Homeಮುಖಪುಟಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಪರೇಶ್ ಮೇಸ್ತ ಕುಟುಂಬಕ್ಕೆ ನಾನು ಕೊಟ್ಟ 50 ಸಾವಿರ ರೂ. ಏನಾಯಿತು? ಮಾಜಿ ಸಚಿವ ಆರ್.ವಿ.ದೇಶಪಾಂಡೆ

- Advertisement -
- Advertisement -

ಕಳೆದ ಅಸೆಂಬ್ಲಿ ಚುನಾವಣೆ ಹೊತ್ತಲ್ಲಿ ಸ್ಥಳಿಯ ಮೀನುಗಾರ ಹುಡುಗ ಪರೇಶ್ ಮೇಸ್ತ ಮರಣವಾಗಿತ್ತು. ಹಾಗಾಗ ಬಾರದಿತ್ತು. ಆ ಬಗ್ಗೆ ನನಗೆ ನೋವಿದೆ. ಆಗ ನಾನು ಮಂತ್ರಿಯಾಗಿದ್ದೆ. ಮಾನವೀಯತೆಯಿಂದ ಪರೇಶ್ ಮನೆಗೆ ಹೋಗಿ ಸಾಂತ್ವನ ಹೇಳಿ ಆತನ ತಂದೆಗೆ ವೈಯಕ್ತಿವಾವಾಗಿ 50,000 ರೂ.ಕೊಟ್ಟು ಬಂದಿದ್ದೆ. ಈ ಸಹಾಯ ತಮಗೆ ಬೇಡವೆಂದು ಪರೇಶ್ ತಂದೆ ಕಮಲಾಕರ ಮೇಸ್ತ ಹೇಳಿದ್ದಾರೆಂದು ಕೇಳಿ ತಿಳಿದುಕೊಂಡಿದೇನೆ ಎಂದು ಹೊನ್ನಾವರದಲ್ಲಿ ನಡೆದ ಕಾಂಗ್ರೆಸ್‌ನ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಆದರೆ ಆ ಹಣ ಈವರೆಗೆ ನನಗೆ ತಲುಪಿಲ್ಲ. ಅದು ಏನಾಯಿತೆಂಬುದು ಗೊತ್ತಾಗಿಲ್ಲ. ಅದು ವಾಪಸ್ ಬರಬೇಕೆಂದು ನಾನು ಬಯಸಿಲ್ಲ. ಆ ನಿರೀಕ್ಷೆಯೂ ನನಗಿಲ್ಲ. ಆ ಹಣ ಪರೇಶ್ ಕುಟುಂಬದವರು ಬಳಸಿಕೊಂಡಿದ್ದರೆ ನನಗೆ ಸಂತೋಷ. ಆ ಕಿಂಚಿತ್ತು ಸಹಾಯ ನನ್ನಿಂದಾಗಿದ್ದರೆ ನನ್ನ ಆತ್ಮಕ್ಕೂ ತೃಪ್ತಿ ಎಂದು ಹೇಳಿದ ದೇಶಪಾಂಡೆ, ಅಂದು ಆ ಸಾವಿನ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡುವುದರಲ್ಲಿತ್ತು. ಆದರೆ ಬಿಜೆಪಿಯವರು ಸಿಬಿಐ ತನಿಖೆಯೇ ಬೇಕೆಂದು ಒತ್ತಾಯಿಸಿದ್ದರು. ನಾವು ಸಿಬಿಐಗೆ ಕೇಸ್ ವಹಿಸಿದ್ದೆವು. ಆದರೆ ನಾಲ್ಕು ವರ್ಷ ಕಳೆದರೂ ತನಿಖೆ ಯಾವ ಹಂತದಲ್ಲಿದೆ? ಏನಾಗಿದೆಯೆಂಬುದು ಯಾರಿಗೂ ಗೊತ್ತಿಲ್ಲ. ಈಗ ಎರಡೂ ಕಡೆ ಬಿಜೆಪಿಯವರೆ ಆಡಳಿತ ನಡೆಸಿದ್ದಾರೆಂದು ಮಾರ್ಮಿಕವಾಗಿ ನುಡಿದರು.

ದೇಶಪಾಂಡೆ ನೆರವು ತನಗೆ ಬೇಡವೆಂದು ಪರೇಶ್ ತಂದೆಯಿಂದ ಪತ್ರಿಕಾ ಗೋಷ್ಠಿ ಕರೆಯಿಸಿ ಬಿಜೆಪಿಯವರು ಹೇಳಿಸಿದ್ದರೆಂಬ ಸುದ್ದಿ ಆಗ ಮಾರ್ದನಿಸಿತ್ತು. ಪರೇಶ್ ಮೇಸ್ತ ಸಾವಿಗೀಡಾಗಿದ್ದಾಗ ಹಿಂದುತ್ವ ರಾಜಕಾರಣಕ್ಕೆ ಬಿಜೆಪಿ ಬಳಸಿಕೊಂಡಿತೆಂಬ ಆರೋಪ ಇವತ್ತಿಗೂ ಕೇಳಿಬರುತ್ತಿದೆ. ಹಾಗೆಯೆ ಅಂದು ಪರೇಶ್ ಕುಟುಂಬಕ್ಕೆ ಬಂದಿದ್ದ ಆರ್ಥಿಕ ನೆರವು ಮದ್ಯವರ್ತಿಗಳ ಪಾಲಾಗಿದೆ ಎಂಬ ಮಾತೂ ಕೇಳಿಬಂದಿತ್ತು. ಈಗ ಮಾಜಿ ಸಚಿವ ದೇಶಪಾಂಡೆಯವರು ತಾನು ನೀಡಿದ ಸಹಾಯ ಧನ ಏನಾಯಿತೆಂದು ಪ್ರಶ್ನಿಸಿರುವುದು ಆ ಅನುಮಾನವನ್ನು ಪುಷ್ಟಿಕರಿಸುವಂತಿದೆ ಎಂಬ ಚರ್ಚೆಗೆ ಗ್ರಾಸವಗಿದೆ.

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...