Homeಮುಖಪುಟಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ

- Advertisement -
- Advertisement -

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಭಾನುವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಕ್ಟೋಬರ್ 27 ರಂದು ಹಿಂದುತ್ವ ಗುಂಪುಗಳು ಸ್ಥಳಗಳನ್ನು ಸುಟ್ಟುಹಾಕುವುದಾಗಿ ಸಂಘಟಕರಿಗೆ ಬೆದರಿಕೆ ಹಾಕಿದ್ದರಿಂದ ಮುನಾವರ್‌ ಅವರು ಮೂರು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

“ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ. ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಗಿತ್ತು. ನನ್ನ ಫೋನ್‌ ನಂಬರ್‌ ಸೋರಿಕೆಯಾದಾಗ ನನಗೆ ಕರೆ ಮಾಡಿ ನಿಂದಿಸಲಾಗುತ್ತಿದೆ” ಎಂದು ಮುನಾವರ್‌ ಭಾನುವಾರದಂದು NDTV ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

“ಸುಮಾರು 1500 ಜನರು ಮೂರು ಪ್ರಕರ್ಶನಗಳಿಗೆ ಒಂದು ತಿಂಗಳ ಮೊದಲೇ ಟಿಕಟ್‌ ಕಾಯ್ದಿರಿಸಿದ್ದಾರೆ. ಇದು ಹಲವಾರು ಜನರು ವಾಸಿಸುವ ದೇಶದ ಕರಾಳ ಸತ್ಯವಾಗಿದೆ. ನನ್ನ ವಿಷಯದಲ್ಲಿ, ಅವರು ಧರ್ಮವನ್ನು ಬಳಸುತ್ತಿದ್ದು, ಇದು ನನ್ನನ್ನು ಭಯಭೀತನಾನ್ನಾಗಿ ಮಾಡುತ್ತದೆ” ಎಂದು ಮುನಾವರ್‌ ಹೇಳಿದ್ದಾರೆ.

ಬಿಜೆಪಿ ರಾಜಕಾರಣಿಯೊಬ್ಬರ ಮಗ ನೀಡಿದ ದೂರಿನ ಆಧಾರದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಜನವರಿಯಲ್ಲಿ ಮುನಾವರ್‌ ಅವರನ್ನು ಬಂಧಿಸಿದಾಗಿನಿಂದ ಹಿಂದುತ್ವ ಗುಂಪುಗಳು ನಿರಂತರವಾಗಿ ಅವರನ್ನು ಗುರಿಯಾಗಿಸಿಕೊಂಡಿವೆ.

ಅವರು ತಮ್ಮ ಪ್ರದರ್ಶನಗಳನ್ನು ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ದೂರುದಾರರು ಆರೋಪಿಸಿದ್ದರು. ಆದರೆ ಅಂದು ಮುನಾವರ್‌ ಅವರನ್ನು ಕಾರ್ಯಕ್ರಮ ಪ್ರಾರಂಭಿಸುವ ಮುನ್ನವೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಸ್ಟಾಂಡ್‌ಅಪ್‌ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ನಂತರ ಇಂದೋರ್‌ ಪೊಲೀಸರು, ಮುನಾವರ್‌ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂಬುದಕ್ಕೆ ಯಾವುದೇ ದೃಶ್ಯ ಸಾಕ್ಷ್ಯಗಳಿಲ್ಲ ಎಂದು ಒಪ್ಪಿಕೊಂಡಿದ್ದರು.

ಎರಡು ಗಂಟೆಗಳ ಅವಧಿಯ ಕಾರ್ಯಕ್ರಮದ 10 ಸೆಕೆಂಡುಗಳ ವೀಡಿಯೊ ತುಣುಕುಗಳನ್ನು ಹಂಚಿಕೊಳ್ಳುವ ಮೂಲಕ ಬಜರಂಗದಳವು ತನ್ನನ್ನು ಗುರಿಯಾಗಿಸಿಕೊಂಡಿದೆ. ವೀಡಿಯೊ ತುಣುಕನ್ನು ಸಂದರ್ಭಕ್ಕೆ ಮೀರಿ ತೋರಿಸಲಾಗುತ್ತಿದೆ ಎಂದು ಮುನಾವರ್‌ ಹೇಳಿದ್ದಾರೆ.

ಅವರು ಬಿಡುಗಡೆಯಾದ ನಂತರ, ತಾನು 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಅವುಗಳಲ್ಲಿ 90% ಸಂದರ್ಭ ಪ್ರೇಕ್ಷಕರು ತನ್ನ ಧರ್ಮವನ್ನು ನೋಡದೆ ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ತನ್ನ ಒಂದು ಕಾರ್ಯಕ್ರಮದಲ್ಲಿ ಸುಮಾರು 80 ಜನರು ಜೀವನೋಪಾಯವನ್ನು ಗಳಿಸುತ್ತಾರೆ. ಈಗ ಒಂದುವರೆ ವರ್ಷಗಳಿಂದ ತಾನು ಕೆಲಸವಿಲ್ಲದೆ ಇದ್ದೇನೆ. ದ್ವೇಷ ಗೆದ್ದಿದೆ, ಆದ್ದರಿಂದಲೇ ಪ್ರದರ್ಶನಗಳನ್ನು ರದ್ದುಗೊಳಿಸಲಾಯಿತು. ಆದರೆ ಅದು ಎಲ್ಲಿಯವರೆಗೆ ಗೆಲ್ಲಲು ಸಾಧ್ಯ? ನಾವು ಖಂಡಿತಾ ಗೆಲ್ಲುತ್ತೇವೆ” ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...