಣೆಗಳ ಪ್ರತಿ ಬಳಕೆಯ ನಂತರ ಸಲಕರಣೆಗಳನ್ನು ಶುಚಿಗೊಳಿಸುವಂತೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾನುವಾರ ಸಂಜೆ ಟ್ವೀಟ್ ಮಾಡಿದ್ದ ಕನ್ನಡ ನಟ ಯಶ್, ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

“ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ…? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ..? ಹಾಗೆ ಸಾಲ ಸೋಲ ಮಾಡಿ, ಜಿಮ್ ನಡೆಸುವವರು ಕಷ್ಟಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ ಮಾಲೀಕರು ಬದುಕಿಕೊಳ್ಳುತ್ತಾರಲ್ಲವೇ…? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ!” ಎಂದು ನಟ ಯಶ್ ಟ್ವೀಟ್ ಮಾಡಿದ್ದರು.

ನಟ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ಅಂತರದಲ್ಲಿ ರಾಜ್ಯ ಸರ್ಕಾರದಿಂದ ಈ ಕ್ರಮ ಬಂದಿದೆ. ಜೊತೆಗೆ ಹಲವು ಮಂದಿ ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ:ಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...