Homeಮುಖಪುಟಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

- Advertisement -
- Advertisement -

ಕಳೆದ ಅಸೆಂಬ್ಲಿ ಚುನಾವಣೆ ಹೊತ್ತಲ್ಲಿ ಸ್ಥಳಿಯ ಮೀನುಗಾರ ಹುಡುಗ ಪರೇಶ್ ಮೇಸ್ತ ಮರಣವಾಗಿತ್ತು. ಹಾಗಾಗ ಬಾರದಿತ್ತು. ಆ ಬಗ್ಗೆ ನನಗೆ ನೋವಿದೆ. ಆಗ ನಾನು ಮಂತ್ರಿಯಾಗಿದ್ದೆ. ಮಾನವೀಯತೆಯಿಂದ ಪರೇಶ್ ಮನೆಗೆ ಹೋಗಿ ಸಾಂತ್ವನ ಹೇಳಿ ಆತನ ತಂದೆಗೆ ವೈಯಕ್ತಿವಾವಾಗಿ 50,000 ರೂ.ಕೊಟ್ಟು ಬಂದಿದ್ದೆ. ಈ ಸಹಾಯ ತಮಗೆ ಬೇಡವೆಂದು ಪರೇಶ್ ತಂದೆ ಕಮಲಾಕರ ಮೇಸ್ತ ಹೇಳಿದ್ದಾರೆಂದು ಕೇಳಿ ತಿಳಿದುಕೊಂಡಿದೇನೆ ಎಂದು ಹೊನ್ನಾವರದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಆದರೆ ಆ ಹಣ ಈವರೆಗೆ ನನಗೆ ತಲುಪಿಲ್ಲ. ಅದು ಏನಾಯಿತೆಂಬುದು ಗೊತ್ತಾಗಿಲ್ಲ. ಅದು ವಾಪಸ್ ಬರಬೇಕೆಂದು ನಾನು ಬಯಸಿಲ್ಲ. ಆ ನಿರೀಕ್ಷೆಯೂ ನನಗಿಲ್ಲ. ಆ ಹಣ ಪರೇಶ್ ಕುಟುಂಬದವರು ಬಳಸಿಕೊಂಡಿದ್ದರೆ ನನಗೆ ಸಂತೋಷ. ಆ ಕಿಂಚಿತ್ತು ಸಹಾಯ ನನ್ನಿಂದಾಗಿದ್ದರೆ ನನ್ನ ಆತ್ಮಕ್ಕೂ ತೃಪ್ತಿ ಎಂದು ಹೇಳಿದ ದೇಶಪಾಂಡೆ, ಅಂದು ಆ ಸಾವಿನ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡುವುದರಲ್ಲಿತ್ತು. ಆದರೆ ಬಿಜೆಪಿಯವರು ಸಿಬಿಐ ತನಿಖೆಯೇ ಬೇಕೆಂದು ಒತ್ತಾಯಿಸಿದ್ದರು. ನಾವು ಸಿಬಿಐಗೆ ಕೇಸ್ ವಹಿಸಿದ್ದೆವು. ಆದರೆ ನಾಲ್ಕು ವರ್ಷ ಕಳೆದರೂ ತನಿಖೆ ಯಾವ ಹಂತದಲ್ಲಿದೆ? ಏನಾಗಿದೆಯೆಂಬುದು ಯಾರಿಗೂ ಗೊತ್ತಿಲ್ಲ. ಈಗ ಎರಡೂ ಕಡೆ ಬಿಜೆಪಿಯವರೆ ಆಡಳಿತ ನಡೆಸಿದ್ದಾರೆಂದು ಮಾರ್ಮಿಕವಾಗಿ ನುಡಿದರು.

ದೇಶಪಾಂಡೆ ನೆರವು ತನಗೆ ಬೇಡವೆಂದು ಪರೇಶ್ ತಂದೆಯಿಂದ ಪತ್ರಿಕಾ ಗೋಷ್ಠಿ ಕರೆಯಿಸಿ ಬಿಜೆಪಿಯವರು ಹೇಳಿಸಿದ್ದರೆಂಬ ಸುದ್ದಿ ಆಗ ಮಾರ್ದನಿಸಿತ್ತು. ಪರೇಶ್ ಮೇಸ್ತ ಸಾವಿಗೀಡಾಗಿದ್ದಾಗ ಹಿಂದುತ್ವ ರಾಜಕಾರಣಕ್ಕೆ ಬಿಜೆಪಿ ಬಳಸಿಕೊಂಡಿತೆಂಬ ಆರೋಪ ಇವತ್ತಿಗೂ ಕೇಳಿಬರುತ್ತಿದೆ. ಹಾಗೆಯೆ ಅಂದು ಪರೇಶ್ ಕುಟುಂಬಕ್ಕೆ ಬಂದಿದ್ದ ಆರ್ಥಿಕ ನೆರವು ಮದ್ಯವರ್ತಿಗಳ ಪಾಲಾಗಿದೆ ಎಂಬ ಮಾತೂ ಕೇಳಿಬಂದಿತ್ತು. ಈಗ ಮಾಜಿ ಸಚಿವ ದೇಶಪಾಂಡೆಯವರು ತಾನು ನೀಡಿದ ಸಹಾಯ ಧನ ಏನಾಯಿತೆಂದು ಪ್ರಶ್ನಿಸಿರುವುದು ಆ ಅನುಮಾನವನ್ನು ಪುಷ್ಟಿಕರಿಸುವಂತಿದೆ ಎಂಬ ಚರ್ಚೆಗೆ ಗ್ರಾಸವಗಿದೆ.

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....