Homeಮುಖಪುಟಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ

- Advertisement -
- Advertisement -

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಭಾನುವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಕ್ಟೋಬರ್ 27 ರಂದು ಹಿಂದುತ್ವ ಗುಂಪುಗಳು ಸ್ಥಳಗಳನ್ನು ಸುಟ್ಟುಹಾಕುವುದಾಗಿ ಸಂಘಟಕರಿಗೆ ಬೆದರಿಕೆ ಹಾಕಿದ್ದರಿಂದ ಮುನಾವರ್‌ ಅವರು ಮೂರು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

“ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ. ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಗಿತ್ತು. ನನ್ನ ಫೋನ್‌ ನಂಬರ್‌ ಸೋರಿಕೆಯಾದಾಗ ನನಗೆ ಕರೆ ಮಾಡಿ ನಿಂದಿಸಲಾಗುತ್ತಿದೆ” ಎಂದು ಮುನಾವರ್‌ ಭಾನುವಾರದಂದು NDTV ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

“ಸುಮಾರು 1500 ಜನರು ಮೂರು ಪ್ರಕರ್ಶನಗಳಿಗೆ ಒಂದು ತಿಂಗಳ ಮೊದಲೇ ಟಿಕಟ್‌ ಕಾಯ್ದಿರಿಸಿದ್ದಾರೆ. ಇದು ಹಲವಾರು ಜನರು ವಾಸಿಸುವ ದೇಶದ ಕರಾಳ ಸತ್ಯವಾಗಿದೆ. ನನ್ನ ವಿಷಯದಲ್ಲಿ, ಅವರು ಧರ್ಮವನ್ನು ಬಳಸುತ್ತಿದ್ದು, ಇದು ನನ್ನನ್ನು ಭಯಭೀತನಾನ್ನಾಗಿ ಮಾಡುತ್ತದೆ” ಎಂದು ಮುನಾವರ್‌ ಹೇಳಿದ್ದಾರೆ.

ಬಿಜೆಪಿ ರಾಜಕಾರಣಿಯೊಬ್ಬರ ಮಗ ನೀಡಿದ ದೂರಿನ ಆಧಾರದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಜನವರಿಯಲ್ಲಿ ಮುನಾವರ್‌ ಅವರನ್ನು ಬಂಧಿಸಿದಾಗಿನಿಂದ ಹಿಂದುತ್ವ ಗುಂಪುಗಳು ನಿರಂತರವಾಗಿ ಅವರನ್ನು ಗುರಿಯಾಗಿಸಿಕೊಂಡಿವೆ.

ಅವರು ತಮ್ಮ ಪ್ರದರ್ಶನಗಳನ್ನು ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ದೂರುದಾರರು ಆರೋಪಿಸಿದ್ದರು. ಆದರೆ ಅಂದು ಮುನಾವರ್‌ ಅವರನ್ನು ಕಾರ್ಯಕ್ರಮ ಪ್ರಾರಂಭಿಸುವ ಮುನ್ನವೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಸ್ಟಾಂಡ್‌ಅಪ್‌ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ನಂತರ ಇಂದೋರ್‌ ಪೊಲೀಸರು, ಮುನಾವರ್‌ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂಬುದಕ್ಕೆ ಯಾವುದೇ ದೃಶ್ಯ ಸಾಕ್ಷ್ಯಗಳಿಲ್ಲ ಎಂದು ಒಪ್ಪಿಕೊಂಡಿದ್ದರು.

ಎರಡು ಗಂಟೆಗಳ ಅವಧಿಯ ಕಾರ್ಯಕ್ರಮದ 10 ಸೆಕೆಂಡುಗಳ ವೀಡಿಯೊ ತುಣುಕುಗಳನ್ನು ಹಂಚಿಕೊಳ್ಳುವ ಮೂಲಕ ಬಜರಂಗದಳವು ತನ್ನನ್ನು ಗುರಿಯಾಗಿಸಿಕೊಂಡಿದೆ. ವೀಡಿಯೊ ತುಣುಕನ್ನು ಸಂದರ್ಭಕ್ಕೆ ಮೀರಿ ತೋರಿಸಲಾಗುತ್ತಿದೆ ಎಂದು ಮುನಾವರ್‌ ಹೇಳಿದ್ದಾರೆ.

ಅವರು ಬಿಡುಗಡೆಯಾದ ನಂತರ, ತಾನು 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಅವುಗಳಲ್ಲಿ 90% ಸಂದರ್ಭ ಪ್ರೇಕ್ಷಕರು ತನ್ನ ಧರ್ಮವನ್ನು ನೋಡದೆ ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ತನ್ನ ಒಂದು ಕಾರ್ಯಕ್ರಮದಲ್ಲಿ ಸುಮಾರು 80 ಜನರು ಜೀವನೋಪಾಯವನ್ನು ಗಳಿಸುತ್ತಾರೆ. ಈಗ ಒಂದುವರೆ ವರ್ಷಗಳಿಂದ ತಾನು ಕೆಲಸವಿಲ್ಲದೆ ಇದ್ದೇನೆ. ದ್ವೇಷ ಗೆದ್ದಿದೆ, ಆದ್ದರಿಂದಲೇ ಪ್ರದರ್ಶನಗಳನ್ನು ರದ್ದುಗೊಳಿಸಲಾಯಿತು. ಆದರೆ ಅದು ಎಲ್ಲಿಯವರೆಗೆ ಗೆಲ್ಲಲು ಸಾಧ್ಯ? ನಾವು ಖಂಡಿತಾ ಗೆಲ್ಲುತ್ತೇವೆ” ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...