Homeಮುಖಪುಟಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

- Advertisement -
- Advertisement -

ಕಳೆದ ಅಸೆಂಬ್ಲಿ ಚುನಾವಣೆ ಹೊತ್ತಲ್ಲಿ ಸ್ಥಳಿಯ ಮೀನುಗಾರ ಹುಡುಗ ಪರೇಶ್ ಮೇಸ್ತ ಮರಣವಾಗಿತ್ತು. ಹಾಗಾಗ ಬಾರದಿತ್ತು. ಆ ಬಗ್ಗೆ ನನಗೆ ನೋವಿದೆ. ಆಗ ನಾನು ಮಂತ್ರಿಯಾಗಿದ್ದೆ. ಮಾನವೀಯತೆಯಿಂದ ಪರೇಶ್ ಮನೆಗೆ ಹೋಗಿ ಸಾಂತ್ವನ ಹೇಳಿ ಆತನ ತಂದೆಗೆ ವೈಯಕ್ತಿವಾವಾಗಿ 50,000 ರೂ.ಕೊಟ್ಟು ಬಂದಿದ್ದೆ. ಈ ಸಹಾಯ ತಮಗೆ ಬೇಡವೆಂದು ಪರೇಶ್ ತಂದೆ ಕಮಲಾಕರ ಮೇಸ್ತ ಹೇಳಿದ್ದಾರೆಂದು ಕೇಳಿ ತಿಳಿದುಕೊಂಡಿದೇನೆ ಎಂದು ಹೊನ್ನಾವರದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಆದರೆ ಆ ಹಣ ಈವರೆಗೆ ನನಗೆ ತಲುಪಿಲ್ಲ. ಅದು ಏನಾಯಿತೆಂಬುದು ಗೊತ್ತಾಗಿಲ್ಲ. ಅದು ವಾಪಸ್ ಬರಬೇಕೆಂದು ನಾನು ಬಯಸಿಲ್ಲ. ಆ ನಿರೀಕ್ಷೆಯೂ ನನಗಿಲ್ಲ. ಆ ಹಣ ಪರೇಶ್ ಕುಟುಂಬದವರು ಬಳಸಿಕೊಂಡಿದ್ದರೆ ನನಗೆ ಸಂತೋಷ. ಆ ಕಿಂಚಿತ್ತು ಸಹಾಯ ನನ್ನಿಂದಾಗಿದ್ದರೆ ನನ್ನ ಆತ್ಮಕ್ಕೂ ತೃಪ್ತಿ ಎಂದು ಹೇಳಿದ ದೇಶಪಾಂಡೆ, ಅಂದು ಆ ಸಾವಿನ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡುವುದರಲ್ಲಿತ್ತು. ಆದರೆ ಬಿಜೆಪಿಯವರು ಸಿಬಿಐ ತನಿಖೆಯೇ ಬೇಕೆಂದು ಒತ್ತಾಯಿಸಿದ್ದರು. ನಾವು ಸಿಬಿಐಗೆ ಕೇಸ್ ವಹಿಸಿದ್ದೆವು. ಆದರೆ ನಾಲ್ಕು ವರ್ಷ ಕಳೆದರೂ ತನಿಖೆ ಯಾವ ಹಂತದಲ್ಲಿದೆ? ಏನಾಗಿದೆಯೆಂಬುದು ಯಾರಿಗೂ ಗೊತ್ತಿಲ್ಲ. ಈಗ ಎರಡೂ ಕಡೆ ಬಿಜೆಪಿಯವರೆ ಆಡಳಿತ ನಡೆಸಿದ್ದಾರೆಂದು ಮಾರ್ಮಿಕವಾಗಿ ನುಡಿದರು.

ದೇಶಪಾಂಡೆ ನೆರವು ತನಗೆ ಬೇಡವೆಂದು ಪರೇಶ್ ತಂದೆಯಿಂದ ಪತ್ರಿಕಾ ಗೋಷ್ಠಿ ಕರೆಯಿಸಿ ಬಿಜೆಪಿಯವರು ಹೇಳಿಸಿದ್ದರೆಂಬ ಸುದ್ದಿ ಆಗ ಮಾರ್ದನಿಸಿತ್ತು. ಪರೇಶ್ ಮೇಸ್ತ ಸಾವಿಗೀಡಾಗಿದ್ದಾಗ ಹಿಂದುತ್ವ ರಾಜಕಾರಣಕ್ಕೆ ಬಿಜೆಪಿ ಬಳಸಿಕೊಂಡಿತೆಂಬ ಆರೋಪ ಇವತ್ತಿಗೂ ಕೇಳಿಬರುತ್ತಿದೆ. ಹಾಗೆಯೆ ಅಂದು ಪರೇಶ್ ಕುಟುಂಬಕ್ಕೆ ಬಂದಿದ್ದ ಆರ್ಥಿಕ ನೆರವು ಮದ್ಯವರ್ತಿಗಳ ಪಾಲಾಗಿದೆ ಎಂಬ ಮಾತೂ ಕೇಳಿಬಂದಿತ್ತು. ಈಗ ಮಾಜಿ ಸಚಿವ ದೇಶಪಾಂಡೆಯವರು ತಾನು ನೀಡಿದ ಸಹಾಯ ಧನ ಏನಾಯಿತೆಂದು ಪ್ರಶ್ನಿಸಿರುವುದು ಆ ಅನುಮಾನವನ್ನು ಪುಷ್ಟಿಕರಿಸುವಂತಿದೆ ಎಂಬ ಚರ್ಚೆಗೆ ಗ್ರಾಸವಗಿದೆ.

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...