Homeಮುಖಪುಟಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ

- Advertisement -
- Advertisement -

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಭಾನುವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಕ್ಟೋಬರ್ 27 ರಂದು ಹಿಂದುತ್ವ ಗುಂಪುಗಳು ಸ್ಥಳಗಳನ್ನು ಸುಟ್ಟುಹಾಕುವುದಾಗಿ ಸಂಘಟಕರಿಗೆ ಬೆದರಿಕೆ ಹಾಕಿದ್ದರಿಂದ ಮುನಾವರ್‌ ಅವರು ಮೂರು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

“ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ. ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಗಿತ್ತು. ನನ್ನ ಫೋನ್‌ ನಂಬರ್‌ ಸೋರಿಕೆಯಾದಾಗ ನನಗೆ ಕರೆ ಮಾಡಿ ನಿಂದಿಸಲಾಗುತ್ತಿದೆ” ಎಂದು ಮುನಾವರ್‌ ಭಾನುವಾರದಂದು NDTV ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

“ಸುಮಾರು 1500 ಜನರು ಮೂರು ಪ್ರಕರ್ಶನಗಳಿಗೆ ಒಂದು ತಿಂಗಳ ಮೊದಲೇ ಟಿಕಟ್‌ ಕಾಯ್ದಿರಿಸಿದ್ದಾರೆ. ಇದು ಹಲವಾರು ಜನರು ವಾಸಿಸುವ ದೇಶದ ಕರಾಳ ಸತ್ಯವಾಗಿದೆ. ನನ್ನ ವಿಷಯದಲ್ಲಿ, ಅವರು ಧರ್ಮವನ್ನು ಬಳಸುತ್ತಿದ್ದು, ಇದು ನನ್ನನ್ನು ಭಯಭೀತನಾನ್ನಾಗಿ ಮಾಡುತ್ತದೆ” ಎಂದು ಮುನಾವರ್‌ ಹೇಳಿದ್ದಾರೆ.

ಬಿಜೆಪಿ ರಾಜಕಾರಣಿಯೊಬ್ಬರ ಮಗ ನೀಡಿದ ದೂರಿನ ಆಧಾರದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಜನವರಿಯಲ್ಲಿ ಮುನಾವರ್‌ ಅವರನ್ನು ಬಂಧಿಸಿದಾಗಿನಿಂದ ಹಿಂದುತ್ವ ಗುಂಪುಗಳು ನಿರಂತರವಾಗಿ ಅವರನ್ನು ಗುರಿಯಾಗಿಸಿಕೊಂಡಿವೆ.

ಅವರು ತಮ್ಮ ಪ್ರದರ್ಶನಗಳನ್ನು ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ದೂರುದಾರರು ಆರೋಪಿಸಿದ್ದರು. ಆದರೆ ಅಂದು ಮುನಾವರ್‌ ಅವರನ್ನು ಕಾರ್ಯಕ್ರಮ ಪ್ರಾರಂಭಿಸುವ ಮುನ್ನವೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಸ್ಟಾಂಡ್‌ಅಪ್‌ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ನಂತರ ಇಂದೋರ್‌ ಪೊಲೀಸರು, ಮುನಾವರ್‌ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂಬುದಕ್ಕೆ ಯಾವುದೇ ದೃಶ್ಯ ಸಾಕ್ಷ್ಯಗಳಿಲ್ಲ ಎಂದು ಒಪ್ಪಿಕೊಂಡಿದ್ದರು.

ಎರಡು ಗಂಟೆಗಳ ಅವಧಿಯ ಕಾರ್ಯಕ್ರಮದ 10 ಸೆಕೆಂಡುಗಳ ವೀಡಿಯೊ ತುಣುಕುಗಳನ್ನು ಹಂಚಿಕೊಳ್ಳುವ ಮೂಲಕ ಬಜರಂಗದಳವು ತನ್ನನ್ನು ಗುರಿಯಾಗಿಸಿಕೊಂಡಿದೆ. ವೀಡಿಯೊ ತುಣುಕನ್ನು ಸಂದರ್ಭಕ್ಕೆ ಮೀರಿ ತೋರಿಸಲಾಗುತ್ತಿದೆ ಎಂದು ಮುನಾವರ್‌ ಹೇಳಿದ್ದಾರೆ.

ಅವರು ಬಿಡುಗಡೆಯಾದ ನಂತರ, ತಾನು 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಅವುಗಳಲ್ಲಿ 90% ಸಂದರ್ಭ ಪ್ರೇಕ್ಷಕರು ತನ್ನ ಧರ್ಮವನ್ನು ನೋಡದೆ ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ತನ್ನ ಒಂದು ಕಾರ್ಯಕ್ರಮದಲ್ಲಿ ಸುಮಾರು 80 ಜನರು ಜೀವನೋಪಾಯವನ್ನು ಗಳಿಸುತ್ತಾರೆ. ಈಗ ಒಂದುವರೆ ವರ್ಷಗಳಿಂದ ತಾನು ಕೆಲಸವಿಲ್ಲದೆ ಇದ್ದೇನೆ. ದ್ವೇಷ ಗೆದ್ದಿದೆ, ಆದ್ದರಿಂದಲೇ ಪ್ರದರ್ಶನಗಳನ್ನು ರದ್ದುಗೊಳಿಸಲಾಯಿತು. ಆದರೆ ಅದು ಎಲ್ಲಿಯವರೆಗೆ ಗೆಲ್ಲಲು ಸಾಧ್ಯ? ನಾವು ಖಂಡಿತಾ ಗೆಲ್ಲುತ್ತೇವೆ” ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...