Homeಕರ್ನಾಟಕ50% ಮೀಸಲಾತಿ ಮಿತಿ ಸಾಂವಿಧಾನಿಕವಲ್ಲ, ಅದು ಪ್ರಕರಣವೊಂದರ ಸುಪ್ರೀಂ ಆದೇಶದ ಭಾಗವಷ್ಟೇ: ಸಿದ್ದರಾಮಯ್ಯ

50% ಮೀಸಲಾತಿ ಮಿತಿ ಸಾಂವಿಧಾನಿಕವಲ್ಲ, ಅದು ಪ್ರಕರಣವೊಂದರ ಸುಪ್ರೀಂ ಆದೇಶದ ಭಾಗವಷ್ಟೇ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಮೀಸಲಾತಿ ಹೋರಾಟಗಳು ನಡೆಯುತ್ತಲೇ ಇವೆ. ಈ ಮೀಸಲಾತಿ ಕಗ್ಗಂಟನ್ನು ಬಿಡಿಸಲು ಮೀಸಲಾತಿ ಪ್ರಮಾನವನ್ನು ಕನಿಷ್ಟ 75%ಗೆ ಹೆಚ್ಚಿಸುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿ ಸರ್ಕಾರವು ಮುಸ್ಲಿಂ ಸಮುದಾಯದ ಮೀಸಲಾತಿಯನ್ನೇ ರದ್ದುಗೊಳಿಸಿದೆ. ‘ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ’ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಈ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ”ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ, ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಈಗಿನ ಮೀಸಲಾತಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಲಿದೆ” ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುತ್ತೇವೆ. ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿ ಕಲ್ಪಿಸುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸುವುದಿಲ್ಲ” ಎಂದು ತಿಳಿಸಿದ್ದಾರೆ.

”ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ನೀಡಿ, ಶೇ 50ರ ಮಿತಿಯನ್ನು ಉಲ್ಲಂಘಿಸಿದೆ. ಕೇಂದ್ರವು ಒಟ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಲು ಅನುಕೂಲ ಆಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

”ಮೀಸಲಾತಿಗೆ ಶೇ 50ರ ಮಿತಿ ಎನ್ನುವುದು ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು, ಅದು ಸಾಂವಿಧಾನಿಕವಾದುದು ಅಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ” ಎಂದು ಹೇಳಿದ್ದಾರೆ.

”ಮುಸ್ಲಿಂ ಮೀಸಲಾತಿ ರದ್ದು ಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳು ಇರಲಿಲ್ಲ. ಮುಸ್ಲಿಂ ಮೀಸಲಾತಿ ರದ್ದತಿ ಆದೇಶವು ರದ್ದಾದರೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ. ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್‌ನ ವಿರೋಧ ಇಲ್ಲ. ಆದರೆ, ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ” ಎಂದು ಹೇಳಿದ್ದಾರೆ.

”ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗವು ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ” ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಛೀಮಾರಿ ಹಾಕಿದ ಬಳಿಕ ಪ್ರತಿಕ್ರಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ”ಮೀಸಲಾತಿ ಹೆಚ್ಚಿಸುವ ಹೆಸರಿನಲ್ಲಿ ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯದ ಬಿಜೆಪಿ ಸರ್ಕಾರ ಮಾಡಿರುವ ದ್ರೋಹವು ಸುಪ್ರೀಂ ಕೋರ್ಟ್‌ ವಿಚಾರಣೆ ವೇಳೆ ಬಯಲಾಗಿದೆ” ಎಂದು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಮೀಸಲಾತಿ ಹೆಸರಿನಲ್ಲಿ ನಕಲಿ ತೀರ್ಮಾನ ಮಾಡುವ ಮೂಲಕ ಬಿಜೆಪಿಯು ಡಾ.ಬಿ.ಆರ್‌. ಅಂಬೇಡ್ಕರ್‌ ಅವರನ್ನು ಅವಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದ ಜನರಿಗೆ ಕ್ಷಮಿಸಲಾಗದ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...