Homeಕರೋನಾ ತಲ್ಲಣಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರೀಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೊಸ ಮಾರ್ಗಸೂಚಿ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ, ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಯನ್ನು ಮಾಡಿದೆ. ಜಿಮ್‌ ಮುಚ್ಚುವಂತೆ ಮೊದಲ ಮಾರ್ಗಸೂಚಿಯಲ್ಲಿ ಹೇಳಲಾಗಿತ್ತು. ಈಗ ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ.

ಕೊರೊನಾ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಏಪ್ರಿಲ್ 2 ರಂದು ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳಿಗೆ ನಿರ್ಬಂಧಿಸಿತ್ತು.  ಮುಷ್ಕರ, ಧರಣಿ, ರ್‍ಯಾಲಿಗಳನ್ನು ನಿಷೇಧಿಸಿತ್ತು. ಜೊತೆಗೆ ಸಿನಿಮಾ ಹಾಲ್‌ನಲ್ಲಿ ಶೇಕಡಾ 50 ರಷ್ಟು ಆಸನ ವ್ಯವಸ್ಥೆಗೆ ತಿಳಿಸಿತ್ತು.

ಕನ್ನಡ ಚಿತ್ರರಂಗ ಒಟ್ಟಾಗಿ ಚಿತ್ರಮಂದಿರದ ಸಮಸ್ಯೆಯನ್ನು ಬಗೆಹರಿಸಿಕೊಂಡಿತ್ತು. ನಂತರ ಜಿಮ್ ಮಾಲೀಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೊಟ್ಟೆ ಮೇಲೆ ಹೊಡೆಯಬೇಡಿ, ಈಗ ತಾನೇ ಚೇತರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.

ಈಗ ಜಿಮ್‌ಗಳು ತೆರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅನೇಕ ಮನವಿಗಳು ಬಂದಿರುವ ಹಿನ್ನೆಲೆ ಶೇಕಡಾ 50 ರಷ್ಟು ಅವಕಾಶ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

ಜಿಮ್‌ಗಳು ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಜಿಮ್‌ ಸಾಮರ್ಥ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಸೇರುವಂತಿಲ್ಲ. ಕೊರೊನಾ ನಿಯಮಗಳಾದ ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಪೂರೈಕೆ ನೋಡಿಕೊಳ್ಳಬೇಕು. ಜೊತೆಗೆ ಜಿಮ್ ಸಲಕರಣೆಗಳ ಪ್ರತಿ ಬಳಕೆಯ ನಂತರ ಸಲಕರಣೆಗಳನ್ನು ಶುಚಿಗೊಳಿಸುವಂತೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾನುವಾರ ಸಂಜೆ ಟ್ವೀಟ್ ಮಾಡಿದ್ದ ಕನ್ನಡ ನಟ ಯಶ್, ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

“ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ…? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ..? ಹಾಗೆ ಸಾಲ ಸೋಲ ಮಾಡಿ, ಜಿಮ್ ನಡೆಸುವವರು ಕಷ್ಟಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ ಮಾಲೀಕರು ಬದುಕಿಕೊಳ್ಳುತ್ತಾರಲ್ಲವೇ…? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ!” ಎಂದು ನಟ ಯಶ್ ಟ್ವೀಟ್ ಮಾಡಿದ್ದರು.

ನಟ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ಅಂತರದಲ್ಲಿ ರಾಜ್ಯ ಸರ್ಕಾರದಿಂದ ಈ ಕ್ರಮ ಬಂದಿದೆ. ಜೊತೆಗೆ ಹಲವು ಮಂದಿ ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ:ಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...