Homeಕರೋನಾ ತಲ್ಲಣಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

ಜಿಮ್‌ಗಳಲ್ಲಿ ಶೇ.50 ರಷ್ಟು ಜನರಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಸೋಂಕಿನ ಸಕ್ರೀಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೊಸ ಮಾರ್ಗಸೂಚಿ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ, ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಯನ್ನು ಮಾಡಿದೆ. ಜಿಮ್‌ ಮುಚ್ಚುವಂತೆ ಮೊದಲ ಮಾರ್ಗಸೂಚಿಯಲ್ಲಿ ಹೇಳಲಾಗಿತ್ತು. ಈಗ ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ನೀಡಲಾಗಿದೆ.

ಕೊರೊನಾ ಸೋಂಕು ಹರಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಏಪ್ರಿಲ್ 2 ರಂದು ರಾಜ್ಯ ಸರ್ಕಾರ ಹೊಸ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಜಿಮ್, ಪಾರ್ಟಿ ಹಾಲ್‌ಗಳು, ಈಜು ಕೊಳಗಳಿಗೆ ನಿರ್ಬಂಧಿಸಿತ್ತು.  ಮುಷ್ಕರ, ಧರಣಿ, ರ್‍ಯಾಲಿಗಳನ್ನು ನಿಷೇಧಿಸಿತ್ತು. ಜೊತೆಗೆ ಸಿನಿಮಾ ಹಾಲ್‌ನಲ್ಲಿ ಶೇಕಡಾ 50 ರಷ್ಟು ಆಸನ ವ್ಯವಸ್ಥೆಗೆ ತಿಳಿಸಿತ್ತು.

ಕನ್ನಡ ಚಿತ್ರರಂಗ ಒಟ್ಟಾಗಿ ಚಿತ್ರಮಂದಿರದ ಸಮಸ್ಯೆಯನ್ನು ಬಗೆಹರಿಸಿಕೊಂಡಿತ್ತು. ನಂತರ ಜಿಮ್ ಮಾಲೀಕರು ಕೂಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಹೊಟ್ಟೆ ಮೇಲೆ ಹೊಡೆಯಬೇಡಿ, ಈಗ ತಾನೇ ಚೇತರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದರು.

ಈಗ ಜಿಮ್‌ಗಳು ತೆರೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅನೇಕ ಮನವಿಗಳು ಬಂದಿರುವ ಹಿನ್ನೆಲೆ ಶೇಕಡಾ 50 ರಷ್ಟು ಅವಕಾಶ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಹೆಚ್ಚುತ್ತಿರುವುದರಿಂದ ಮಾರ್ಗಸೂಚಿ ಬಿಡುಗಡೆ: ಆರೋಗ್ಯ ಸಚಿವ ಸುಧಾಕರ್‌

ಜಿಮ್‌ಗಳು ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಜಿಮ್‌ ಸಾಮರ್ಥ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಜನರು ಒಂದೇ ಸಮಯದಲ್ಲಿ ಸೇರುವಂತಿಲ್ಲ. ಕೊರೊನಾ ನಿಯಮಗಳಾದ ಮಾಸ್ಕ್‌ ಧರಿಸುವುದು, ದೈಹಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್‌ ಪೂರೈಕೆ ನೋಡಿಕೊಳ್ಳಬೇಕು. ಜೊತೆಗೆ ಜಿಮ್ ಸಲಕರಣೆಗಳ ಪ್ರತಿ ಬಳಕೆಯ ನಂತರ ಸಲಕರಣೆಗಳನ್ನು ಶುಚಿಗೊಳಿಸುವಂತೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಭಾನುವಾರ ಸಂಜೆ ಟ್ವೀಟ್ ಮಾಡಿದ್ದ ಕನ್ನಡ ನಟ ಯಶ್, ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಆರೋಪಿಸಿದ್ದರು.

“ಅನ್ನ ಹುಟ್ಟಿಸದ ಸಭೆ, ಸಮಾರಂಭ, ಮೆರವಣಿಗೆಗಳು ಮುಕ್ತವಾಗಿವೆ. ಹೊಟ್ಟೆ ಹೊರೆಯಲು ಮಾಡುವ ವೃತ್ತಿಗಳಿಗೆ ಹೊಡೆತ ಸರ್ಕಾರ ನೀಡುತ್ತಿದೆ. ಅಪಘಾತ ಆಗುವುದೆಂದು ವಾಹನ ಸಂಚಾರ ನಿಲ್ಲಿಸೋದು ಸರಿಯಾಗುತ್ತದೆಯೇ…? ಕಟ್ಟುನಿಟ್ಟಿನ ಸಂಚಾರ ಕ್ರಮ ಸಾಕಲ್ಲವೇ..? ಹಾಗೆ ಸಾಲ ಸೋಲ ಮಾಡಿ, ಜಿಮ್ ನಡೆಸುವವರು ಕಷ್ಟಪಡುತ್ತಿದ್ದಾರೆ. ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಜಿಮ್ ಬಳಸಲು ಅನುಮತಿ ನೀಡಿದರೆ, ಗ್ರಾಹಕರ ಆರೋಗ್ಯಕ್ಕೂ ಒಳ್ಳೆಯದು. ಜಿಮ ಮಾಲೀಕರು ಬದುಕಿಕೊಳ್ಳುತ್ತಾರಲ್ಲವೇ…? ರೋಗಕ್ಕೆ ಪರಿಹಾರ ಏನೆಂದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಹಸಿವಿಗೆ ಪರಿಹಾರ ಗೊತ್ತಿದೆಯಲ್ಲ!” ಎಂದು ನಟ ಯಶ್ ಟ್ವೀಟ್ ಮಾಡಿದ್ದರು.

ನಟ ಟ್ವೀಟ್ ಮಾಡಿದ ಕೆಲವೇ ಗಂಟೆಗಳ ಅಂತರದಲ್ಲಿ ರಾಜ್ಯ ಸರ್ಕಾರದಿಂದ ಈ ಕ್ರಮ ಬಂದಿದೆ. ಜೊತೆಗೆ ಹಲವು ಮಂದಿ ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಿದ್ದರು ಎನ್ನಲಾಗಿದೆ.


ಇದನ್ನೂ ಓದಿ:ಹೊಟ್ಟೆ ಹೊರೆಯುವ ವೃತ್ತಿಗಳಿಗೆ ಹೊಡೆತ: ಜಿಮ್ ಮಾಲೀಕರ ಪರ ನಟ ಯಶ್ ಬ್ಯಾಟಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...