Homeಮುಖಪುಟಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

- Advertisement -
- Advertisement -

ಕಳೆದ ಅಸೆಂಬ್ಲಿ ಚುನಾವಣೆ ಹೊತ್ತಲ್ಲಿ ಸ್ಥಳಿಯ ಮೀನುಗಾರ ಹುಡುಗ ಪರೇಶ್ ಮೇಸ್ತ ಮರಣವಾಗಿತ್ತು. ಹಾಗಾಗ ಬಾರದಿತ್ತು. ಆ ಬಗ್ಗೆ ನನಗೆ ನೋವಿದೆ. ಆಗ ನಾನು ಮಂತ್ರಿಯಾಗಿದ್ದೆ. ಮಾನವೀಯತೆಯಿಂದ ಪರೇಶ್ ಮನೆಗೆ ಹೋಗಿ ಸಾಂತ್ವನ ಹೇಳಿ ಆತನ ತಂದೆಗೆ ವೈಯಕ್ತಿವಾವಾಗಿ 50,000 ರೂ.ಕೊಟ್ಟು ಬಂದಿದ್ದೆ. ಈ ಸಹಾಯ ತಮಗೆ ಬೇಡವೆಂದು ಪರೇಶ್ ತಂದೆ ಕಮಲಾಕರ ಮೇಸ್ತ ಹೇಳಿದ್ದಾರೆಂದು ಕೇಳಿ ತಿಳಿದುಕೊಂಡಿದೇನೆ ಎಂದು ಹೊನ್ನಾವರದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಆದರೆ ಆ ಹಣ ಈವರೆಗೆ ನನಗೆ ತಲುಪಿಲ್ಲ. ಅದು ಏನಾಯಿತೆಂಬುದು ಗೊತ್ತಾಗಿಲ್ಲ. ಅದು ವಾಪಸ್ ಬರಬೇಕೆಂದು ನಾನು ಬಯಸಿಲ್ಲ. ಆ ನಿರೀಕ್ಷೆಯೂ ನನಗಿಲ್ಲ. ಆ ಹಣ ಪರೇಶ್ ಕುಟುಂಬದವರು ಬಳಸಿಕೊಂಡಿದ್ದರೆ ನನಗೆ ಸಂತೋಷ. ಆ ಕಿಂಚಿತ್ತು ಸಹಾಯ ನನ್ನಿಂದಾಗಿದ್ದರೆ ನನ್ನ ಆತ್ಮಕ್ಕೂ ತೃಪ್ತಿ ಎಂದು ಹೇಳಿದ ದೇಶಪಾಂಡೆ, ಅಂದು ಆ ಸಾವಿನ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡುವುದರಲ್ಲಿತ್ತು. ಆದರೆ ಬಿಜೆಪಿಯವರು ಸಿಬಿಐ ತನಿಖೆಯೇ ಬೇಕೆಂದು ಒತ್ತಾಯಿಸಿದ್ದರು. ನಾವು ಸಿಬಿಐಗೆ ಕೇಸ್ ವಹಿಸಿದ್ದೆವು. ಆದರೆ ನಾಲ್ಕು ವರ್ಷ ಕಳೆದರೂ ತನಿಖೆ ಯಾವ ಹಂತದಲ್ಲಿದೆ? ಏನಾಗಿದೆಯೆಂಬುದು ಯಾರಿಗೂ ಗೊತ್ತಿಲ್ಲ. ಈಗ ಎರಡೂ ಕಡೆ ಬಿಜೆಪಿಯವರೆ ಆಡಳಿತ ನಡೆಸಿದ್ದಾರೆಂದು ಮಾರ್ಮಿಕವಾಗಿ ನುಡಿದರು.

ದೇಶಪಾಂಡೆ ನೆರವು ತನಗೆ ಬೇಡವೆಂದು ಪರೇಶ್ ತಂದೆಯಿಂದ ಪತ್ರಿಕಾ ಗೋಷ್ಠಿ ಕರೆಯಿಸಿ ಬಿಜೆಪಿಯವರು ಹೇಳಿಸಿದ್ದರೆಂಬ ಸುದ್ದಿ ಆಗ ಮಾರ್ದನಿಸಿತ್ತು. ಪರೇಶ್ ಮೇಸ್ತ ಸಾವಿಗೀಡಾಗಿದ್ದಾಗ ಹಿಂದುತ್ವ ರಾಜಕಾರಣಕ್ಕೆ ಬಿಜೆಪಿ ಬಳಸಿಕೊಂಡಿತೆಂಬ ಆರೋಪ ಇವತ್ತಿಗೂ ಕೇಳಿಬರುತ್ತಿದೆ. ಹಾಗೆಯೆ ಅಂದು ಪರೇಶ್ ಕುಟುಂಬಕ್ಕೆ ಬಂದಿದ್ದ ಆರ್ಥಿಕ ನೆರವು ಮದ್ಯವರ್ತಿಗಳ ಪಾಲಾಗಿದೆ ಎಂಬ ಮಾತೂ ಕೇಳಿಬಂದಿತ್ತು. ಈಗ ಮಾಜಿ ಸಚಿವ ದೇಶಪಾಂಡೆಯವರು ತಾನು ನೀಡಿದ ಸಹಾಯ ಧನ ಏನಾಯಿತೆಂದು ಪ್ರಶ್ನಿಸಿರುವುದು ಆ ಅನುಮಾನವನ್ನು ಪುಷ್ಟಿಕರಿಸುವಂತಿದೆ ಎಂಬ ಚರ್ಚೆಗೆ ಗ್ರಾಸವಗಿದೆ.

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...