Homeಮುಖಪುಟಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ:...

ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಒಡಿಶಾ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 500 ರಷ್ಟಿದೆ. ಆದರೆ, ಕೇಂದ್ರ ಸರ್ಕಾರ ಕಡಿಮೆ ಲೆಕ್ಕ ತೋರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದುವರೆಗೆ 275 ರಷ್ಟಿದೆ ಎಂದು ಅಧಿಕೃತ ಅಂಕಿ ಅಂಶವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಜೂನ್ 3, ಶನಿವಾರದಂದು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು, ”ಸಾವಿನ ಸಂಖ್ಯೆ 500 ಕ್ಕೂ ಹೆಚ್ಚಾಗಬಹುದು ಎಂದು ಹೇಳಿದರು. ಅದೇ ಸಮಯದಲ್ಲಿ ಅಪಘಾತ ಸ್ಥಳದಲ್ಲಿ ಉಪಸ್ಥಿತರಿದ್ದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಬ್ಯಾನರ್ಜಿ ಅವರ ಹೇಳಿಕೆಯನ್ನು ತಳ್ಳಿಹಾಕಿದರು. ಆ ಸಮಯದಲ್ಲಿ ಸಾವಿನ ಸಂಖ್ಯೆ 238 ಆಗಿತ್ತು ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಮತ್ತು ಒಡಿಶಾ ರಾಜ್ಯ ಸರ್ಕಾರ ತಳ್ಳಿಹಾಕಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದೆ.

ಈ ಬಗ್ಗೆ ಜೂನ್ 4ರಂದು ಭಾನುವಾರ ಕೋಲ್ಕತ್ತಾದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ ಮಮತಾ ಬ್ಯಾನರ್ಜಿ ಅವರು, ”ಸಾವಿನ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳವೊಂದರಲ್ಲೇ 182 ಜನರು ನಾಪತ್ತೆಯಾಗಿದ್ದಾರೆ ಮತ್ತು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಹಾಗಾದರೆ, 121 ಜನರ ಅಂಕಿಅಂಶಗಳು ಎಲ್ಲಿ ಹೋದವು?” ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಈ ಆರೋಪವನ್ನು ಒಡಿಶಾ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಪ್ಪಿಲ್ಲ. ದುರಂತದ ಸಂದರ್ಭದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್, ”ಮಮತಾ ಬ್ಯಾನರ್ಜಿ ಅವರು ತಮ್ಮ ಮಮತೆಯನ್ನು (ಪ್ರೀತಿ) ಕಳೆದುಕೊಂಡಿದ್ದಾರೆ. ಬಿಜೆಪಿ ಆಡಳಿತ ನಡೆಸದ ಒಡಿಶಾ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ನೀಡಿದೆ” ಎಂದಿದ್ದಾರೆ.

ಈ ಬಗ್ಗೆ ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ ಅವರು ಸೋಮವಾರ ಪ್ರತಿಕ್ರಿಯಿಸಿದ್ದು, ”ರಾಜ್ಯ ಸರ್ಕಾರಕ್ಕೆ ಸತ್ತವರ ಸಂಖ್ಯೆಯನ್ನು ಮರೆಮಾಚುವ ಉದ್ದೇಶವಿಲ್ಲ. ಸಂಪೂರ್ಣ ರಕ್ಷಣಾ ಕಾರ್ಯಾಚರಣೆಯು ಸಾರ್ವಜನಿಕ ವೀಕ್ಷಣೆಯಲ್ಲಿ ನಡೆಯುತ್ತಿದೆ ಮತ್ತು ಮಾಧ್ಯಮ ಪ್ರವೇಶಕ್ಕೆ ಯಾವುದೇ ನಿರ್ಬಂಧಗಳಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಸಾವಿನ ಸಂಖ್ಯೆ 288 ಎಂದು ಹೇಳಲಾಗಿತ್ತು, ಆದರೆ ಬಾಲಸೋರ್ ಜಿಲ್ಲಾಧಿಕಾರಿ ಮತ್ತೊಮ್ಮೆ ಸಾವಿನ ಸಂಖ್ಯೆಯನ್ನು ಪರಿಶೀಲಿಸಿದ್ದಾರೆ ಭಾನುವಾರ ಬೆಳಿಗ್ಗೆ 275 ರಷ್ಟಿದೆ ಎಂದು ಹೇಳಲಾಗಿದೆ. ಇದು ಅನುಮಾನಕ್ಕೆ ಕಾರಣವಾಗಿದೆ.

ಈ ಸಂಖ್ಯೆಗಳಲ್ಲಿನ ಬದಲಾವಣೆಯ ಬಗ್ಗೆ ಜೆನಾ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಸತ್ತವರ ಕೆಲವು ದೇಹಗಳನ್ನು ದ್ವಿಗುಣವಾಗಿ ಎಣಿಸಲಾಗಿದೆ, ಅದಕ್ಕಾಗಿಯೇ ಆರಂಭದಲ್ಲಿ ಹೆಚ್ಚಿನ ಸಂಖ್ಯೆ ಇತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...