Homeಕರೋನಾ ತಲ್ಲಣಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರೀಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೊಸ ಮಾರ್ಗಸೂಚಿ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ, ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಯನ್ನು ಮಾಡಿದೆ. ಜಿಮ್‌ ಮುಚ್ಚುವಂತೆ ಮೊದಲ ಮಾರ್ಗಸೂಚಿಯಲ್ಲಿ ಹೇಳಲಾಗಿತ್ತು. ಈಗ ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ.

ಕೊರೊನಾ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಏಪ್ರಿಲ್ 2 ರಂದು ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳಿಗೆ ನಿರ್ಬಂಧಿಸಿತ್ತು.  ಮುಷ್ಕರ, ಧರಣಿ, ರ್‍ಯಾಲಿಗಳನ್ನು ನಿಷೇಧಿಸಿತ್ತು. ಜೊತೆಗೆ ಸಿನಿಮಾ ಹಾಲ್‌ನಲ್ಲಿ ಶೇಕಡಾ 50 ರಷ್ಟು ಆಸನ ವ್ಯವಸ್ಥೆಗೆ ತಿಳಿಸಿತ್ತು.

ಕನ್ನಡ ಚಿತ್ರರಂಗ ಒಟ್ಟಾಗಿ ಚಿತ್ರಮಂದಿರದ ಸಮಸ್ಯೆಯನ್ನು ಬಗೆಹರಿಸಿಕೊಂಡಿತ್ತು. ನಂತರ ಜಿಮ್ ಮಾಲೀಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೊಟ್ಟೆ ಮೇಲೆ ಹೊಡೆಯಬೇಡಿ, ಈಗ ತಾನೇ ಚೇತರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.

ಈಗ ಜಿಮ್‌ಗಳು ತೆರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅನೇಕ ಮನವಿಗಳು ಬಂದಿರುವ ಹಿನ್ನೆಲೆ ಶೇಕಡಾ 50 ರಷ್ಟು ಅವಕಾಶ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

ಜಿಮ್‌ಗಳು ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಜಿಮ್‌ ಸಾಮರ್ಥ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಸೇರುವಂತಿಲ್ಲ. ಕೊರೊನಾ ನಿಯಮಗಳಾದ ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಪೂರೈಕೆ ನೋಡಿಕೊಳ್ಳಬೇಕು. ಜೊತೆಗೆ ಜಿಮ್ ಸಲಕರಣೆಗಳ ಪ್ರತಿ ಬಳಕೆಯ ನಂತರ ಸಲಕರಣೆಗಳನ್ನು ಶುಚಿಗೊಳಿಸುವಂತೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾನುವಾರ ಸಂಜೆ ಟ್ವೀಟ್ ಮಾಡಿದ್ದ ಕನ್ನಡ ನಟ ಯಶ್, ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

“ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ…? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ..? ಹಾಗೆ ಸಾಲ ಸೋಲ ಮಾಡಿ, ಜಿಮ್ ನಡೆಸುವವರು ಕಷ್ಟಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ ಮಾಲೀಕರು ಬದುಕಿಕೊಳ್ಳುತ್ತಾರಲ್ಲವೇ…? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ!” ಎಂದು ನಟ ಯಶ್ ಟ್ವೀಟ್ ಮಾಡಿದ್ದರು.

ನಟ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ಅಂತರದಲ್ಲಿ ರಾಜ್ಯ ಸರ್ಕಾರದಿಂದ ಈ ಕ್ರಮ ಬಂದಿದೆ. ಜೊತೆಗೆ ಹಲವು ಮಂದಿ ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ:ಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...